ಸಾಂದರ್ಭಿಕ ಚಿತ್ರ 
ದೇಶ

ಸೋಷಿಯಲ್ ಮೀಡಿಯಾದಲ್ಲಿ ತಪ್ಪು ಕನ್ನಡ ಅನುವಾದ ಬಗ್ಗೆ ಸಿಎಂ ಸಿದ್ದರಾಮಯ್ಯ ಪತ್ರ: Meta ಕ್ಷಮೆಯಾಚನೆ

ಈ ತಪ್ಪಾದ ಕನ್ನಡ ಅನುವಾದಕ್ಕೆ ಕಾರಣವಾದ ಸಮಸ್ಯೆಯನ್ನು ನಾವು ಸರಿಪಡಿಸಿದ್ದೇವೆ. ಇದು ಸಂಭವಿಸಿದ್ದಕ್ಕಾಗಿ ನಾವು ಕ್ಷಮೆಯಾಚಿಸುತ್ತೇವೆ ಎಂದು ಮೆಟಾ ವಕ್ತಾರರು ತಿಳಿಸಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಸೋಷಿಯಲ್ ಮೀಡಿಯಾ ವೇದಿಕೆಗಳಲ್ಲಿ ಕನ್ನಡ ವಿಷಯದ ದೋಷಯುಕ್ತ ಸ್ವಯಂ-ಅನುವಾದದ ಬಗ್ಗೆ ಕಳವಳ ವ್ಯಕ್ತಪಡಿಸಿದ ನಂತರ, ಸೋಷಿಯಲ್ ಮೀಡಿಯಾ ಕಂಪೆನಿ ಮೆಟಾ, ಕನ್ನಡದಲ್ಲಿ ತಪ್ಪಾಗಿ ಅನುವಾದ ಮಾಡಿದ್ದಕ್ಕಾಗಿ ಕ್ಷಮೆಯಾಚಿಸಿದೆ ಮತ್ತು ಸಮಸ್ಯೆಯನ್ನು ಸರಿಪಡಿಸಿರುವುದಾಗಿ ಹೇಳಿಕೊಂಡಿದೆ.

ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಮ್‌ನಂತಹ ಮೆಟಾ ಪ್ಲಾಟ್‌ಫಾರ್ಮ್‌ಗಳಲ್ಲಿ ಕನ್ನಡದಲ್ಲಿ ದೋಷಯುಕ್ತ ಸ್ವಯಂ-ಅನುವಾದದ ಬಗ್ಗೆ ಕಳವಳ ವ್ಯಕ್ತಪಡಿಸಿದ ಸಿದ್ದರಾಮಯ್ಯ, ಇದು ಸತ್ಯಗಳ ವಿರೂಪ ಮತ್ತು ಬಳಕೆದಾರರನ್ನು ದಾರಿತಪ್ಪಿಸಲು ಕಾರಣವಾಗುತ್ತಿದೆ ಎಂದು ಹೇಳಿದ್ದಾರೆ.

ಈ ತಪ್ಪಾದ ಕನ್ನಡ ಅನುವಾದಕ್ಕೆ ಕಾರಣವಾದ ಸಮಸ್ಯೆಯನ್ನು ನಾವು ಸರಿಪಡಿಸಿದ್ದೇವೆ. ಇದು ಸಂಭವಿಸಿದ್ದಕ್ಕಾಗಿ ನಾವು ಕ್ಷಮೆಯಾಚಿಸುತ್ತೇವೆ ಎಂದು ಮೆಟಾ ವಕ್ತಾರರು ತಿಳಿಸಿದ್ದಾರೆ.

ಸಾಮಾಜಿಕ ಮಾಧ್ಯಮ ವೇದಿಕೆಗಳು ಜವಾಬ್ದಾರಿಯುತವಾಗಿ ವರ್ತಿಸಬೇಕು, ವಿಶೇಷವಾಗಿ ಅಧಿಕೃತ ಸಂವಹನದೊಂದಿಗೆ ವ್ಯವಹರಿಸುವಾಗ ಈ ವೇದಿಕೆಗಳಲ್ಲಿ ಪ್ರದರ್ಶಿಸಲಾದ ಅನುವಾದಗಳು ಹೆಚ್ಚಾಗಿ ತಪ್ಪಾಗಿರುತ್ತವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದರು.

"ಮೆಟಾ ಪ್ಲಾಟ್‌ಫಾರ್ಮ್‌ಗಳಲ್ಲಿ ಕನ್ನಡ ವಿಷಯದ ದೋಷಯುಕ್ತ ಸ್ವಯಂ-ಅನುವಾದವು ಸತ್ಯಗಳನ್ನು ವಿರೂಪಗೊಳಿಸುತ್ತಿದೆ ಮತ್ತು ಬಳಕೆದಾರರನ್ನು ದಾರಿತಪ್ಪಿಸುತ್ತಿದೆ. ಅಧಿಕೃತ ಸಂವಹನಕ್ಕೆ ಬಂದಾಗ ಇದು ವಿಶೇಷವಾಗಿ ಅಪಾಯಕಾರಿ. ನನ್ನ ಸೋಷಿಯಲ್ ಮೀಡಿಯಾ ಸಲಹೆಗಾರರು ತಕ್ಷಣದ ತಿದ್ದುಪಡಿಯನ್ನು ಒತ್ತಾಯಿಸಿ ಮೆಟಾಗೆ ಔಪಚಾರಿಕವಾಗಿ ಪತ್ರ ಬರೆದಿದ್ದಾರೆ ಎಂದು ಸಿದ್ದರಾಮಯ್ಯ ಎಕ್ಸ್ ಪೋಸ್ಟ್ ನಲ್ಲಿ ತಿಳಿಸಿದ್ದರು.

ಜುಲೈ 16 ರಂದು ಮೆಟಾಗೆ ಕಳುಹಿಸಲಾದ ಇಮೇಲ್‌ನಲ್ಲಿ, ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ ವಿ ಪ್ರಭಾಕರ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಮ್‌ನಲ್ಲಿ ಕನ್ನಡ ವಿಷಯದ ಅನುವಾದದ ಬಗ್ಗೆ ಮುಖ್ಯಮಂತ್ರಿ ಪರವಾಗಿ ಗಂಭೀರ ಕಳವಳ ವ್ಯಕ್ತಪಡಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

ಬಾನು ಮುಷ್ತಾಕ್‌ ದಸರಾ ಉದ್ಘಾಟನೆಗೆ ಆಕ್ಷೇಪ; ಮುಸ್ಲಿಂ ದ್ವೇಷ ಮನಸ್ಥಿತಿಯನ್ನು ಬದಿಗಿಟ್ಟು, ಸಂವಿಧಾನದ ಆಶಯ ಅರ್ಥ ಮಾಡಿಕೊಳ್ಳಿ: ಸಚಿವ ಹೆಚ್.ಸಿ.ಮಹದೇವಪ್ಪ

SCROLL FOR NEXT