ಉತ್ತರ ಪ್ರದೇಶ ಡಿಜಿಪಿ ರಾಜೀವ್ ಕೃಷ್ಣ ,ಎಸ್ ಎಸ್ ಪಿ ದೀಪಕ್ ಕುಮಾರ್ 
ದೇಶ

ಉತ್ತರ ಪ್ರದೇಶ: ISIS ಶೈಲಿಯಲ್ಲಿ ಮತಾಂತರ ದಂಧೆ; ವಿದೇಶದಿಂದ ಹಣ ಸಂದಾಯ,10 ಜನರ ಬಂಧನ!

ಮತಾಂತರ ದಂಧೆ ತಡೆಯುವ ನಿಟ್ಟಿನಲ್ಲಿ ಪೊಲೀಸರು ಮಿಷನ್ ಅಸ್ಮಿತಾ' ಕಾರ್ಯಾಚರಣೆ ಆರಂಭಿಸಿದ್ದು, ಮೊಹಮ್ಮದ್ ಉಮರ್ ಗೌತಮ್ ಮತ್ತು ಮುಫ್ತಿ ಜಹಾಂಗೀರ್ ಆಲಂ ಖಾಸ್ಮಿ ಅವರನ್ನು ಎಟಿಎಸ್ ಬಂಧಿಸಿದೆ.

ಲಖನೌ: ಅಂತಾರಾಷ್ಟ್ರೀಯ ಹಣಕಾಸಿನ ನೆರವು ಮತ್ತು ISIS ಶೈಲಿಯಲ್ಲಿ ಮತಾಂತರ ದಂಧೆಯನ್ನು ಭೇದಿಸಿರುವ ಉತ್ತರ ಪ್ರದೇಶ ಪೊಲೀಸರು, ಆರು ರಾಜ್ಯಗಳಾದ್ಯಂತ ಹತ್ತು ಜನರನ್ನು ಬಂಧಿಸಿದ್ದಾರೆ.

ಶನಿವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಉತ್ತರ ಪ್ರದೇಶ ಪೊಲೀಸ್ ಮಹಾನಿರ್ದೇಶಕ (ಡಿಜಿಪಿ) ರಾಜೀವ್ ಕೃಷ್ಣ, ಮತಾಂತರ ದಂಧೆ ತಡೆಯುವ ನಿಟ್ಟಿನಲ್ಲಿ ಪೊಲೀಸರು ಮಿಷನ್ ಅಸ್ಮಿತಾ' ಕಾರ್ಯಾಚರಣೆ ಆರಂಭಿಸಿದ್ದು, ಮತಾಂತರ ಸಿಂಡಿಕೇಟ್ ನ ಪ್ರಮುಖರಾದ ಮೊಹಮ್ಮದ್ ಉಮರ್ ಗೌತಮ್ ಮತ್ತು ಮುಫ್ತಿ ಜಹಾಂಗೀರ್ ಆಲಂ ಖಾಸ್ಮಿ ಅವರನ್ನು ಎಟಿಎಸ್ ಬಂಧಿಸಿರುವುದಾಗಿ ತಿಳಿಸಿದರು.

ಜಮಾಲುದ್ದೀನ್ ಎಂದೂ ಕರೆಯಲ್ಪಡುವ ಛಂಗೂರ್ ಬಾಬಾ ನೇತೃತ್ವದ ಸಿಂಡಿಕೇಟ್ ವಿಚಾರಣೆಯನ್ನು ಎಸ್ ಐಟಿ ಮತ್ತು ವಿಶೇಷ ಕಾರ್ಯಪಡೆ ಮುಂದುವರೆಸಿವೆ. ಲವ್ ಜಿಹಾದ್, ಅಕ್ರಮವಾಗಿ ಮತಾಂತರ ದಂಧೆ ನಡೆಸುವವರು, ತೀವ್ರವಾದಿಗಳು ಮತ್ತು ಜಾಗತಿಕ ಮಟ್ಟದಲ್ಲಿರುವ ಜಿಹಾದಿಗಳ ಜೊತೆಗೆ ಸೇರಿಕೊಂಡು ರಾಷ್ಟ್ರದ ಭದ್ರತೆಗೆ ಧಕ್ಕೆ ತರಲು ಪ್ರಯತ್ನಿಸುವ ಜಾಲದೊಂದಿಗೆ ಕೈ ಜೋಡಿಸುತ್ತಿರುವುದು ಕಂಡುಬಂದಿದೆ. ಈ ಸಂಬಂಧ ಆರು ರಾಜ್ಯಗಳಾದ್ಯಂತ 10 ಜನರನ್ನು ಬಂಧಿಸಲಾಗಿದೆ ಎಂದು ಅವರು ತಿಳಿಸಿದರು.

