ಶುಭಾಂಶು ಶುಕ್ಲಾ 
ದೇಶ

ಶುಭಾಂಶು ಶುಕ್ಲಾ ಆಗಸ್ಟ್ 17 ರೊಳಗೆ ಭಾರತಕ್ಕೆ ಆಗಮಿಸುವ ಸಾಧ್ಯತೆ

ಇಂದು ಮಧ್ಯಾಹ್ನ 3 ಗಂಟೆ 2 ನಿಮಿಷಕ್ಕೆ ಶುಕ್ಲಾ ಸೇರಿದಂತೆ ನಾಲ್ವರು ಗಗನಯಾತ್ರಿಗಳು ಅಮೆರಿಕದ ಕ್ಯಾಲಿಫೋರ್ನಿಯಾ ಕರಾವಳಿಯಲ್ಲಿ ಯಶಸ್ವಿಯಾಗಿ ಸ್ಪ್ಲಾಷ್‌ ಲ್ಯಾಂಡ್‌ ಆಗಿದ್ದಾರೆ.

ನವದೆಹಲಿ: ಆಕ್ಸಿಯೋಂ-4 ಮಿಷನ್‌ ಭಾಗವಾಗಿ ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ(ISS) 18 ದಿನಗಳ ವಾಸ್ತವ್ಯದ ನಂತರ ಮಂಗಳವಾರ ಭೂಮಿಗೆ ಮರಳಿರುವ ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ ಅವರು ಆಗಸ್ಟ್ 17 ರೊಳಗೆ ಭಾರತಕ್ಕೆ ಆಗಮಿಸುವ ನಿರೀಕ್ಷೆಯಿದೆ ಎಂದು ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಅವರು ಹೇಳಿದ್ದಾರೆ.

ಭಾರತೀಯ ಕಾಲಮಾನದ ಪ್ರಕಾರ, ಇಂದು ಮಧ್ಯಾಹ್ನ 3 ಗಂಟೆ 2 ನಿಮಿಷಕ್ಕೆ ಶುಕ್ಲಾ ಸೇರಿದಂತೆ ನಾಲ್ವರು ಗಗನಯಾತ್ರಿಗಳು ಅಮೆರಿಕದ ಕ್ಯಾಲಿಫೋರ್ನಿಯಾ ಕರಾವಳಿಯಲ್ಲಿ ಯಶಸ್ವಿಯಾಗಿ ಸ್ಪ್ಲಾಷ್‌ ಲ್ಯಾಂಡ್‌ ಆಗಿದ್ದಾರೆ.

"ಭೂಮಿ ಆಗಮಿಸಿದ ನಂತರ ಅವರು ಕೆಲವು SOP ಗಳನ್ನು ಅನುಸರಿಸಬೇಕಾಗಿದೆ... ಅವರ ಪುನಶ್ಚೇತನ, ವಿವರಣೆ ಅವಧಿಗಳು ಮತ್ತು ಇಸ್ರೋ ಜೊತೆ ಸರಣಿ ಚರ್ಚೆಗಳ ನಂತರ ಆಗಸ್ಟ್ 17 ರೊಳಗೆ ದೆಹಲಿಗೆ ಆಗಮಿಸುವ ನಿರೀಕ್ಷೆ ಇದೆ" ಎಂದು ಸಿಂಗ್ ಪಿಟಿಐ ತಿಳಿಸಿದ್ದಾರೆ.

ಈ ಕಾರ್ಯಾಚರಣೆಯನ್ನು "ಅಭೂತಪೂರ್ವ" ಎಂದು ಕರೆದ ಸಿಂಗ್, ಕಕ್ಷೆಯ ಪ್ರಯೋಗಾಲಯದಲ್ಲಿ ಶುಕ್ಲಾ ಅವರು ನಡೆಸಿದ ಪ್ರಯೋಗಗಳು ಭಾರತೀಯರಿಗೆ ಮಾತ್ರವಲ್ಲ, ಎಲ್ಲಾ ಮಾನವೀಯತೆಗೆ ಉಪಯುಕ್ತವಾಗುತ್ತವೆ" ಎಂದು ಹೇಳಿದರು.

