ಸಂಗ್ರಹ ಚಿತ್ರ online desk
ದೇಶ

KFC ಮೇಲೆ ಕೆಂಗಣ್ಣು: ಬಲಪಂಥೀಯ ಸಂಘಟನೆಗಳಿಂದ outlet ಧ್ವಂಸ

ವಸುಂಧರ ಎಂಬ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಘಟನೆಯದ್ದು ಎನ್ನಲಾದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗತೊಡಗಿದೆ.

ಘಾಜಿಯಾಬಾದ್: ಪವಿತ್ರ ಶ್ರಾವಣ ಮಾಸ ಹಾಗೂ ಕನ್ವಾರ್ ಯಾತ್ರೆಯ ಅವಧಿಯಲ್ಲಿ ಮಾಂಸ ಮಾರಾಟ ಮಾಡುತ್ತಿದ್ದನ್ನು ವಿರೋಧಿಸಿ KFC ಔಟ್ ಲೆಟ್ ನ್ನು ಬಲಪಂಥೀಯ ಸಂಘಟನೆಯ ಸದಸ್ಯರು ಧ್ವಂಸ ಮಾಡಿದ್ದಾರೆ ಎಂಬ ಆರೋಪ ಉತ್ತರ ಪ್ರದೇಶದ ಘಾಜಿಯಾಬಾದ್ ನಲ್ಲಿ ಕೇಳಿಬಂದಿದೆ.

ವಸುಂಧರ ಎಂಬ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಘಟನೆಯದ್ದು ಎನ್ನಲಾದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗತೊಡಗಿದೆ.

ಶ್ರಾವಣ ಸಮಯದಲ್ಲಿ ಈ ಪ್ರದೇಶದಲ್ಲಿ ಮಾಂಸಾಹಾರಿ ಆಹಾರ ಪದಾರ್ಥಗಳ ಮಾರಾಟದ ಮೇಲೆ ಅಧಿಕೃತ ನಿಷೇಧವಿಲ್ಲದಿದ್ದರೂ, ಗುಂಪೊಂದು ಫಾಸ್ಟ್-ಫುಡ್ ಔಟ್ಲೆಟ್ನಲ್ಲಿ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಲು ಮುಂದಾಯಿತು ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಸೆರೆಯಾಗಿರುವ ಘಟನೆಯ ವೀಡಿಯೊ, ಗುಂಪೊಂದು 'ಭಾರತ್ ಮಾತಾ ಕಿ ಜೈ' ಮತ್ತು 'ಜೈ ಶ್ರೀ ರಾಮ್' ನಂತಹ ಘೋಷಣೆಗಳನ್ನು ಕೂಗುತ್ತಾ ರೆಸ್ಟೋರೆಂಟ್ ಸಿಬ್ಬಂದಿಯನ್ನು ಎದುರಿಸಿ ಬಲವಂತವಾಗಿ ಬಾಗಿಲು ಕೆಳಗಿಳಿಸುವುದನ್ನು ತೋರಿಸುತ್ತದೆ.

ಸಹಾಯಕ ಪೊಲೀಸ್ ಆಯುಕ್ತ (ಎಸಿಪಿ) ಅಭಿಷೇಕ್ ಶ್ರೀವಾಸ್ತವ್ ಈ ಘಟನೆಯ ಬಗ್ಗೆ ಮಾಹಿತಿ ನೀಡಿದ್ದು, "ಜುಲೈ 17 ರಂದು ಕೆಲವು ವ್ಯಕ್ತಿಗಳು ಆಹಾರ ಮಳಿಗೆಯಲ್ಲಿ ಗಲಾಟೆ ಮಾಡಿ ಅದನ್ನು ಮುಚ್ಚಲು ಪ್ರಯತ್ನಿಸಿದ ಘಟನೆ ನಮ್ಮ ಗಮನಕ್ಕೆ ಬಂದಿತು. ಪೊಲೀಸರು ತಕ್ಷಣ ಸ್ಥಳಕ್ಕೆ ತಲುಪಿ, ಅವರನ್ನು ಚದುರಿಸಿದರು ಮತ್ತು ಆಹಾರ ಮಳಿಗೆಯಲ್ಲಿ ಕಾರ್ಯಾಚರಣೆ ಸುಗಮವಾಗುವಂತೆ ನೋಡಿಕೊಂಡರು" ಎಂದು ಹೇಳಿದ್ದಾರೆ.

"ಘಟನೆಗೆ ಸಂಬಂಧಿಸಿದಂತೆ ಇಂದಿರಾಪುರಂ ಪೊಲೀಸ್ ಠಾಣೆಯಲ್ಲಿ ಈಗಾಗಲೇ ಪ್ರಕರಣ ದಾಖಲಾಗಿದೆ. ಈ ಎಲ್ಲ ವ್ಯಕ್ತಿಗಳನ್ನು ಗುರುತಿಸಲಾಗುತ್ತಿದೆ, ಮುಂದಿನ ಕ್ರಮ ಕೈಗೊಳ್ಳಲಾಗುವುದು" ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

SCROLL FOR NEXT