ಮತಾಂತರಕ್ಕೆ ISIS ತಂತ್ರ, ವಿದೇಶದಿಂದ ಹಣ ಸಂದಾಯ: ಆರೋಪಿಗಳು ಯುವತಿಯರನ್ನು ಗುರಿಯಾಗಿಸಿಕೊಂಡಿದ್ದು, ಮತಾಂತರಕ್ಕೆ ಅನುಕೂಲವಾಗುವಂತೆ ಆಮಿಷವೊಡ್ಡುವುದು, ಲವ್ ಜಿಹಾದ್ ಮತ್ತಿತರ ವಿಧಾನಗಳ ಮೂಲಕ ಪ್ರಭಾವ ಬೀರಿದ್ದಾರೆ. ISIS ಶೈಲಿಯಲ್ಲಿ ಮತಾಂತರ ನಡೆಸಲಾಗುತ್ತಿದೆ. ಈ ಗುಂಪುಗಳು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ, ಎಸ್‌ಡಿಪಿಐ ಮತ್ತು ಪಾಕಿಸ್ತಾನಿ ಭಯೋತ್ಪಾದಕ ಸಂಘಟನೆಗಳೊಂದಿಗೆ ನಂಟು ಹೊಂದಿರುವ ಸಾಧ್ಯತೆಗಳಿವೆ. ಈ ಮತಾಂತರ ಕಾರ್ಯಕ್ಕೆ "ಕೆನಡಾ, ಅಮೇರಿಕಾ, ಲಂಡನ್ ಮತ್ತು ದುಬೈಯಿಂದ ಹಣ ಸಂದಾಯವಾಗಿರುವುದು ಪತ್ತೆಯಾಗಿದೆ ಎಂದು ಡಿಜಿಪಿ ಹೇಳಿದರು.

ಕೆನಡಾ, ಅಮೇರಿಕಾ, ಲಂಡನ್ ಮತ್ತು ದುಬೈನಿಂದ ಧನಸಹಾಯ ಮತ್ತು ಅಲ್ಲಿ ವಾಸಿಸುವ ಜನರು ಕೂಡಾ ಮತಾಂತರ ಕಾರ್ಯದಲ್ಲಿ ತೊಡಗಿಸಿಕೊಂಡಿರುವ ಬಗ್ಗೆ ಪುರಾವೆಗಳನ್ನು ಸಂಗ್ರಹಿಸಲಾಗಿದೆ. ಈ ಸಂಬಂಧ ತನಿಖೆಗಳು ನಡೆಯುತ್ತಿದ್ದು, ಮುಂದಿನ ದಿನಗಳಲ್ಲಿ ಮತ್ತಷ್ಟು ಜನರನ್ನು ಬಂಧಿಸಿ, ಮಾಹಿತಿ ನೀಡಲಾಗುವುದು ಎಂದು ಅವರು ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಚೀನಾದಲ್ಲಿ ಪ್ರಧಾನಿ ಮೋದಿ ಹತ್ಯೆಗೆ ಸಂಚು: ಕಾರಲ್ಲಿ ಕರೆದೊಯ್ದು ಪಾರುಮಾಡಿದ ಪುಟಿನ್; ಢಾಕಾದಲ್ಲಿ US ಅಧಿಕಾರಿ ನಿಗೂಢ ಸಾವು ಬಿಚ್ಚಿಟ್ಟ ಸ್ಫೋಟಕ ರಹಸ್ಯ!

ನನ್ನ ಹೇಳಿಕೆಗೆ ನಾನೂ ಈಗಲೂ ಬದ್ಧ, ಆದ್ರೆ ಸಿದ್ದರಾಮಯ್ಯ 5 ವರ್ಷ ಸಿಎಂ: ಯತೀಂದ್ರ

BBK12: 'ಮಿಸ್ಟರ್ ಸುಧಿ.. 'ಸೆಡೆ' ಅಂದ್ರೇನು?': ಮತ್ತೆ ರಕ್ಷಿತಾ ವಿಚಾರವಾಗಿ ಅಶ್ವಿನಿ ಗೌಡ-ಸುಧಿಗೆ ಕಿಚ್ಚಾ ಸುದೀಪ್ ಫುಲ್ ಕ್ಲಾಸ್! video

ಆಸಿಸ್ ಮಹಿಳಾ ಕ್ರಿಕೆಟ್ ಆಟಗಾರ್ತಿಯರಿಗೆ ಲೈಂಗಿಕ ಕಿರುಕುಳ: BCCI ಪ್ರತಿಕ್ರಿಯೆ; ಆಸ್ಟ್ರೇಲಿಯಾ ಹೇಳಿದ್ದೇನು?

ಖ್ಯಾತ ಖಗೋಳ ತಜ್ಞ, ದಿ. ಜಯಂತ್ ನಾರ್ಲಿಕರ್ ಗೆ ವಿಜ್ಞಾನ ರತ್ನ ಪ್ರಶಸ್ತಿ

SCROLL FOR NEXT