"ಭಾರತ ಮಾತೆಯ ಹೆಮ್ಮೆಯ ಪುತ್ರ ಇಂದು ಯಶಸ್ವಿಯಾಗಿ ಭೂಮಿಗೆ ಮರಳಿರುವುದು ಭಾರತಕ್ಕೆ ಅಪಾರ ಸಂತೋಷದ ಕ್ಷಣವಾಗಿದೆ" ಎಂದು ಸಿಂಗ್ ಹೇಳಿದರು.

ಆಕ್ಸಿಯಮ್-4 ವಾಣಿಜ್ಯ ಕಾರ್ಯಾಚರಣೆಯ ನೇತೃತ್ವವನ್ನು ಕಮಾಂಡರ್ ಪೆಗ್ಗಿ ವಿಟ್ಸನ್ ವಹಿಸಿದ್ದು, ಶುಕ್ಲಾ ಮಿಷನ್ ಪೈಲಟ್ ಆಗಿ ಮತ್ತು ಹಂಗೇರಿಯನ್ ಗಗನಯಾತ್ರಿ ಟಿಬೋರ್ ಕಾಪು ಮತ್ತು ಪೋಲಿಷ್ ಗಗನಯಾತ್ರಿ ಸ್ಲಾವೋಸ್ಜ್ ಉಜ್ನಾನ್ಸ್ಕಿ-ವಿಸ್ನಿಯೆವ್ಸ್ಕಿ ಮಿಷನ್ ತಜ್ಞರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ಆಕ್ಸಿಯಮ್-4 ಕಾರ್ಯಾಚರಣೆಯು ಅಮೆರಿಕ, ಭಾರತ, ಪೋಲೆಂಡ್, ಹಂಗೇರಿ, ಸೌದಿ ಅರೇಬಿಯಾ, ಬ್ರೆಜಿಲ್, ನೈಜೀರಿಯಾ, ಯುಎಇ ಸೇರಿ 31 ದೇಶಗಳ 60 ವೈಜ್ಞಾನಿಕ ಅಧ್ಯಯನಗಳನ್ನು ಒಳಗೊಂಡಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಭಾರತೀಯ ಸೇನೆ ಸಹ ಮೇಲ್ಜಾತಿಯವರಿಂದ ನಿಯಂತ್ರಿಸಲ್ಪಡುತ್ತದೆ': ರಾಹುಲ್ ಗಾಂಧಿಯಿಂದ ಹೊಸ ವಿವಾದ

ರಾಜ್ಯದ ಜನಸಂಖ್ಯೆಯ ಶೇ. 60 ಕ್ಕಿಂತ ಹೆಚ್ಚು ಜನರು 35 ರ ವಯೋಮಾನದವರು- ಸಿಎಂ ಸಿದ್ದರಾಮಯ್ಯ

ಸಾರ್ವಜನಿಕ ಸ್ಥಳಗಳಲ್ಲಿ ಖಾಸಗಿ ಸಂಸ್ಥೆಗಳ ಚಟುವಟಿಕೆಗೆ ನಿರ್ಬಂಧ: ತಡೆಯಾಜ್ಞೆ ವಿರೋಧಿಸಿ ಸರ್ಕಾರದ ಮೇಲ್ಮನವಿ; 'ಆದೇಶ ಕಾಯ್ದಿರಿಸಿದ' ಹೈಕೋರ್ಟ್

ಏಷ್ಯಾ ಕಪ್ ವಿವಾದ: ಪಾಕ್ ಕ್ರಿಕೆಟಿಗ ಹ್ಯಾರಿಸ್ ರೌಫ್‌ಗೆ ಐಸಿಸಿ ಕಠಿಣ ಶಿಕ್ಷೆ, ಸೂರ್ಯಕುಮಾರ್ ಯಾದವ್‌ಗೆ ದಂಡ

ಭಾರತ ಸದ್ಯದಲ್ಲೇ ವಿಶ್ವದ ಮೂರನೇ ಅತಿ ದೊಡ್ಡ ಆರ್ಥಿಕತೆಯಾಗಲಿದೆ- ಕೇಂದ್ರ ಹಣಕಾಸು ಸಚಿವೆ

SCROLL FOR NEXT