ಸಾಂದರ್ಭಿಕ ಚಿತ್ರ 
ದೇಶ

ಒಮ್ಮೆ ಮದುವೆ ಅನೂರ್ಜಿತವಾದರೆ ಪತಿ ಜೀವನಾಂಶ ಕೊಡುವ ಕಾನೂನು ಬಾಧ್ಯತೆ ಇರಲ್ಲ: ಅಲಹಾಬಾದ್ ಹೈಕೋರ್ಟ್

ಹಿಂದೂ ವಿವಾಹ ಕಾಯ್ದೆಯ ಸೆಕ್ಷನ್ 11 ರ ಅಡಿಯಲ್ಲಿ ಮದುವೆಯನ್ನು ಅಮಾನ್ಯ ಮತ್ತು ಅನೂರ್ಜಿತ ಎಂದು ಘೋಷಿಸಿದಾಗ, ಅದನ್ನು ಅಸಿಂಧು ಎಂದು ಪರಿಗಣಿಸಲಾಗುತ್ತದೆ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ.

ಲಖನೌ: ತನ್ನ ವಿಭಿನ್ನ ತೀರ್ಪುಗಳ ಮೂಲಕ ದೇಶಾದ್ಯಂತ ಗಮನ ಸೆಳೆದಿರುವ ಅಲಹಾಬಾದ್ ಹೈಕೋರ್ಟ್ ಮತ್ತೊಂದು ಮಹತ್ವದ ತೀರ್ಪು ನೀಡಿದೆ. ಒಮ್ಮೆ ಮದುವೆಯನ್ನು ಅನೂರ್ಜಿತಗೊಳಿಸುವ ಆದೇಶ ಹೊರಡಿಸಿದರೆ, ಮದುವೆಗೆ ಆರಂಭದಿಂದಲೂ ಮಾನ್ಯತೆ ಇಲ್ಲ ಎಂದೇ ಪರಿಗಣಿಸಲಾಗುತ್ತದೆ. ಅಂತಹ ಕೇಸ್ ಗಳಲ್ಲಿ ಮದುವೆಯು ಪ್ರಾರಂಭದಲ್ಲಿಯೇ ಕೊನೆಗೊಳ್ಳುವುದರಿಂದ ಪುರುಷನು ಹೆಂಡತಿಗೆ ಜೀವನಾಂಶ ಕೊಡುವ ಬಾಧ್ಯತೆ ಇರುವುದಿಲ್ಲ ಎಂದು ಹೇಳಿದೆ.

ಹಿಂದೂ ವಿವಾಹ ಕಾಯ್ದೆಯ ಸೆಕ್ಷನ್ 11 ರ ಅಡಿಯಲ್ಲಿ ಮದುವೆಯನ್ನು ಅಮಾನ್ಯ ಮತ್ತು ಅನೂರ್ಜಿತ ಎಂದು ಘೋಷಿಸಿದಾಗ, ಅದನ್ನು ಅಸಿಂಧು ಎಂದು ಪರಿಗಣಿಸಲಾಗುತ್ತದೆ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ. ಪರಿಣಾಮವಾಗಿ ಹೆಂಡತಿಗೆ ಜೀವನಾಂಶ ಒದಗಿಸಲು ಪುರುಷನ ಮೇಲೆ ಯಾವುದೇ ಕಾನೂನು ಬಾಧ್ಯತೆ ಇರುವುದಿಲ್ಲ ಎಂದು ಹೇಳಿದೆ.

ಫೆಬ್ರವರಿ 2015 ರಲ್ಲಿ ವಿವಾಹವಾದ ದಂಪತಿಗೆ ಸೇರಿದ ಪ್ರಕರಣ ಇದಾಗಿದೆ. ಸ್ವಲ್ಪ ದಿನಗಳ ನಂತರ ದಂಪತಿ ನಡುವೆ ವಿರಸ ಉಂಟಾಗಿದ್ದು, ಪತಿಯ ವಿರುದ್ಧ IPCಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಕಿರುಕುಳ, ದೌರ್ಜನ್ಯ ಆರೋಪವನ್ನು ಹೊರಿಸಿ ಪತ್ನಿ ಅನೇಕ ಎಫ್‌ಐಆರ್‌ಗಳನ್ನು ದಾಖಲಿಸಿದ್ದರು. ನಂತರ ಪತಿ ಸಲ್ಲಿಸಿದ ನಿರೀಕ್ಷಣಾ ಜಾಮೀನು ವಿಚಾರಣೆಯ ಸಂದರ್ಭದಲ್ಲಿ, ಪತ್ನಿ ಈ ಹಿಂದೆ ಮದುವೆಯಾಗಿದ್ದಳು. ಆ ಮಾಹಿತಿಯನ್ನು ಮದುವೆ ಆರಂಭದಲ್ಲಿ ಹೇಳಿರಲಿಲ್ಲ ಎಂದು ತಿಳಿದುಬಂದಿದೆ.

ಹೀಗಾಗಿ ಅವರ ಮದುವೆಯನ್ನು ಅಸಿಂಧು ಎಂದು ಘೋಷಿಸಬೇಕು ಎಂದು ಕೋರಿ ಪತಿ ಕೌಟುಂಬಿಕ ನ್ಯಾಯಾಲಯದ ಮೆಟ್ಟಿಲೇರಿದ್ದರು. ಇದಕ್ಕೆ ಸಮ್ಮತಿಸಿದ ಕೌಟುಂಬಿಕ ನ್ಯಾಯಾಲಯ ನವೆಂಬರ್ 2021 ರಲ್ಲಿ ಅವರ ಮದುವೆಯನ್ನು ಅಮಾನ್ಯ ಮತ್ತು ಅನೂರ್ಜಿತ ಎಂದು ಘೋಷಿಸಿತು.

ಈ ತೀರ್ಪಿನ ವಿರುದ್ಧ ಪತ್ನಿ ಮೇಲ್ಮನವಿ ಸಲ್ಲಿಸಿದ್ದರು. ಆದರೆ ನಂತರ ಅವರ ಪ್ರಕರಣವನ್ನು ಹಿಂತೆಗೆದುಕೊಂಡಿದ್ದರು. ಇದರ ಹೊರತಾಗಿಯೂ ಕೌಟುಂಬಿಕ ಹಿಂಸಾಚಾರದಿಂದ ಮಹಿಳೆಯರ ಸಂರಕ್ಷಣಾ ಕಾಯ್ದೆ 2005 ರ ಅಡಿಯಲ್ಲಿ ಜೀವನಾಂಶ ಕೋರಿದ್ದರು.

ಆಗಸ್ಟ್ 2022 ರಲ್ಲಿ, ಗಾಜಿಯಾಬಾದ್‌ನ ಸಿವಿಲ್ ನ್ಯಾಯಾಧೀಶರು ಕಾಯ್ದೆಯ ಸೆಕ್ಷನ್ 23 ರ ಅಡಿಯಲ್ಲಿ ತಿಂಗಳಿಗೆ ₹10,000 ನೀಡುವಂತೆ ತೀರ್ಪು ನೀಡಿದ್ದರು. ಪತಿ ಈ ಆದೇಶವನ್ನು ಪ್ರಶ್ನಿಸಿ ಅಲಹಾಬಾದ್ ಹೈಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದರು. ವಾದ ವಿವಾದಗಳನ್ನು ಆಲಿಸಿದ ನಂತರ ನ್ಯಾಯಮೂರ್ತಿ ರಾಜೀವ್ ಮಿಶ್ರಾ ಅವರನ್ನೊಳಗೊಂಡ ನ್ಯಾಯಪೀಠ ತೀರ್ಪು ನೀಡಿದೆ.

ಮೊದಲ ಮದುವೆಯು ಇನ್ನೂ ಕಾನೂನುಬದ್ಧವಾಗಿ ಮಾನ್ಯವಾಗಿರುವಾಗ ಪತ್ನಿ ಎರಡನೇ ಮದುವೆ ಆಗಿದ್ದಾಳೆ ಎಂಬ ಅಂಶಗಳನ್ನು ಪ್ರಮುಖವಾಗಿ ಪರಿಗಣಿಸಿದ ನ್ಯಾಯಾಲಯ, ಇದು ಹಿಂದೂ ಕಾನೂನಿನಡಿ ಅನುಮತಿ ನೀಡದ ಬಹುಪತ್ನಿತ್ವಕ್ಕೆ ಸಮಾನವಾಗಿದ್ದು, ಈ ಮದುವೆಯನ್ನು ಅಮಾನ್ಯ ಮತ್ತು ಅನೂರ್ಜಿತ ಎಂದು ಘೋಷಿರುವುದಾಗಿ ಆದೇಶಿಸಿತು.

ಒಂದು ಬಾರಿ ಮದುವೆ ಅನೂರ್ಜಿತ ಎಂದು ಘೋಷಿಸಿದ ನಂತರ ಕೌಟುಂಬಿಕ ಹಿಂಸಾಚಾರ ಕಾಯ್ದೆ 2005 ರ ಸೆಕ್ಷನ್ 2 (ಎಫ್) ಅಡಿಯಲ್ಲಿ ಯಾವುದೇ ಸಂಬಂಧ ಇರಲ್ಲ. ಆದ್ದರಿಂದ ಕಾನೂನುಬದ್ಧವಾಗಿ ಹೆಂಡತಿ ಜೀವನಾಂಶ ಪಡೆಯಲು ಸಾಧ್ಯವಾಗುವುದಿಲ್ಲ ಎಂದು ಹೇಳಿತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Madhya Pradesh: ದುರ್ಗಾದೇವಿ ಮೂರ್ತಿ ವಿಸರ್ಜನೆ ವೇಳೆ ದುರಂತ, ಮಹಿಳೆಯರು, ಮಕ್ಕಳು ಸೇರಿದಂತೆ 14 ಮಂದಿ ಸಾವು!Video

ಈ ಬಾರಿ 'ಮೈಸೂರು ದಸರಾ' ಯಶಸ್ವಿ; ಬೆಳೆ ಹಾನಿಯಾದ ಎಲ್ಲ 10 ಲಕ್ಷ ಹೆಕ್ಟೇರ್ ಗೂ ಸಮೀಕ್ಷೆ ನಂತರ ಪರಿಹಾರ: ಸಿಎಂ ಸಿದ್ದರಾಮಯ್ಯ

'RSS ನಲ್ಲಿ ಒಬ್ಬ ವ್ಯಕ್ತಿಯೂ ಇಲ್ಲ': ಪ್ರಧಾನಿ ಮೋದಿ ಹೇಳಿಕೆಗೆ ಓವೈಸಿ ತಿರುಗೇಟು!

2026 T20 World Cup: ಅರ್ಹತೆ ಪಡೆದ ನಮೀಬಿಯಾ, ಜಿಂಬಾಬ್ವೆ!

ಅಂಬೇಡ್ಕರ್ ಸಿದ್ಧಾಂತದಂತೆ ಬದುಕಿದ್ದೇವೆ; RSS ಕಾರ್ಯಕ್ರಮಕ್ಕೆ ಹೋಗಲ್ಲ: CJI ಗವಾಯಿ ತಾಯಿ ಪತ್ರ

SCROLL FOR NEXT