ಹಿಂದೂ ಧರ್ಮಕ್ಕೆ ಮತಾಂತರಗೊಂಡು ಹಿಂದೂ ಯುವಕರ ವರಿಸಿದ ಮುಸ್ಲಿಂ ಯುವತಿಯರು 
ದೇಶ

Hindu ಧರ್ಮ ಸ್ವೀಕರಿಸಿ, ಹಿಂದೂ ಯುವಕರ ವರಿಸಿದ Muslim ಯುವತಿಯರು! Video

ಮುಸ್ಲಿಂ ಯುವತಿಯರಾದ ಸ್ಲಾಲೆಹೀನ್ ಮತ್ತು ನೂರ್ ಫಾತಿಮಾ ಎಂಬ ಯುವತಿಯರು ಹಿಂದೂ ಧರ್ಮಕ್ಕೆ ಮತಾಂತರಗೊಂಡಿದ್ದು, ತಮ್ಮ ಹೆಸರನ್ನು ಶಾಲಿನಿ ಮತ್ತು ನೀಲಂ ಎಂದು ಬದಲಿಸಿಕೊಂಡಿದ್ದಾರೆ.

ಮೊರಾದಾಬಾದ್: ಉತ್ತರ ಪ್ರದೇಶದ ಇಬ್ಬರು ಮುಸ್ಲಿಂ ಯುವತಿಯರು ಹಿಂದೂ ಧರ್ಮಕ್ಕೆ ಮತಾಂತರಗೊಂಡು ಹಿಂದೂ ಯುವಕರನ್ನು ಮದುವೆಯಾಗಿರುವ ವಿಡಿಯೋ ವ್ಯಾಪಕ ವೈರಲ್ ಆಗುತ್ತಿದೆ.

ಉತ್ತರ ಪ್ರದೇಶದ ಮೊರಾದಾಬಾದ್ ನಲ್ಲಿ ಈ ಘಟನೆ ನಡೆದಿದ್ದು, ಮುಸ್ಲಿಂ ಯುವತಿಯರಾದ ಸ್ವಲೆಹೀನ್ ಮತ್ತು ನೂರ್ ಫಾತಿಮಾ ಎಂಬ ಯುವತಿಯರು ಹಿಂದೂ ಧರ್ಮಕ್ಕೆ ಮತಾಂತರಗೊಂಡಿದ್ದು, ತಮ್ಮ ಹೆಸರನ್ನು ಶಾಲಿನಿ ಮತ್ತು ನೀಲಂ ಎಂದು ಬದಲಿಸಿಕೊಂಡಿದ್ದಾರೆ.

ಅಲ್ಲದೆ ಈ ಇಬ್ಬರು ಯುವತಿಯರು ಹಿಂದೂ ಧರ್ಮಕ್ಕೆ ಸೇರಿದ ಅಮಿತ್ ಮತ್ತು ಗೌರವ್ ಎಂಬ ಯುವಕರನ್ನು ಮೊರಾದಾಬಾದ್ ನ ಆರ್ಯ ಸಮಾಜ್ ದೇಗುಲದಲ್ಲಿ ವಿವಾಹವಾಗಿದ್ದಾರೆ.

ಜೀವ ಬೆದರಿಕೆ

ಇನ್ನು ಮುಸ್ಲಿಂ ಧರ್ಮಕ್ಕೆ ಸೇರಿದ್ದ ಯುವತಿಯರು ಹಿಂದೂ ಧರ್ಮಕ್ಕೆ ಬದಲಾಗದಂತೆ ಸಮುದಾಯದ ಹಿರಿಯರು ಮತ್ತು ನಾಯಕರ ಒತ್ತಡ ಮತ್ತು ಬೆದರಿಕೆಗಳ ನಡುವೆಯೂ ಯುವತಿಯರು ಹಿಂದೂ ಧರ್ಮಕ್ಕೆ ಮತಾಂತರಗೊಂಡಿದ್ದಾರೆ. ಈ ವಿಶೇಷ ಕಾರ್ಯದಲ್ಲಿ ಪಾಲ್ಗೊಂಡಿದ್ದ ಅರ್ಚಕರು ಯುವತಿಯರನ್ನು ಶುದ್ದೀಕರಣಗೊಳಿಸಿ ಮದುವೆ ಕಾರ್ಯ ಪೂರ್ಣಗೊಳಿಸಿದ್ದಾರೆ ಎನ್ನಲಾಗಿದೆ.

