ಹಿಮಂತ ಬಿಸ್ವಾ ಶರ್ಮಾ-ಮಮತಾ ಬ್ಯಾನರ್ಜಿ 
ದೇಶ

ಅಸ್ಸಾಂನಲ್ಲಿ ಬಿಜೆಪಿಯ ವಿಭಜಕ ಅಜೆಂಡಾ ಎಲ್ಲಾ ಮಿತಿಗಳನ್ನು ಮೀರಿದೆ- ಮಮತಾ; 'ತುಷ್ಟೀಕರಣ' ಎಂದು ಹಿಮಂತ ತಿರುಗೇಟು

ಬಂಗಾಳಿ ಭಾಷಿಕರು “ಎಲ್ಲಾ ಭಾಷೆಗಳು ಮತ್ತು ಧರ್ಮಗಳನ್ನು ಗೌರವಿಸಿ ಶಾಂತಿಯುತವಾಗಿ ಸಹಬಾಳ್ವೆ ನಡೆಸಲು” ಬಯಸುತ್ತಾರೆ ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ.

ಕೋಲ್ಕತ್ತಾ: ಬಂಗಾಳಿ 'ಅಶ್ಮಿತೆ'(ಹೆಮ್ಮೆ)ಯನ್ನು ರಕ್ಷಿಸುವ ಏಕೈಕ ಪಕ್ಷ ಬಿಜೆಪಿ ಎಂಬ ಪ್ರಧಾನಿ ನರೇಂದ್ರ ಮೋದಿ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಈಶಾನ್ಯ ರಾಜ್ಯದಲ್ಲಿ ಬಂಗಾಳಿ ಮಾತನಾಡುವ ಜನರಿಗೆ "ಬೆದರಿಕೆ" ಹಾಕುತ್ತಿದ್ದಾರೆ ಎಂದು ಅಸ್ಸಾಂನ ಬಿಜೆಪಿ ಸರ್ಕಾರವನ್ನು ಶನಿವಾರ ತೀವ್ರ ತರಾಟೆಗೆ ತೆಗೆದುಕೊಂಡರು.

ಈ ಬಂಗಾಳಿ ಭಾಷಿಕರು “ಎಲ್ಲಾ ಭಾಷೆಗಳು ಮತ್ತು ಧರ್ಮಗಳನ್ನು ಗೌರವಿಸಿ ಶಾಂತಿಯುತವಾಗಿ ಸಹಬಾಳ್ವೆ ನಡೆಸಲು” ಬಯಸುತ್ತಾರೆ ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ.

ಕೇಂದ್ರ ಸರ್ಕಾರ ಮತ್ತು ಬಿಜೆಪಿ ಆಡಳಿತವಿರುವ ರಾಜ್ಯಗಳು ಬಂಗಾಳಿ ಮಾತನಾಡುವ ವಲಸಿಗರನ್ನು ವ್ಯವಸ್ಥಿತವಾಗಿ “ಅಕ್ರಮ ಬಾಂಗ್ಲಾದೇಶಿ” ಅಥವಾ “ರೋಹಿಂಗ್ಯಾ” ಎಂದು ಹಣೆಪಟ್ಟಿ ಕಟ್ಟಿ ಗುರಿಪಡಿಸುತ್ತಿವೆ ಎಂದು ಪಶ್ಚಿಮ ಬಂಗಾಳ ಸಿಎಂ ಆರೋಪಿಸಿದ್ದಾರೆ.

“ದೇಶದಲ್ಲಿ ಎರಡನೇ ಅತಿ ಹೆಚ್ಚು ಮಾತನಾಡುವ ಭಾಷೆ ಬಾಂಗ್ಲಾ ಭಾಷೆಯಾಗಿದೆ. ಇದು ಅಸ್ಸಾಂನಲ್ಲೂ ಎರಡನೇ ಅತಿ ಹೆಚ್ಚು ಮಾತನಾಡುವ ಭಾಷೆಯಾಗಿದೆ. ಎಲ್ಲಾ ಭಾಷೆಗಳು ಮತ್ತು ಧರ್ಮಗಳನ್ನು ಗೌರವಿಸಿ ಶಾಂತಿಯುತವಾಗಿ ಸಹಬಾಳ್ವೆ ನಡೆಸಲು ಬಯಸುವ ಬಂಗಾಳಿ ಭಾಷಿಕರನ್ನು ತಮ್ಮ ಮಾತೃಭಾಷೆಯನ್ನು ಎತ್ತಿಹಿಡಿದಿದ್ದಕ್ಕಾಗಿ ಕಿರುಕುಳ ನೀಡಿ, ಬೆದರಿಸುವುದು ತಾರತಮ್ಯ ಮತ್ತು ಅಸಾಂವಿಧಾನಿಕ. ಅಸ್ಸಾಂನಲ್ಲಿ ಬಿಜೆಪಿಯ ಈ ವಿಭಜಕ ಅಜೆಂಡಾ ಎಲ್ಲಾ ಮಿತಿಗಳನ್ನು ಮೀರಿದೆ ಮತ್ತು ಇದರ ವಿರುದ್ಧ ಅಸ್ಸಾಂ ಜನತೆ ಹೋರಾಡುತ್ತದೆ” ಎಂದು ಮಮತಾ ಬ್ಯಾನರ್ಜಿ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.

