ಸ್ಟಂಟ್ ಮಾಸ್ಟರ್ ಮೋಹನ್ ರಾಜ್ ಹಾಗೂ ನಿರ್ದೇಶಕ ಪಾ ರಂಜಿತ್ ಸಾಂದರ್ಭಿಕ ಚಿತ್ರ 
ದೇಶ

Vettuvam ಸಾಹಸ ದೃಶ್ಯದ ಚಿತ್ರೀಕರಣ ವೇಳೆ ಸ್ಟಂಟ್ ಮಾಸ್ಟರ್ ಸಾವು; ನಿರ್ದೇಶಕ ಪಾ ರಂಜಿತ್ ಸೇರಿ ನಾಲ್ವರ ವಿರುದ್ಧ ಕೇಸ್ ದಾಖಲು!

ಮೋಹನ್ ರಾಜ್ ಚಲಾಯಿಸುತ್ತಿದ್ದ ಕಾರು ಎತ್ತರಕ್ಕೆ ಹಾರಿ ನೆಲಕ್ಕೆ ಬರುವಂತೆ ಚಿತ್ರೀಕರಣ ಮಾಡಲಾಗಿತ್ತು. ಈ ವೇಳೆ ಅಪಾಯಕಾರಿ ಸಾಹಸ ಮೋಹನ್ ಸಾವಿನೊಂದಿಗೆ ಅಂತ್ಯವಾಗಿದೆ.

'ವೆಟ್ಟುವಂ' ಚಿತ್ರದ ಸಾಹಸ ದೃಶ್ಯದ ಚಿತ್ರೀಕರಣ ವೇಳೆಯಲ್ಲಿ ಜನಪ್ರಿಯ ಸ್ಟಂಟ್ ಮಾಸ್ಟರ್ ಮೋಹನ್ ರಾಜ್ ಸಾವಿಗೆ ಸಂಬಂಧಿಸಿದಂತೆ ನಿರ್ದೇಶಕ ಪಾ ರಂಜಿತ್ ವಿರುದ್ಧ ಪ್ರಕರಣ ದಾಖಲಾಗಿದೆ. ಭಾನುವಾರ ಈ ಅಪಘಾತ ನಡೆದಿತ್ತು.

ಮೋಹನ್ ರಾಜ್ ಚಲಾಯಿಸುತ್ತಿದ್ದ ಕಾರು ಎತ್ತರಕ್ಕೆ ಹಾರಿ ನೆಲಕ್ಕೆ ಬರುವಂತೆ ಚಿತ್ರೀಕರಣ ಮಾಡಲಾಗಿತ್ತು. ಈ ವೇಳೆ ಅಪಾಯಕಾರಿ ಸಾಹಸ ಮೋಹನ್ ಸಾವಿನೊಂದಿಗೆ ಅಂತ್ಯವಾಗಿದೆ.

ಅಪಘಾತ ಸಂಭವಿಸಿದ ನಂತರ ಆರಂಭಿಕವಾಗಿ ಎಫ್ ಐಆರ್ ದಾಖಲಿಸಲಾಗಿತ್ತು. ಆದರೆ ಸಂಬಂಧಿತ ವ್ಯಕ್ತಿಗಳು ಸೇರಿದಂತೆ ಹೆಚ್ಚುವರಿ ಆರೋಪಗಳನ್ನು ಸೇರಿಸಲಾಗಿದೆ.

ನಿರ್ದೇಶಕ ಪಾ ರಂಜಿತ್, ನೀಲಂ ಪ್ರೊಢಕ್ಷನ್ ಎಕ್ಸಿಕ್ಯೂಟಿವ್ ರಾಜ್ ಕಮಲ್, ಸ್ಟಂಟ್ ಕಲಾವಿದ ವಿನೋತ್ ಮತ್ತು ಕಾರಿನ ಮಾಲೀಕ ಪ್ರಭಾಕರನ್ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 106 (1), 289 ಮತ್ತು 125ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಸೆಕ್ಷನ್ 106(1) ನಿರ್ಲಕ್ಷದಿಂದ ಸಾವಿಗೆ ಕಾರಣವಾಗುವುದಕ್ಕೆ ಸಂಬಂಧಿಸಿದ್ದು, ಆರೋಪ ಸಾಬೀತಾದರೆ ಐದು ವರ್ಷ ಜೈಲು ಶಿಕ್ಷೆ ಹಾಗೂ ದಂಡಕ್ಕೆ ಅರ್ಹರಾಗಿರುತ್ತಾರೆ. ಗೊತ್ತಿದ್ದು ಅಥವಾ ನಿರ್ಲಕ್ಷ್ಯದಿಂದ ಬೇರೊಬ್ಬ ವ್ಯಕ್ತಿಗೆ ಹಾನಿ ಅಥವಾ ಗಾಯ ಉಂಟುಮಾಡಿದರೆ ಅಂತಹವರ ವಿರುದ್ಧ ಸೆಕ್ಷನ್ 289 ಅಡಿ ಆರು ತಿಂಗಳು ಜೈಲು ಶಿಕ್ಷೆ ಮತ್ತು ಐದು ಸಾವಿರ ದಂಡ ಶಿಕ್ಷೆ ವಿಧಿಸಲಾಗುತ್ತದೆ.

ಇನ್ನೂ ಸೆಕ್ಷನ್ 125 ಇತರರ ಜೀವನ ಅಥವಾ ವೈಯಕ್ತಿಕ ಸುರಕ್ಷತೆಗೆ ಅಪಾಯವನ್ನುಂಟು ಮಾಡುವುದಕ್ಕೆ ಸಂಬಂಧಿಸಿದೆ. ಇದರಡಿ ಮೂರು ತಿಂಗಳಿನಿಂದ ಆರು ತಿಂಗಳವರೆಗೂ ಜೈಲು ಶಿಕ್ಷೆ ಹಾಗೂ 2,500 ರಿಂದ 5,000 ವರೆಗೂ ದಂಡ ವಿಧಿಸಲಾಗುತ್ತದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುಕ್ರೇನ್-ರಷ್ಯಾ ಯುದ್ಧದ ಕುರಿತು ಫ್ರಾನ್ಸ್ ಅಧ್ಯಕ್ಷ ಮ್ಯಾಕ್ರನ್ ಜೊತೆ ಮೋದಿ ಮಹತ್ವದ ಮಾತುಕತೆ

ಗುಜರಾತ್: ರಾಹುಲ್ ಗಾಂಧಿ ಪರ ವಕಾಲತ್ತು ವಹಿಸಿದ್ದ ವಕೀಲ ಫಿರೋಜ್ ಪಠಾಣ್ ಮೃತದೇಹ ತಾಪಿ ನದಿಯ ದಡದಲ್ಲಿ ಪತ್ತೆ!

ಭಾರತಕ್ಕೆ ಉತ್ತಮ ವಿರೋಧಪಕ್ಷಕ್ಕಾಗಿ ಅಭಿಯಾನ ಅಗತ್ಯ: ಸೀತಾರಾಮನ್

ಧರ್ಮಸ್ಥಳ ಬುರುಡೆ ರಹಸ್ಯ ಬಹಿರಂಗ: ಮುಸುಕುಧಾರಿಗೆ 'ಬುರುಡೆ' ಕೊಟ್ಟಿದ್ದು ಸೌಜನ್ಯ ಮಾವ!

ಆಲಮಟ್ಟಿ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಸಿಎಂ; ಕೃಷ್ಣಾ ಮೇಲ್ದಂಡೆ ಯೋಜನೆ 3ನೇ ಹಂತ ಅನುಷ್ಠಾನ

SCROLL FOR NEXT