ಆರ್ಯ ಸಮಾಜ ದೇವಾಲಯಗಳು ಹಿಂದೂ ವಿಧಿಗಳು ಮತ್ತು ಸಮಾರಂಭಗಳ ಪ್ರಕಾರ ವಿವಾಹಗಳನ್ನು ಸುಗಮಗೊಳಿಸುತ್ತವೆ. ಆರ್ಯ ಸಮಾಜವು ಅಂತರ್ಜಾತಿ ವಿವಾಹಗಳನ್ನು ಅನುಮತಿಸುತ್ತದೆ, ಆದರೆ ಇಸ್ಲಾಂ ಸೇರಿದಂತೆ ಕೆಲವು ಧರ್ಮಗಳ ವ್ಯಕ್ತಿಗಳು ಮೊದಲು "ಶುದ್ಧಿ" ಎಂಬ ಮತಾಂತರ ಪ್ರಕ್ರಿಯೆಗೆ ಒಳಗಾಗಬೇಕು ಎಂಬ ಅವಶ್ಯಕತೆಯೊಂದಿಗೆ ಅಂತರ್-ಧರ್ಮೀಯ ವಿವಾಹಗಳನ್ನು ಅನುಮತಿಸಲಾಗಿದೆ.

ಇದೇ ವಿಚಾರವಾಗಿ ಸೆಲ್ಫಿ ವಿಡಿಯೋ ಮಾಡಿ ಹೇಳಿಕೆ ನೀಡಿರುವ ಯುವತಿ, ನಾನು ನನ್ನ ಸ್ವಇಚ್ಛೆಯಿಂದಲೇ ಹಿಂದೂ ಧರ್ಮವನ್ನು ಸ್ವೀಕರಿಸಿದ್ದೇನೆ. ಅಂತೆಯೇ ನನ್ನ ಸ್ವಇಚ್ಛೆಯಿಂದಲೇ ಮದುವೆಯಾಗಿದ್ದೇನೆ ಎಂದು ಹೇಳಿದ್ದಾಳೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಿಗೆ 2ನೇ ವಿಮಾನ ನಿಲ್ದಾಣ ಮರೀಚಿಕೆ: ಸಂಸತ್ತಿನಲ್ಲಿ ಕೇಂದ್ರ ಸರ್ಕಾರ ಹೇಳಿದ್ದೇನು?

ಇದೇ ಮೊದಲು: UP YouTuber ಮನೆ ಮೇಲೆ ED ದಾಳಿ: ಲಂಬೋರ್ಗಿನಿ, BMW Z4 ಐಷಾರಾಮಿ ಕಾರುಗಳನ್ನು ನೋಡಿ ಅಧಿಕಾರಿಗಳು ದಂಗು!

ನಾವು ಭಿಕ್ಷುಕರಲ್ಲ; ಕೇಂದ್ರ ಹಣ ನಿಲ್ಲಿಸಿದರೂ ಉದ್ಯೋಗ ಸೃಷ್ಟಿಸುತ್ತೇವೆ: ಉದ್ಯೋಗ ಖಾತ್ರಿ ಯೋಜನೆಗೆ ಗಾಂಧಿ ಹೆಸರು ಘೋಷಿಸಿದ ದೀದಿ!

Hijab ವಿವಾದ ಬೆನ್ನಲ್ಲೇ ಸಿಎಂ ವಿರುದ್ಧ ದೂರು ದಾಖಲು: ಬೆದರಿಕೆ ಹಿನ್ನಲೆ ನಿತೀಶ್ ಕುಮಾರ್‌ ಭದ್ರತೆ ಹೆಚ್ಚಳ!

SHANTI Bill: ಅಣು ಶಕ್ತಿಯ ಖಾಸಗೀಕರಣ, ಸುರಕ್ಷತೆ, ಹೊಣೆಗಾರಿಕೆ ಬಗ್ಗೆ ವಿಪಕ್ಷಗಳು ಕಳವಳ; 'ಬಡತನ ಕಡಿಮೆ' ಮಾಡುತ್ತದೆ ಎಂದ ಸುಧಾ ಮೂರ್ತಿ!

SCROLL FOR NEXT