“ತಮ್ಮ ಭಾಷೆ ಮತ್ತು ಗುರುತಿನ ಘನತೆಗಾಗಿ ಹಾಗೂ ತಮ್ಮ ಪ್ರಜಾಪ್ರಭುತ್ವದ ಹಕ್ಕುಗಳಿಗಾಗಿ ಹೋರಾಡುತ್ತಿರುವ ಪ್ರತಿಯೊಬ್ಬ ನಾಗರಿಕನೊಂದಿಗೆ ನಾನು ನಿಲ್ಲುತ್ತೇನೆ” ಎಂದು ಪಶ್ಚಿಮ ಬಂಗಾಳ ಸಿಎಂ ತಿಳಿಸಿದ್ದಾರೆ.

ಮಮತಾ ಬ್ಯಾನರ್ಜಿಯಿಂದ 'ತುಷ್ಟೀಕರಣ'

ಪಶ್ಚಿಮ ಬಂಗಾಳ ಸಿಎಂ ಆರೋಪವನ್ನು ನಿರಾಕರಿಸಿದ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ, ಬ್ಯಾನರ್ಜಿ ಒಂದು ನಿರ್ದಿಷ್ಟ ಸಮುದಾಯದ "ಅಕ್ರಮ ಅತಿಕ್ರಮಣವನ್ನು ಪ್ರೋತ್ಸಾಹಿಸುತ್ತಿದ್ದಾರೆ" ಮತ್ತು ಮತಕ್ಕಾಗಿ 'ತುಷ್ಟೀಕರಣ' ರಾಜಕಾರಣ ಮಾಡುತ್ತಿದ್ದಾರೆ ಎಂದು ತಿರುಗೇಟು ನೀಡಿದ್ದಾರೆ.

“ಮಮತಾ ಬ್ಯಾನರ್ಜಿ ಬಂಗಾಳಿಗಳನ್ನು ಇಷ್ಟಪಡುತ್ತಾರೋ ಅಥವಾ ಮುಸ್ಲಿಂ-ಬಂಗಾಳಿಗಳನ್ನು ಮಾತ್ರ ಇಷ್ಟಪಡುತ್ತಾರೋ ಎಂಬುದು ಪ್ರಶ್ನೆಯಾಗಿದೆ. ಇದಕ್ಕೆ ನನ್ನ ಉತ್ತರವೇನೆಂದರೆ ಅವರು ಮುಸ್ಲಿಂ-ಬಂಗಾಳಿಗಳನ್ನು ಮಾತ್ರ ಇಷ್ಟ ಪಡುತ್ತಾರೆ ಎಂದು ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Vice President Election 2025: ನೂತನ ಉಪ ರಾಷ್ಟ್ರಪತಿಯಾಗಿ ಸಿ ಪಿ ರಾಧಾಕೃಷ್ಣನ್ ಆಯ್ಕೆ

ಮದ್ದೂರಿನಲ್ಲಿ ಕಲ್ಲು ತೂರಾಟ: ಶಾಂತಿ ಕದಡುವುದೇ ಬಿಜೆಪಿ ಉದ್ದೇಶ; ಜಾತಿ, ಧರ್ಮ, ಪಕ್ಷ ಲೆಕ್ಕಿಸದೆ ಕ್ರಮ; Video

ಆಜ್ ತಕ್ ನಿರೂಪಕನ ವಿರುದ್ಧ ದ್ವೇಷ ಭಾಷಣ ಆರೋಪ: ಎಫ್‌ಐಆರ್ ದಾಖಲಿಸಲು UP ನ್ಯಾಯಾಲಯ ಆದೇಶ

Amruta Fadnavis: 'ನೀತಿ ಪಾಠ ಹೇಳುವವರೆ ಈ ರೀತಿಯ ಬಟ್ಟೆ ಧರಿಸಿದರೆ ಹೇಗೆ? ಮಹಾ ಸಿಎಂ 'ಫಡ್ನವೀಸ್ ಪತ್ನಿ' ವಿರುದ್ಧ ನೆಟ್ಟಿಗರ ಆಕ್ರೋಶ, Video ವೈರಲ್

ಅಕ್ರಮ ಬೆಟ್ಟಿಂಗ್ ಪ್ರಕರಣ: ವೀರೇಂದ್ರ ಪಪ್ಪಿ ಚಿನ್ನದ ಖಜಾನೆ ಕಂಡು ED ಶಾಕ್; 21 ಕೆಜಿ ಗೋಲ್ಡ್ ಬಿಸ್ಕೇಟ್ ಜಪ್ತಿ

SCROLL FOR NEXT