ರಾಹುಲ್ ಗಾಂಧಿ-ಮಲ್ಲಿಕಾರ್ಜುನ ಖರ್ಗೆ  
ದೇಶ

'ಹೆದರಬೇಡಿ' ಎಂದು ಅಸ್ಸಾಂ ಜನತೆಗೆ ಸಂದೇಶ ನೀಡಲು ಖರ್ಗೆ, ರಾಹುಲ್ ಇಲ್ಲಿಗೆ ಬರುತ್ತಿದ್ದಾರೆ: ಗೌರವ್ ಗೊಗೊಯ್

ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಭಯಭೀತರಾಗಿದ್ದಾರೆ. ಅತಿಕ್ರಮಣದಾರರಿಂದ ಭೂಮಿಯನ್ನು ಮರಳಿ ಪಡೆಯುವ ಬಗ್ಗೆ ಸಾಕಷ್ಟು ಹೇಳಿಕೆಗಳನ್ನು ನೀಡಿದ್ದಾರೆ.

ಗುವಾಹಟಿ: ಮುಂದಿನ ವರ್ಷ 2026 ರಲ್ಲಿ ನಡೆಯುವ ಅಸ್ಸಾಂ ವಿಧಾನಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಪಕ್ಷದ ನಾಯಕ ರಾಹುಲ್ ಗಾಂಧಿ ಇಂದು ಬುಧವಾರ ಗುವಾಹಟಿಗೆ ಆಗಮಿಸಿದರು.

ಇಂದು ಅವರು ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಸರಣಿ ಸಭೆಗಳನ್ನು ನಡೆಸಲಿದ್ದಾರೆ. ಹೊಸದಾಗಿ ಆಯ್ಕೆಯಾದ ರಾಜ್ಯಾಧ್ಯಕ್ಷ ಗೌರವ್ ಗೊಗೊಯ್ ಮಾಧ್ಯಮ ಪ್ರತಿನಿಧಿಗಳಿಗೆ ವಿವರ ನೀಡಿ, ಈ ಇಬ್ಬರೂ ನಾಯಕರು ಅಸ್ಸಾಂ ಜನತೆಗೆ ಧೈರ್ಯ ತುಂಬಲು ಬಂದಿದ್ದಾರೆ. ಇಲ್ಲಿನ ಜನರಿಗೆ ಅನ್ಯಾಯವಾಗಿದೆ. ಕಾಂಗ್ರೆಸ್ ಅವರೊಂದಿಗೆ ಯಾವಾಗಲೂ ನಿಂತು ಮುಕ್ತ ಧ್ವನಿಗಾಗಿ ಹೋರಾಡುತ್ತದೆ ಎಂದು ಭರವಸೆ ನೀಡಿದರು.

ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಭಯಭೀತರಾಗಿದ್ದಾರೆ. ಅತಿಕ್ರಮಣದಾರರಿಂದ ಭೂಮಿಯನ್ನು ಮರಳಿ ಪಡೆಯುವ ಬಗ್ಗೆ ಸಾಕಷ್ಟು ಹೇಳಿಕೆಗಳನ್ನು ನೀಡಿದ್ದಾರೆ. ಆದರೆ ಅವರು ಮತ್ತು ಅವರ ಸಂಪುಟದ ಹಲವು ಸಚಿವರು ಅತ್ಯಧಿಕ ಪ್ರಮಾಣದ ಭೂಮಿಯನ್ನು ಹೊಂದಿದ್ದಾರೆ ಎಂದು ಗೊಗೊಯ್ ಆರೋಪಿಸಿದರು.

ಆನೆ ಕಾರಿಡಾರ್‌ನಲ್ಲಿರುವ ರೆಸಾರ್ಟ್, ಚಹಾ ತೋಟಗಳು ಮತ್ತು ಹೋಟೆಲ್ ಸೇರಿದಂತೆ ಕೆಲವು ಆಸ್ತಿಗಳನ್ನು ಉಲ್ಲೇಖಿಸಿದರು. ಕಾನೂನುಗಳನ್ನು ಉಲ್ಲಂಘಿಸಿ ಕೃಷಿ ಭೂಮಿಯಲ್ಲಿ ಕೈಗಾರಿಕೆಗಳನ್ನು ಸ್ಥಾಪಿಸಲಾಗಿದೆ. ಸ್ಥಳೀಯ, ಬುಡಕಟ್ಟು ಮತ್ತು ಅಲ್ಪಸಂಖ್ಯಾತ ಸಮುದಾಯಗಳಿಗೆ ಸೇರಿದ 18,000 ಎಕರೆ ಭೂಮಿಯನ್ನು ಅಸ್ಸಾಂನ ಹೊರಗಿನ ಜನರಿಗೆ ನೀಡಲಾಗಿದೆ ಎಂದು ಅವರು ಆರೋಪಿಸಿದರು.

ಪಕ್ಷದ ನಾಯಕ ರಿಪುನ್ ಬೋರಾ, ಮಲ್ಲಿಕಾರ್ಜುನ ಖರ್ಗೆ ಮತ್ತು ರಾಹುಲ್ ಗಾಂಧಿ 2026 ರ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಅಸ್ಸಾಂಗೆ ಬಂದಿದ್ದಾರೆ. ಇಬ್ಬರೂ ಪಕ್ಷದ ಚುನಾವಣಾ ಸಿದ್ಧತೆಗಳನ್ನು ನಿರ್ಣಯಿಸುತ್ತಾರೆ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT