ಸಂಸದ ಮಿಧುನ್ ರೆಡ್ಡಿ  
ದೇಶ

ಆಂಧ್ರ ಪ್ರದೇಶ: ಮದ್ಯ ಹಗರಣ; YSRCP ಸಂಸದ ಮಿಧುನ್ ರೆಡ್ಡಿ ಬಂಧನ

ಮದ್ಯ ಹಗರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡವು ಮಿಧುನ್ ರೆಡ್ಡಿಯನ್ನು ಇಂದು ಹಲವು ಗಂಟೆಗಳ ಕಾಲ ತನಿಖೆ ನಡೆಸಿತು.

ವಿಜಯವಾಡ: ಆಂಧ್ರ ಪ್ರದೇಶದ ಹಿಂದಿನ ವೈಎಸ್‌ಆರ್‌ಸಿಪಿ ಸರ್ಕಾರದ ಅವಧಿಯಲ್ಲಿ ನಡೆದಿದೆ ಎನ್ನಲಾದ ರೂ. 3,200 ಕೋಟಿ ಮೊತ್ತದ ಮದ್ಯ ಹಗರಣದಲ್ಲಿ ವೈಎಸ್‌ಆರ್‌ಸಿಪಿ ಲೋಕಸಭಾ ಸದಸ್ಯ ಪಿವಿ ಮಿಧುನ್ ರೆಡ್ಡಿ ಅವರನ್ನು ಪೊಲೀಸರು ಶನಿವಾರ ಬಂಧಿಸಿದ್ದಾರೆ.

ಮದ್ಯ ಹಗರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡವು ಮಿಧುನ್ ರೆಡ್ಡಿಯನ್ನು ಇಂದು ಹಲವು ಗಂಟೆಗಳ ಕಾಲ ತನಿಖೆ ನಡೆಸಿತು. ಬಳಿಕ ವಿಜಯವಾಡದಲ್ಲಿನ ಅವರ ನಿವಾಸದಲ್ಲಿ ರಾತ್ರಿ 7-30ರ ಸುಮಾರಿನಲ್ಲಿ ಬಂಧಿಸಿತು.

ಮಿಧುನ್ ರೆಡ್ಡಿ ಅವರನ್ನು ಬಂಧಿಸಲಾಗಿದ್ದು, ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸುವ ಪ್ರಕ್ರಿಯೆ ನಡೆಯುತ್ತಿದೆ ಎಂದು ಎಂದು ಗೃಹ ಸಚಿವ ವಂಗಲಪುಡಿ ಅನಿತಾ ಹೇಳಿದ್ದಾರೆ. ಮಿಧುನ್ ರೆಡ್ಡಿ ಅವರು ಆಂಧ್ರಪ್ರದೇಶದ ರಾಜಂಪೇಟೆ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದಾರೆ.

ಮದ್ಯ ಹಗರಣದಲ್ಲಿ ಇತರ ಆರೋಪಿಗಳಾದ ಧನುಂಜಯ್ ರೆಡ್ಡಿ, ಕೃಷ್ಣ ಮೋಹನ್ ರೆಡ್ಡಿ ಮತ್ತು ಬಾಲಾಜಿ ಗೋವಿಂದಪ್ಪ ಅವರನ್ನು ಬಂಧಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ವಿಚಾರಣೆಗೆ ಹಾಜರಾಗಲು ಇಂದು ಬೆಳಗೆ ವಿಜಯವಾಡಕ್ಕೆ ಮಿಧುನ್ ರೆಡ್ಡಿ ಆಗಮಿಸಿದ್ದರು.

ಈ ಮಧ್ಯೆ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಅವರು ಸೇಡಿನ ರಾಜಕೀಯದಲ್ಲಿ ತೊಡಗಿದ್ದಾರೆ ಮತ್ತು ವೈಎಸ್ ಜಗನ್ ಮೋಹನ್ ರೆಡ್ಡಿ ಆಪ್ತರ ವಿರುದ್ಧ 'ಸುಳ್ಳು' ಪ್ರಕರಣಗಳನ್ನು ದಾಖಲಿಸಿದ್ದಾರೆ ಎಂದು ವೈಎಸ್‌ಆರ್‌ಸಿಪಿ ಆರೋಪಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

SCROLL FOR NEXT