ಸಾಂದರ್ಭಿಕ ಚಿತ್ರ 
ದೇಶ

ಘಾಜಿಯಾಬಾದ್‌: ಇನ್‌ಸ್ಟಾಗ್ರಾಂ ಪರಿಚಯ ತಂದ ಕುತ್ತು; ವಿದ್ಯಾರ್ಥಿನಿ ಮೇಲೆ ಅತ್ಯಾಚಾರ; ನಾಲ್ವರು ಬಾಲಕರ ವಿರುದ್ಧ ದೂರು

ನಾಲ್ವರಲ್ಲಿ ಮೂವರು ಬಾಲಕರು ಸಂತ್ರಸ್ತೆಯ ಶಾಲೆಯಲ್ಲೇ ಓದುತ್ತಿದ್ದು, ಪರಿಚಿತರಾಗಿದ್ದಾರೆ. ಭಾನುವಾರ ಬೆಳಿಗ್ಗೆ ಘಟನೆ ನಡೆದಿದ್ದು, ಆ ಸಂದರ್ಭದಲ್ಲಿ ಬಾಲಕಿ ಮನೆಯಲ್ಲಿ ಒಬ್ಬಳೇ ಇದ್ದಳು.

ಘಾಜಿಯಾಬಾದ್‌: ದೆಹಲಿಯ ಘಾಜಿಯಾಬಾದ್‌ನಲ್ಲಿ 9 ತರಗತಿ ವಿದ್ಯಾರ್ಥಿನಿಯ ಮೇಲೆ ಆಕೆ ಮನೆಯಲ್ಲೇ ಅತ್ಯಾಚಾರ ಎಸಗಿದ ಆರೋಪದಡಿ ನಾಲ್ವರು ಬಾಲಕರ ವಿರುದ್ಧ ದೂರು ದಾಖಲಿಸಿಕೊಂಡ ಪೊಲೀಸರು ತನಿಖೆ ಆರಂಭಿಸಿದ್ದಾರೆ.

ನಾಲ್ವರಲ್ಲಿ ಮೂವರು ಬಾಲಕರು ಸಂತ್ರಸ್ತೆಯ ಶಾಲೆಯಲ್ಲೇ ಓದುತ್ತಿದ್ದು, ಪರಿಚಿತರಾಗಿದ್ದಾರೆ. ಭಾನುವಾರ ಬೆಳಿಗ್ಗೆ ಘಟನೆ ನಡೆದಿದ್ದು, ಆ ಸಂದರ್ಭದಲ್ಲಿ ಬಾಲಕಿ ಮನೆಯಲ್ಲಿ ಒಬ್ಬಳೇ ಇದ್ದಳು. ತಾಯಿ ಮಾರುಕಟ್ಟೆಗೆ ಹೋಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಇನ್‌ಸ್ಟಾಗ್ರಾಂನಲ್ಲಿ ಪರಿಚಯವಾದ ಬಾಲಕನಿಗೆ ಸಂತ್ರಸ್ತೆ ಆಗಾಗ್ಗ ಸಂದೇಶ ಕಳುಹಿಸುತ್ತಿದ್ದಳು. ಭಾನುವಾರ ಬೆಳಿಗ್ಗೆ 11.30ಕ್ಕೆ ಆತ ಇವರ ಮನೆಗೆ ಬಂದು ಬಾಗಿಲು ಬಡಿದಿದ್ದಾನೆ. ಜತೆಗೆ ತನ್ನೊಂದಿಗೆ ಇತರ ಮೂವರನ್ನೂ ಕರೆದುಕೊಂಡು ಬಂದಿದ್ದಾನೆ. ಬಾಲಕಿಯನ್ನು ಬಲವಂತವಾಗಿ ಕೊಠಡಿಗೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾರೆ ಎಂದು ಪೊಲೀಸರು ಘಟನೆಯನ್ನು ವಿವರಿಸಿದ್ದಾರೆ.

