ನಿಮಿಷ ಪ್ರಿಯಾ  online desk
ದೇಶ

ಯೆಮನ್‌ನಲ್ಲಿ ಕೇರಳದ ನರ್ಸ್ ನಿಮಿಷ ಪ್ರಿಯಾ ಮರಣದಂಡನೆ ಮುಂದೂಡಿಕೆ: ಮೂಲಗಳು

ಯೆಮನ್ ಆಡಳಿತವು ಬುಧವಾರ (ಜುಲೈ 16) ದಂದು ನಿಮಿಷ ಅವರಿಗೆ ಮರಣ ದಂಡನೆ ಜಾರಿಗೆ ಸಮಯ ನಿಗದಿಪಡಿಸಿತ್ತು.

ನವದೆಹಲಿ: ಯೆಮೆನ್‌ನಲ್ಲಿ ಸ್ಥಳೀಯ ಪ್ರಜೆಯನ್ನು ಕೊಲೆ ಮಾಡಿದ ಆರೋಪದಲ್ಲಿ ಶಿಕ್ಷೆಗೆ ಗುರಿಯಾಗಿರುವ ಕೇರಳದ ನರ್ಸ್ ನಿಮಿಷಾ ಪ್ರಿಯಾ ಅವರ ಮರಣದಂಡನೆಯನ್ನು ಮುಂದೂಡಲಾಗಿದೆ ಎಂದು ಮೂಲಗಳು ತಿಳಿಸಿವೆ.

ಯೆಮನ್ ಆಡಳಿತವು ಬುಧವಾರ (ಜುಲೈ 16) ದಂದು ನಿಮಿಷ ಅವರಿಗೆ ಮರಣ ದಂಡನೆ ಜಾರಿಗೆ ಸಮಯ ನಿಗದಿಪಡಿಸಿತ್ತು.

ನಿಮಿಷ ಪ್ರಿಯಾ ಅವರನ್ನು ರಕ್ಷಿಸುವ ನಿಟ್ಟಿನಲ್ಲಿ ಕೇರಳದ ಪ್ರಭಾವಿ ಸುನ್ನಿ ಮುಸ್ಲಿಂ ಧಾರ್ಮಿಕ ಗುರು ಕಾಂತಪುರಂ ಎಪಿ ಅಬೂಬಕ್ಕರ್ ಮುಸ್ಲಿಯಾರ್ ಅವರ ಮಧ್ಯಪ್ರವೇಶ ಸೇರಿದಂತೆ ವಿವಿಧ ಕಡೆಗಳಿಂದ ನಿರಂತರ ರಾಜತಾಂತ್ರಿಕ ಪ್ರಯತ್ನಗಳ ನಂತರ, ಯೆಮೆನ್ ಸ್ಥಳೀಯ ಅಧಿಕಾರಿಗಳು ಮರಣದಂಡನೆಯನ್ನು ವಿಳಂಬಗೊಳಿಸಲು ಒಪ್ಪಿಕೊಂಡಿದ್ದಾರೆ ಎಂದು ಹೆಸರು ಬಹಿರಂಗಪಡಿಸಲು ಇಚ್ಚಿಸದ ಅಧಿಕಾರಿಗಳು ದೃಢಪಡಿಸಿದ್ದಾರೆ.

'ಈ ಪ್ರಕರಣದ ಆರಂಭದಿಂದಲೂ ಭಾರತ ಸರ್ಕಾರವು ಸಾಧ್ಯವಿರುವ ಎಲ್ಲ ರೀತಿಯ ಸಹಾಯ ಮಾಡುತ್ತಿದ್ದು, ಇತ್ತೀಚೆಗೆ ನಿಮಿಷ ಪ್ರಿಯಾ ಅವರ ಕುಟುಂಬವು ಸಂತ್ರಸ್ತರ ಕುಟುಂಬದೊಂದಿಗೆ ಇತ್ಯರ್ಥ ಅಥವಾ ಒಪ್ಪಂದ ಮಾಡಿಕೊಳ್ಳುವ ಸಲುವಾಗಿ ಮಾತುಕತೆ ನಡೆಸಲು ಹೆಚ್ಚಿನ ಸಮಯ ಕೋರಲು ಸಂಘಟಿತ ಪ್ರಯತ್ನಗಳನ್ನು ಮಾಡಿದೆ' ಎಂದು ಮೂಲವೊಂದು ತಿಳಿಸಿದೆ.

