ಮಲ್ಲಿಕಾರ್ಜುನ ಖರ್ಗೆ 
ದೇಶ

ಕಾಂಗ್ರೆಸ್ ನಿಂದ ಓಡಿಹೋದ ವ್ಯಕ್ತಿಯೇ ಈಗ ಅಸ್ಸಾಂ ಮುಖ್ಯಮಂತ್ರಿ: ಹಿಮಂತ ವಿರುದ್ಧ ಖರ್ಗೆ ವಾಗ್ದಾಳಿ

2015 ರಲ್ಲಿ ಬಿಜೆಪಿ ಸೇರುವ ಮೊದಲು ಹಿಮಂತ ಶರ್ಮಾ ಅಸ್ಸಾಂನಲ್ಲಿ ಕಾಂಗ್ರೆಸ್ ಸರ್ಕಾರದಲ್ಲಿ ಸಚಿವರಾಗಿದ್ದರು.

ಚಾಯ್ಗಾಂವ್: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ವಿರುದ್ಧ ಬುಧವಾರ ತೀವ್ರ ವಾಗ್ದಾಳಿ ನಡೆಸಿದ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು, ಬಿಜೆಪಿ ರಾಜ್ಯದಲ್ಲಿ ಸರ್ಕಾರ ರಚಿಸಲು ನಮ್ಮ ಪಕ್ಷದ ಸದಸ್ಯರಿಗೆ ಅವಕಾಶ ನೀಡಬೇಕಾಯಿತು ಎಂದು ಹೇಳಿದ್ದಾರೆ.

ಒಂದು ದಿನ ಅಸ್ಸಾಂ ಪ್ರವಾಸದಲ್ಲಿರುವ ಮಲ್ಲಿಕಾರ್ಜುನ ಖರ್ಗೆ ಅವರು, "ಕಾಂಗ್ರೆಸ್ ಪಕ್ಷದಿಂದ ಓಡಿಹೋದ ವ್ಯಕ್ತಿಯೇ ಈಗ ರಾಜ್ಯದ ಮುಖ್ಯಮಂತ್ರಿಯಾಗಿದ್ದಾರೆ" ಎಂದರು.

2015 ರಲ್ಲಿ ಬಿಜೆಪಿ ಸೇರುವ ಮೊದಲು ಹಿಮಂತ ಶರ್ಮಾ ಅಸ್ಸಾಂನಲ್ಲಿ ಕಾಂಗ್ರೆಸ್ ಸರ್ಕಾರದಲ್ಲಿ ಸಚಿವರಾಗಿದ್ದರು.

ರಾಜ್ಯದಲ್ಲಿ ಪ್ರಸ್ತುತ ಬಿಜೆಪಿ ಸರ್ಕಾರ ಭ್ರಷ್ಟಾಚಾರದಲ್ಲಿ ತೊಡಗಿದೆ ಎಂದು ಆರೋಪಿಸಿದ ಖರ್ಗೆ, "ಜನರಿಗೆ ಅನ್ಯಾಯ ಮಾಡಿದವರನ್ನು ಜೈಲಿಗೆ ಕಳುಹಿಸಲಾಗುತ್ತದೆ. ಹೀಗಾಗಿ ಅವರು ಈಗ ಜೈಲುಗಳನ್ನು ದುರಸ್ತಿ ಮಾಡುತ್ತಿದ್ದಾರೆ. ಏಕೆಂದರೆ ಅವರು ಅಲ್ಲೇ ಇರಬೇಕಾಗುತ್ತದೆ" ಎಂದು ಟೀಕಿಸಿದರು.

ಅಸ್ಸಾಂನಲ್ಲಿ ಜನರನ್ನು "ಅಕ್ರಮ ವಲಸಿಗರನ್ನು ಪತ್ತೆಹಚ್ಚುವ ನೆಪದಲ್ಲಿ" ಬೆದರಿಕೆ ಹಾಕಲಾಗುತ್ತಿದೆ ಮತ್ತು ಮುಂದಿನ ವರ್ಷದ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಸರ್ಕಾರಕ್ಕೆ ಜನ ಪಾಠ ಕಲಿಸಲಿದ್ದಾರೆ ಎಂದರು.

ಅಸ್ಸಾಂನಲ್ಲಿ ನಡೆದ ತೆರವು ಕಾರ್ಯಾಚರಣೆಗಳ ಕುರಿತು ಮಾತನಾಡಿದ ಖರ್ಗೆ, ಕಾಂಗ್ರೆಸ್ ಪಕ್ಷವು ರಾಜ್ಯದಲ್ಲಿ ಸರ್ಕಾರ ರಚಿಸಿದರೆ, ಮನೆಗಳನ್ನು ಪುನರ್ನಿರ್ಮಿಸಲಾಗುವುದು ಮತ್ತು ಬಿಜೆಪಿ ಸರ್ಕಾರದ ಇಂತಹ ಕ್ರಮದಿಂದ ಹಾನಿಗೊಳಗಾದವರಿಗೆ ಪರಿಹಾರ ನೀಡುವುದಾಗಿ ಭರವಸೆ ನೀಡಿದರು.

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ, ಮಕ್ಕಳಿಗೆ ಶಿಕ್ಷಣ, ಅಸ್ಸಾಂನಲ್ಲಿ ಯುವಕರಿಗೆ ಉದ್ಯೋಗ ಮತ್ತು ಚಹಾ ತೋಟದ ಕೆಲಸಗಾರರಿಗೆ ಗರಿಷ್ಠ ವೇತನವನ್ನು ಖಾತರಿಪಡಿಸುತ್ತದೆ ಎಂದು ಖರ್ಗೆ ಹೇಳಿದರು.

ದಲಿತರು, ಎಸ್‌ಸಿ, ಎಸ್‌ಟಿ ಮತ್ತು ಒಬಿಸಿ ಸಮುದಾಯಗಳಿಗೆ ಸೇರಿದ ಜನ ಜಾಗರೂಕರಾಗಿರಬೇಕು. ಇಲ್ಲದಿದ್ದರೆ ಕೇಂದ್ರದ ಬಿಜೆಪಿ ಸರ್ಕಾರವು ನಿಮ್ಮ ಮೀಸಲಾತಿಯನ್ನು "ಕಿತ್ತುಕೊಳ್ಳುತ್ತದೆ" ಎಂದು ಖರ್ಗೆ ಎಚ್ಚರಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT