ಸಂಸದ ಮಿಧುನ್ ರೆಡ್ಡಿ  
ದೇಶ

ಆಂಧ್ರ ಪ್ರದೇಶ: ಮದ್ಯ ಹಗರಣ; YSRCP ಸಂಸದ ಮಿಧುನ್ ರೆಡ್ಡಿ ಬಂಧನ

ಮದ್ಯ ಹಗರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡವು ಮಿಧುನ್ ರೆಡ್ಡಿಯನ್ನು ಇಂದು ಹಲವು ಗಂಟೆಗಳ ಕಾಲ ತನಿಖೆ ನಡೆಸಿತು.

ವಿಜಯವಾಡ: ಆಂಧ್ರ ಪ್ರದೇಶದ ಹಿಂದಿನ ವೈಎಸ್‌ಆರ್‌ಸಿಪಿ ಸರ್ಕಾರದ ಅವಧಿಯಲ್ಲಿ ನಡೆದಿದೆ ಎನ್ನಲಾದ ರೂ. 3,200 ಕೋಟಿ ಮೊತ್ತದ ಮದ್ಯ ಹಗರಣದಲ್ಲಿ ವೈಎಸ್‌ಆರ್‌ಸಿಪಿ ಲೋಕಸಭಾ ಸದಸ್ಯ ಪಿವಿ ಮಿಧುನ್ ರೆಡ್ಡಿ ಅವರನ್ನು ಪೊಲೀಸರು ಶನಿವಾರ ಬಂಧಿಸಿದ್ದಾರೆ.

ಮದ್ಯ ಹಗರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡವು ಮಿಧುನ್ ರೆಡ್ಡಿಯನ್ನು ಇಂದು ಹಲವು ಗಂಟೆಗಳ ಕಾಲ ತನಿಖೆ ನಡೆಸಿತು. ಬಳಿಕ ವಿಜಯವಾಡದಲ್ಲಿನ ಅವರ ನಿವಾಸದಲ್ಲಿ ರಾತ್ರಿ 7-30ರ ಸುಮಾರಿನಲ್ಲಿ ಬಂಧಿಸಿತು.

ಮಿಧುನ್ ರೆಡ್ಡಿ ಅವರನ್ನು ಬಂಧಿಸಲಾಗಿದ್ದು, ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸುವ ಪ್ರಕ್ರಿಯೆ ನಡೆಯುತ್ತಿದೆ ಎಂದು ಎಂದು ಗೃಹ ಸಚಿವ ವಂಗಲಪುಡಿ ಅನಿತಾ ಹೇಳಿದ್ದಾರೆ. ಮಿಧುನ್ ರೆಡ್ಡಿ ಅವರು ಆಂಧ್ರಪ್ರದೇಶದ ರಾಜಂಪೇಟೆ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದಾರೆ.

ಮದ್ಯ ಹಗರಣದಲ್ಲಿ ಇತರ ಆರೋಪಿಗಳಾದ ಧನುಂಜಯ್ ರೆಡ್ಡಿ, ಕೃಷ್ಣ ಮೋಹನ್ ರೆಡ್ಡಿ ಮತ್ತು ಬಾಲಾಜಿ ಗೋವಿಂದಪ್ಪ ಅವರನ್ನು ಬಂಧಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ವಿಚಾರಣೆಗೆ ಹಾಜರಾಗಲು ಇಂದು ಬೆಳಗೆ ವಿಜಯವಾಡಕ್ಕೆ ಮಿಧುನ್ ರೆಡ್ಡಿ ಆಗಮಿಸಿದ್ದರು.

ಈ ಮಧ್ಯೆ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಅವರು ಸೇಡಿನ ರಾಜಕೀಯದಲ್ಲಿ ತೊಡಗಿದ್ದಾರೆ ಮತ್ತು ವೈಎಸ್ ಜಗನ್ ಮೋಹನ್ ರೆಡ್ಡಿ ಆಪ್ತರ ವಿರುದ್ಧ 'ಸುಳ್ಳು' ಪ್ರಕರಣಗಳನ್ನು ದಾಖಲಿಸಿದ್ದಾರೆ ಎಂದು ವೈಎಸ್‌ಆರ್‌ಸಿಪಿ ಆರೋಪಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Video: ಶ್ರೀಲಂಕಾ ಕರಾವಳಿಯಲ್ಲಿ ಇರಾನ್ ಯುದ್ಧನೌಕೆ ಮೇಲೆ ಅಮೆರಿಕ ದಾಳಿ; ಕನಿಷ್ಠ 87 ನಾವಿಕರು ಸಾವು

T20 World Cup 2026: Allen ದಾಖಲೆ ಶತಕ; ಅಜೇಯ ಆಫ್ರಿಕಾ ಮಣಿಸಿ ಫೈನಲ್‌ಗೆ ಲಗ್ಗೆ ಇಟ್ಟ ನ್ಯೂಜಿಲ್ಯಾಂಡ್!

'ನರಕ.. ಇರಾನ್ ಅಲ್ಲದವರಾದ್ರೆ ಮುಚ್ಕೊಂ*ರಿ': Khamenei ಸಾವಿಗೆ ಅಳುವ ಭಾರತೀಯ ಮುಸ್ಲಿಂ ಮಹಿಳೆಯರ ಲೇವಡಿ ಮಾಡಿದ ಇರಾನ್ ಮಹಿಳೆಯರು!

ಸೌದಿ ಅರೇಬಿಯಾ ಮೇಲೆ ದಾಳಿ ಬೇಡ: ನಾವು ಯುದ್ಧಕ್ಕೆ ಇಳಿಯಬೇಕಾಗುತ್ತೆ; ಇರಾನ್‌ಗೆ ಪಾಕಿಸ್ತಾನ ನೇರ ಧಮ್ಕಿ!

ವಾಣಿಜ್ಯ, ಕೈಗಾರಿಕಾ ವಲಯಕ್ಕೆ ವಿದ್ಯುತ್ ದರ ಏರಿಕೆ ಶಾಕ್; ಆದ್ರೆ ರೈತರಿಗೆ ಗುಡ್ ನ್ಯೂಸ್!

SCROLL FOR NEXT