ರಾಜತಾಂತ್ರಿಕ ಸೂಕ್ಷ್ಮತೆಗಳು ಮತ್ತು ಸಂಕೀರ್ಣ ಕಾನೂನು ಹಿನ್ನೆಲೆಯ ಹೊರತಾಗಿಯೂ, ಭಾರತೀಯ ಅಧಿಕಾರಿಗಳು ಯೆಮೆನ್ ಜೈಲು ಅಧಿಕಾರಿಗಳು ಮತ್ತು ಪ್ರಾಸಿಕ್ಯೂಟರ್ ಕಚೇರಿಯೊಂದಿಗೆ ನಿಕಟ ಸಂಪರ್ಕದಲ್ಲಿದ್ದಾರೆ ಎಂದು ಅವರು ಹೇಳಿದರು.

ನಿಮಿಷ ಪ್ರಿಯಾ ಯೆಮೆನ್ ಪ್ರಜೆಯೊಬ್ಬರ ಸಾವಿಗೆ ಸಂಬಂಧಿಸಿದಂತೆ ಶಿಕ್ಷೆಗೊಳಗಾಗಿದ್ದು, ಗಲ್ಲುಶಿಕ್ಷೆಗೆ ಗುರಿಯಾಗಿದ್ದಾರೆ. ಈ ಪ್ರಕರಣವು ಭಾರತ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ವ್ಯಾಪಕ ಗಮನ ಸೆಳೆದಿದ್ದು, ವಿವಿಧ ಕಡೆಗಳಿಂದ ಕ್ಷಮಾದಾನ ಮತ್ತು ರಾಜತಾಂತ್ರಿಕ ಹಸ್ತಕ್ಷೇಪಕ್ಕಾಗಿ ಮನವಿಗಳು ಬಂದಿವೆ.

ನಿಮಿಷ ಅವರ ಕುಟುಂಬ ಮತ್ತು ಇತರ ಕಾನೂನು ಪ್ರತಿನಿಧಿಗಳು ಯೆಮೆನ್‌ನಲ್ಲಿ ಮಾತುಕತೆಗಳನ್ನು ಮುಂದುವರಿಸುತ್ತಿರುವುದರಿಂದ ಹೆಚ್ಚಿನ ಬೆಳವಣಿಗೆಗಳನ್ನು ನಿರೀಕ್ಷಿಸಲಾಗಿದೆ.

ಯೆಮೆನ್‌ನಲ್ಲಿ ಶರಿಯಾ ಕಾನೂನು ಜಾರಿಯಲ್ಲಿದೆ. ಆರೋಪಿಗಳು ಪರಿಹಾರದ ರೂಪದಲ್ಲಿ ನೀಡುವ ಮೊತ್ತವಾದ 'ಬ್ಲಡ್ ಮನಿ' ಕೊಟ್ಟು ಶಿಕ್ಷೆಯಿಂದ ಪಾರಾಗಲು ಅವಕಾಶವಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಷ್ಯಾದಿಂದ ತೈಲ ಖರೀದಿಗೆ ಭಾರತಕ್ಕೆ ಶೇ.500ರಷ್ಟು ಸುಂಕ ಶಿಕ್ಷೆ: ಮಸೂದೆಗೆ Donald Trump ಗ್ರೀನ್ ಸಿಗ್ನಲ್!

ರಾಜ್ಯದಲ್ಲಿ ತೀವ್ರ ಚಳಿ: ಮುಂದಿನ ಏಳು ದಿನ ಉತ್ತರ ಒಳನಾಡಿನಲ್ಲಿ ಮತ್ತಷ್ಟು ಚಳಿ, ದಕ್ಷಿಣ ಒಳನಾಡಿನಲ್ಲಿ ಮಳೆ ನಿರೀಕ್ಷೆ!

ಬಳ್ಳಾರಿಯಲ್ಲಿ ಪೊಲೀಸ್ ಅಧಿಕಾರಿಗಳ ಸಭೆ ನಡೆಸೋಕೆ ಡಿ.ಕೆ. ಶಿವಕುಮಾರ್‌ ಯಾರು? ರಾಜ್ಯದಲ್ಲಿ ಇರೋದು ಹೆಬ್ಬೆಟ್ಟು ಗೃಹ ಸಚಿವರಾ?

ಹಿರಿಯ ಪರಿಸರ ವಿಜ್ಞಾನಿ ಡಾ. ಮಾಧವ ಗಾಡ್ಗೀಳ್ ನಿಧನ!

ಕೋಗಿಲು ವಿವಾದ: ಅಕ್ರಮ ಮನೆ ನಿರ್ಮಾಣ ಆರೋಪ, ನಾಲ್ವರ ವಿರುದ್ಧ FIR ದಾಖಲು!

SCROLL FOR NEXT