ಪ್ರಧಾನಿ ಮೋದಿ 
ದೇಶ

ಜುಲೈ 23 ರಿಂದ ಪ್ರಧಾನಿ ಮೋದಿ ಯುಕೆ, ಮಾಲ್ಡೀವ್ಸ್‌ಗೆ ಪ್ರವಾಸ

ತಮ್ಮ ಪ್ರವಾಸದ ಮೊದಲ ಚರಣದಲ್ಲಿ ಬ್ರಿಟಿಷ್ ಪ್ರಧಾನಿ ಕೀರ್ ಸ್ಟಾರ್ಮರ್ ಅವರೊಂದಿಗೆ ವ್ಯಾಪಕ ಮಾತುಕತೆಗಾಗಿ ಲಂಡನ್‌ಗೆ ತೆರಳಲಿದ್ದಾರೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ತಿಳಿಸಿದೆ.

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರದಿಂದ ನಾಲ್ಕು ದಿನ ಯುನೈಟೆಡ್ ಕಿಂಗ್‌ಡಮ್ ಮತ್ತು ಮಾಲ್ಡೀವ್ಸ್‌ಗೆ ಭೇಟಿ ನೀಡಲಿದ್ದಾರೆ. ವ್ಯಾಪಾರ, ಹೂಡಿಕೆ ಮತ್ತು ರಕ್ಷಣಾ ಕ್ಷೇತ್ರಗಳಲ್ಲಿ ದ್ವಿಪಕ್ಷೀಯ ಸಂಬಂಧಗಳನ್ನು ಬಲಪಡಿಸುವುದು ಈ ಭೇಟಿಯ ಉದ್ದೇಶವಾಗಿದೆ.

ತಮ್ಮ ಪ್ರವಾಸದ ಮೊದಲ ಚರಣದಲ್ಲಿ ಬ್ರಿಟಿಷ್ ಪ್ರಧಾನಿ ಕೀರ್ ಸ್ಟಾರ್ಮರ್ ಅವರೊಂದಿಗೆ ವ್ಯಾಪಕ ಮಾತುಕತೆಗಾಗಿ ಲಂಡನ್‌ಗೆ ತೆರಳಲಿದ್ದಾರೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ತಿಳಿಸಿದೆ. ಭಾರತ-ಯುಕೆ ದ್ವಿಪಕ್ಷೀಯ ಸಂಬಂಧಗಳ ಬಲವರ್ಧನೆ ಕುರಿತು ಪಿಎಂ ಸ್ಟಾರ್ಮರ್ ಅವರೊಂದಿಗೆ ಪ್ರಧಾನಿ ಮೋದಿ ವ್ಯಾಪಕ ಚರ್ಚೆ ನಡೆಸಲಿದ್ದಾರೆ. ಜೊತೆಗೆ ಪ್ರಾದೇಶಿಕ ಮತ್ತು ಜಾಗತಿಕ ಮಹತ್ವದ ವಿಷಯಗಳ ಬಗ್ಗೆ ವಿಚಾರ ವಿನಿಮಯ ನಡೆಸಲಿದ್ದಾರೆ.

ಮೋದಿಯವರ ಯುಕೆ ಪ್ರವಾಸವು ಅವರ ನಾಲ್ಕನೇ ಭೇಟಿಯಾಗಿದ್ದು, ರಾಜ ಮೂರನೇ ಚಾರ್ಲ್ಸ್ ಅವರನ್ನು ಭೇಟಿಯಾಗುವ ನಿರೀಕ್ಷೆಯಿದೆ ಎಂದು MEA ಹೇಳಿದೆ.

ಭೇಟಿ ವೇಳೆ ವ್ಯಾಪಾರ ಮತ್ತು ಆರ್ಥಿಕತೆ, ತಂತ್ರಜ್ಞಾನ, ನಾವೀನ್ಯತೆ, ರಕ್ಷಣೆ, ಭದ್ರತೆ, ಹವಾಮಾನ, ಆರೋಗ್ಯ, ಶಿಕ್ಷಣ ಮತ್ತು ಜನರ ನಡುವಿನ ಸಂಬಂಧಗಳ ಮೇಲೆ ಗಮನ ಕೇಂದ್ರೀಕರಿಸಿದ ಸಮಗ್ರ ಕಾರ್ಯತಂತ್ರದ ಪಾಲುದಾರಿಕೆ (CSP) ಪ್ರಗತಿ ಕುರಿತು ಉಭಯ ದೇಶಗಳ ನಾಯಕರು ಪರಾಮರ್ಶೆ ನಡೆಸಲಿದ್ದಾರೆ.

