ವಿಪುಲ್ ಕಂಜಿ ವಘೇಲಾ (34), ಅವರ ಪತ್ನಿ ಸೋನಾಲ್ (26) 
ದೇಶ

ಅಹಮದಾಬಾದ್: ಒಂದೇ ಕುಟುಂಬದ ಮೂವರು ಮಕ್ಕಳು ಸೇರಿದಂತೆ ದಂಪತಿ ಸಾವು; ಬಾಡಿಗೆ ಮನೆಯಲ್ಲಿ ಐದು ಶವಗಳು ಪತ್ತೆ!

ಶನಿವಾರ (ಜುಲೈ 19) ರಾತ್ರಿ ಮೃತರು ವಿಷ ಸೇವಿಸಿರಬಹುದು ಎಂದು ಶಂಕಿಸಲಾಗಿದೆ. ಭಾನುವಾರ ಬೆಳಿಗ್ಗೆ ಯಾರೂ ಹೊರಗೆ ಬಾರದ ಕಾರಣ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಗಾಂಧಿನಗರ​: ಒಂದೇ ಕುಟುಂಬದ ಐವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗುಜರಾತ್‌ನ ಅಹಮದಾಬಾದ್‌ನ ಬಾವ್ಲಾ ತಾಲೂಕಿನಲ್ಲಿ ನಡೆದಿದೆ.

ಮೃತರನ್ನು ಬಾಗೋದರಾ ಬಸ್ ನಿಲ್ದಾಣದ ಬಳಿಯ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದ ರಿಕ್ಷಾ ಚಾಲಕ ವಿಪುಲ್ ಕಾಂಜಿ ವಾಘೇಲಾ (34), ಅವರ ಪತ್ನಿ ಸೋನಾಲ್ (26), ಮಕ್ಕಳಾದ ಕರೀನಾ ಅಲಿ ಸಿಮ್ರಾನ್ (11), ಮಯೂರ (5) ಮತ್ತು ರಾಜ್‌ಕುಮಾರ್ (8) ಎಂದು ಗುರುತಿಸಲಾಗಿದೆ

ಶನಿವಾರ (ಜುಲೈ 19) ರಾತ್ರಿ ಮೃತರು ವಿಷ ಸೇವಿಸಿರಬಹುದು ಎಂದು ಶಂಕಿಸಲಾಗಿದೆ. ಭಾನುವಾರ ಬೆಳಿಗ್ಗೆ ಯಾರೂ ಹೊರಗೆ ಬಾರದ ಕಾರಣ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಬಂದಾಗ ದಂಪತಿ ಮತ್ತು ಅವರ ಮೂವರು ಮಕ್ಕಳು ಮೃತಪಟ್ಟಿರುವುದು ಕಂಡುಬಂದಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ಘಟನೆಯ ತನಿಖೆ ಆರಂಭಿಸಿದ್ದಾರೆ. ಪೊಲೀಸರು ಅವರ ಊರು ಗುಜರಾತ್‌ನ ಹತ್ತಿರದ ಪಟ್ಟಣವಾದ ಧೋಲ್ಕಾ ಎಂದು ಗುರುತಿಸಿದ್ದಾರೆ.

ವಿಪುಲ್ ಕಾಂಜಿಭಾಯ್ ವಘೇಲಾ ಆಟೋ ಚಾಲಕನಾಗಿ ಕೆಲಸ ಮಾಡುತ್ತಾರೆ. ಸೋನಲ್ ವಿಪುಲ್‌ಭಾಯ್ ವಘೇಲಾ ಗೃಹಿಣಿ. ಕರೀನಾ ಅಲಿಯಾಸ್ ಸಿಮ್ರಾನ್ ವಿಪುಲ್‌ಭಾಯ್ ವಘೇಲಾ, ಮಯೂರ್ ವಿಪುಲ್‌ಭಾಯ್ ವಘೇಲಾ ಮತ್ತು ಯುವರಾಜ್ ವಿಪುಲ್‌ಭಾಯ್ ವಘೇಲಾ ವ್ಯಾಸಂಗ ಮಾಡುತ್ತಿದ್ದರು.

ಈ ಕುಟುಂಬವು ಮೂಲತಃ ಧೋಲ್ಕಾದ ಬಾರ್ಕೋಟಾದ ದೇವಿಪೂಜಕ್ ವಾಸ್ ಪ್ರದೇಶಕ್ಕೆ ಸೇರಿದವರಾಗಿದ್ದು, ಸ್ವಲ್ಪ ಸಮಯದಿಂದ ಬಾಗೋದ್ರಾದಲ್ಲಿ ವಾಸಿಸುತ್ತಿದ್ದರು. ವಿಪುಲ್ ವಘೇಲಾ ತಮ್ಮ ಕುಟುಂಬವನ್ನು ಪೋಷಿಸಲು ಆಟೋ ರಿಕ್ಷಾ ಓಡಿಸುತ್ತಿದ್ದರು. ಕುಟುಂಬ ಸದಸ್ಯರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಸಾಮೂಹಿಕ ಆತ್ಮಹತ್ಯೆಗೆ ಕಾರಣ ಇನ್ನೂ ತಿಳಿದುಬಂದಿಲ್ಲ. ಇಲ್ಲಿಯವರೆಗೆ ಯಾವುದೇ ಆತ್ಮಹತ್ಯೆ ಪತ್ರ ಪತ್ತೆಯಾಗಿಲ್ಲ. ಆದಾಗ್ಯೂ, ಆರ್ಥಿಕ ಒತ್ತಡದಿಂದಾಗಿ ಇಡೀ ಕುಟುಂಬ ಆತ್ಮಹತ್ಯೆ ಮಾಡಿಕೊಂಡಿದೆ ಎಂದು ಶಂಕಿಸಲಾಗಿದೆ. ದಂಪತಿ ಮಕ್ಕಳಿಗೆ ವಿಷ ನೀಡಿ ನಂತರ ವಿಷ ಸೇವಿಸಿದ್ದಾರೆ ಎಂದು ನಂಬಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

ಶಿಬು ಸೊರೇನ್ 'ರಾಜ್ಯದ ಪಿತಾಮಹ' ಎಂದು ಘೋಷಿಸುವಂತೆ ಜೆಎಂಎಂ ಆಗ್ರಹ

Indian Stock Market: ಸತತ ಕುಸಿತ, ಬರೊಬ್ಬರಿ ಶೇ.1ರಷ್ಟು ಕುಸಿದ Sensex, Nifty 50, ರೂಪಾಯಿ ಮೌಲ್ಯ ಇಳಿಕೆ!

SCROLL FOR NEXT