ಇದೇ ಸಂದರ್ಭದಲ್ಲಿ ಮಾರುಕಟ್ಟೆಗೆ ಹೋಗಿದ್ದ ತಾಯಿ ಮನೆಗೆ ಮರಳಿದ್ದಾರೆ. ಬಾಗಿಲು ತೆರೆದಿದ್ದನ್ನು ಕಂಡು ಗಾಬರಿಯಾದ ಅವರು, ನೇರವಾಗಿ ಕೋಣೆಗೆ ಹೋಗಿದ್ದಾರೆ. ಅಲ್ಲಿ ಬಾಲಕಿಯೊಂದಿಗೆ ನಾಲ್ವರು ಹುಡುಗರನ್ನು ಕಂಡ ಅವರು, ತಕ್ಷಣ ಕೊಠಡಿಯ ಬಾಗಿಲು ಹಾಕಿ ಬೀಗ ಹಾಕಿ, ಪೊಲೀಸರಿಗೆ ಮಾಹಿತಿ ನೀಡಿದ್ದಾರೆ ಎಂದು ತಿಳಿಸಿದ್ದಾರೆ.

ಪೊಲೀಸರು ಮನೆಗೆ ಬರುವುದರೊಳಗಾಗಿ ವಸತಿ ಸಮುಚ್ಚಯದ ಆಡಳಿತ ಮಂಡಳಿಯ ಸದಸ್ಯರು ಬಾಲಕಿ ಮನೆಗೆ ತೆರಳಿ, ಬಾಲಕರನ್ನು ಬಿಡಿಸಿ ಹೊರಕ್ಕೆ ಕಳುಹಿಸಿದ್ದಾರೆ. ಬಾಲಕಿಯ ತಂದೆ ನಾಲ್ವರು ಹುಡುಗರ ವಿರುದ್ಧ ದೂರು ನೀಡಿ ಪ್ರಕರಣ ದಾಖಲಿಸಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಆರೋಪಿತ ಬಾಲಕರು 11, 10 ಹಾಗೂ 9 ನೇ ತರಗತಿಯವರಾಗಿದ್ದಾರೆ. ಬಾಲಕಿಯನ್ನು ವೈದ್ಯಕೀಯ ತಪಾಸಣೆಗೆ ಕಳುಹಿಸಲಾಗಿದೆ. ಹೇಳಿಕೆಯನ್ನು ಈವರೆಗೂ ದಾಖಲಿಸಿಕೊಂಡಿಲ್ಲ. ಆರೋಪಿತರ ಬಂಧನ ಈವರೆಗೂ ಆಗಿಲ್ಲ. ಪ್ರಕರಣ ತನಿಖೆಯ ಹಂತದಲ್ಲಿದೆ

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

IndiGo ಅವಾಂತರ ತಹಬದಿಗೆ: ಅಡಚಣೆ ಪ್ರಮಾಣ ಇಳಿಕೆ; 'ಹಂತಹಂತವಾಗಿ ಮರಳುತ್ತಿದ್ದೇವೆ' ಎಂದ CEO

LeT ಜೊತೆಗೆ ಒಪ್ಪಂದ; ಹಮಾಸ್ 'ಭಯೋತ್ಪಾದಕ ಸಂಘಟನೆ' ಎಂದು ಘೋಷಿಸಿ; ಭಾರತಕ್ಕೆ ಇಸ್ರೇಲ್ ಒತ್ತಾಯ!

ರಾಷ್ಟ್ರ ಪ್ರಶಸ್ತಿ ವಿಜೇತ ಚಿತ್ರ: 'ತಿಥಿ' ಹೀರೋಗೆ ಇಂದೆಂಥಾ ಸ್ಥಿತಿ?, ಅಭಿ ಈಗ ದಿನಗೂಲಿ ಕಾರ್ಮಿಕ!

ಮದುವೆ ರದ್ದು ಬೆನ್ನಲ್ಲೇ ಪರಸ್ಪರ 'ಅನ್‌ಫಾಲೋ' ಮಾಡಿಕೊಂಡ ಸ್ಮೃತಿ ಮಂಧಾನ, ಪಲಾಶ್ ಮುಚ್ಚಲ್!

Goa nightclub fire: ರೆಸ್ಟೋರೆಂಟ್‌ ಮಾಲೀಕ, ಕಾರ್ಯಕ್ರಮ ಆಯೋಜಕರ ವಿರುದ್ಧ FIR; ಸರಪಂಚ್ ಬಂಧನ!

SCROLL FOR NEXT