ಡಿಎಂಕೆ ಸೇರಿದ ಅನ್ವರ್ ರಾಜಾ 
ದೇಶ

AIADMK ಸಂಘಟನಾ ಕಾರ್ಯದರ್ಶಿ ಅನ್ವರ್ ರಾಜಾ ಡಿಎಂಕೆ ಸೇರ್ಪಡೆ

ಬಿಜೆಪಿ ಜೊತೆಗಿನ ಚುನಾವಣಾ ಸಂಬಂಧವನ್ನು ಪುನರುಜ್ಜೀವನಗೊಳಿಸಿದಾಗಿನಿಂದ ಅನ್ವರ್ ರಾಜಾ ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ಎಡಪ್ಪಾಡಿ ಕೆ ಪಳನಿಸ್ವಾಮಿ ಅವರನ್ನು ಪ್ರಬಲವಾಗಿ ಟೀಕಿಸುತ್ತಿದ್ದಾರೆ.

ಚೆನ್ನೈ: ಎಐಎಡಿಎಂಕೆಯ ಸಂಘಟನಾ ಕಾರ್ಯದರ್ಶಿ ಮತ್ತು ಮಾಜಿ ಸಂಸದ ಅನ್ವರ್ ರಾಜಾ ಸೋಮವಾರ ತಮಿಳುನಾಡು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ಸಮ್ಮುಖದಲ್ಲಿ ಡಿಎಂಕೆ ಸೇರಿದ್ದಾರೆ.

ಬಿಜೆಪಿ ಜೊತೆಗಿನ ಚುನಾವಣಾ ಸಂಬಂಧವನ್ನು ಪುನರುಜ್ಜೀವನಗೊಳಿಸಿದಾಗಿನಿಂದ ಅನ್ವರ್ ರಾಜಾ ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ಎಡಪ್ಪಾಡಿ ಕೆ ಪಳನಿಸ್ವಾಮಿ ಅವರನ್ನು ಪ್ರಬಲವಾಗಿ ಟೀಕಿಸುತ್ತಿದ್ದಾರೆ.

ಕೇಂದ್ರದಲ್ಲಿ ಬಿಜೆಪಿ ನೇತೃತ್ವದ ಸರ್ಕಾರ ಒಡ್ಡಿರುವ ಹಿಂದಿ ಹೇರಿಕೆ ಮತ್ತು ರಾಜ್ಯ ಸ್ವಾಯತ್ತಾ ಬೆದರಿಕೆಗಳಿಂದ ತಮಿಳುನಾಡನ್ನು ರಕ್ಷಿಸಲು ಡಿಎಂಕೆ ಸೇರುವುದನ್ನು ಬಿಟ್ಟು ಬೇರೆ ದಾರಿಯಿಲ್ಲ ಎಂದು ರಾಜಾ ಹೇಳಿದರು.

ಸುದ್ದಿಗಾರರನ್ನುದ್ದೇಶಿಸಿ ಮಾತನಾಡಿದ ರಾಜಾ, "ಮೊದಲು ಎಐಎಡಿಎಂಕೆಯನ್ನು ನಾಶಮಾಡಿ ನಂತರ ಡಿಎಂಕೆ ವಿರುದ್ಧ ಹೋರಾಡುವುದು ಬಿಜೆಪಿಯ ಕಾರ್ಯಸೂಚಿಯಾಗಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಒಮ್ಮೆಯೂ ಪಳನಿಸ್ವಾಮಿ ಮುಖ್ಯಮಂತ್ರಿ ಅಭ್ಯರ್ಥಿಯಾಗುತ್ತಾರೆ ಎಂದು ಹೇಳಿಲ್ಲ. ಅವರು ತಮಿಳುನಾಡಿನಲ್ಲಿ ಎನ್‌ಡಿಎ ಸರ್ಕಾರ ರಚಿಸುತ್ತದೆ ಎಂದು ಮಾತ್ರ ಹೇಳಿದ್ದರು ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

ಬಾನು ಮುಷ್ತಾಕ್‌ ದಸರಾ ಉದ್ಘಾಟನೆಗೆ ಆಕ್ಷೇಪ; ಮುಸ್ಲಿಂ ದ್ವೇಷ ಮನಸ್ಥಿತಿಯನ್ನು ಬದಿಗಿಟ್ಟು, ಸಂವಿಧಾನದ ಆಶಯ ಅರ್ಥ ಮಾಡಿಕೊಳ್ಳಿ: ಸಚಿವ ಹೆಚ್.ಸಿ.ಮಹದೇವಪ್ಪ

SCROLL FOR NEXT