ಜುಲೈ 26 ರಂದು ದ್ವೀಪರಾಷ್ಟ್ರದ 60ನೇ ಸ್ವಾತಂತ್ರ್ಯೋತ್ಸವದಲ್ಲಿ ಪಾಲ್ಗೊಳ್ಳಲು ಮೋದಿ ಅವರು ಲಂಡನ್‌ನಿಂದ ಮಾಲ್ಡೀವ್ಸ್‌ಗೆ ಪ್ರಯಾಣಿಸಲಿದ್ದಾರೆ.

ಅಧ್ಯಕ್ಷ ಮೊಹಮ್ಮದ್ ಮುಯಿಝು ಅವರ ಆಹ್ವಾನದ ಮೇರೆಗೆ ಪ್ರಧಾನಿ ಮೋದಿ ಜುಲೈ 25 ರಿಂದ 26 ರವರೆಗೆ ಮಾಲ್ಡೀವ್ಸ್‌ಗೆ ರಾಜ್ಯ ಪ್ರವಾಸ ಕೈಗೊಳ್ಳಲಿದ್ದಾರೆ. ಮಾಲ್ಡೀವ್ಸ್‌ಗೆ ಮೋದಿಯವರ ಮೂರನೇ ಭೇಟಿ ಇದಾಗಿದೆ. ಪ್ರಧಾನಿ ಮೋದಿ ಮತ್ತು ಅಧ್ಯಕ್ಷ ಮುಯಿಝು ಅವರು ಪರಸ್ಪರ ಹಿತಾಸಕ್ತಿಯ ವಿಷಯಗಳ ಕುರಿತು ಚರ್ಚೆ ನಡೆಸಲಿದ್ದಾರೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ತಿಳಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜಧಾನಿ 'ಚಂಡೀಗಢ' ಕಸಿದುಕೊಳ್ಳಲು ಪಿತೂರಿ: ಕೇಂದ್ರದ ವಿರುದ್ಧ ಸಿಡಿದೆದ್ದ ಪಂಜಾಬ್! ಗಂಭೀರ ಪರಿಣಾಮದ ಎಚ್ಚರಿಕೆ

ರಾಜ್ಯದ ಜನತೆ ದಿನಬೆಳಗಾದರೆ ನೋಡಿ ಬೇಸತ್ತು ಹೋಗಿದ್ದಾರೆ, ಕಾಂಗ್ರೆಸ್ ಹೈಕಮಾಂಡ್ ಸಿಎಂ ಯಾರು ಎಂದು ಸ್ಪಷ್ಟಪಡಿಸಲಿ: ಆರ್ ಅಶೋಕ್

ಬೆಂಗಳೂರು ಎಟಿಎಂ ವ್ಯಾನ್ ದರೋಡೆ: ದರೋಡೆ ಹಿಂದಿನ ಅಸಲಿ ಕಾರಣ ಬಹಿರಂಗ! ಇಡೀ ಪ್ರಕರಣದ ಸೂತ್ರದಾರ ಯಾರು ಗೊತ್ತಾ?

ಮದುವೆ ಸಂಭ್ರಮದಲ್ಲಿ ಸ್ಮೃತಿ ಮಂಧಾನ: ಪಲಾಶ್ ಮುಚ್ಚಲ್ ಜೊತೆಗೆ ಮಸ್ತ್ ಡ್ಯಾನ್ಸ್! Video ವೈರಲ್

ಭೂ ಸ್ವಾಧೀನ ಕೋರ್ಟ್ ಪ್ರಕರಣಗಳ ಕರ್ತವ್ಯ ಲೋಪ, ತನಿಖೆಗೆ ಎಸ್ ಐಟಿ ರಚನೆ- ಡಿಕೆ ಶಿವಕುಮಾರ್

SCROLL FOR NEXT