ಸಿಎಂ ನಿತೀಶ್ ಕುಮಾರ್ 
ದೇಶ

ಬಿಹಾರ: ನಿತೀಶ್ ಅಪರಾಧ ನಿಯಂತ್ರಿಸಲಾಗದಿದ್ದರೆ ಪುತ್ರ ನಿಶಾಂತ್ ಗೆ ಜವಾಬ್ದಾರಿ ಹಸ್ತಾಂತರಿಸಲಿ- ಮಾಜಿ ಸಿಎಂ ರಾಬ್ರಿದೇವಿ

ನಿತೀಶ್ ಕುಮಾರ್ ನೇತೃತ್ವದ ಎನ್‌ಡಿಎ ಸರ್ಕಾರಕ್ಕೆ ಅಪರಾಧ ತಡೆಗಟ್ಟಲು ಸಾಧ್ಯವಾಗಿಲ್ಲ. ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಸಂಪೂರ್ಣವಾಗಿ ಕುಸಿದಿದೆ.

ಪಾಟ್ನಾ: ಬಿಹಾರ ಮುಖ್ಯಮಂತ್ರಿ ನಿತೀಶ್‌ ಕುಮಾರ್‌ ಅವರು ಜೆಡಿಯು ನಾಯಕತ್ವವನ್ನು ತಮ್ಮ ಪುತ್ರ ನಿಶಾಂತ್ ಕುಮಾರ್ ಗೆ ವರ್ಗಾಯಿಸುವಂತೆ ರಾಷ್ಟ್ರೀಯ ಲೋಕ ಮೋರ್ಚಾ (RLM) ಮುಖ್ಯಸ್ಥ ಉಪೇಂದ್ರ ಕುಶ್ವಾಹಾ ಮನವಿ ಮಾಡಿದ ಬೆನ್ನಲ್ಲೇ ಬಿಹಾರ ವಿಧಾನಪರಿಷತ್ ವಿಪಕ್ಷ ನಾಯಕಿ ಮತ್ತು ಮಾಜಿ ಮುಖ್ಯಮಂತ್ರಿಯಾದ ರಾಬ್ರಿದೇವಿ ಸೋಮವಾರ ಇದೇ ರೀತಿ ಒತ್ತಾಯಿಸಿದ್ದಾರೆ.

ರಾಜ್ಯ ವಿಧಾನಮಂಡಲದ ಮುಂಗಾರು ಅಧಿವೇಶನದ ಮೊದಲ ದಿನ ವಿಧಾನಸಭೆ ಆವರಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ರಾಬ್ರಿದೇವಿ, ರಾಜ್ಯಾದ್ಯಂತ ಹೆಚ್ಚುತ್ತಿರುವ ಅಪರಾಧ ಘಟನೆಗಳ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು ನಿತೀಶ್ ಸರ್ಕಾರವನ್ನು ನಡೆಸಲು ಸಾಧ್ಯವಾಗದಿದ್ದರೆ, ಜನರ ಹಿತದೃಷ್ಟಿಯಿಂದ ಮಗನಿಗೆ ಜವಾಬ್ದಾರಿಯನ್ನು ವಹಿಸಲಿ ಎಂದು ಹೇಳಿದರು.

ನಿತೀಶ್ ಕುಮಾರ್ ನೇತೃತ್ವದ ಎನ್‌ಡಿಎ ಸರ್ಕಾರಕ್ಕೆ ಅಪರಾಧ ತಡೆಗಟ್ಟಲು ಸಾಧ್ಯವಾಗಿಲ್ಲ. ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಸಂಪೂರ್ಣವಾಗಿ ಕುಸಿದಿದೆ. ನಿತೀಶ್ ಅವರು ಗೃಹ ಖಾತೆಯನ್ನು ಹೊಂದಿದ್ದು, ಅದಕ್ಕೆ ರಾಜೀನಾಮೆ ಸಲ್ಲಿಸಲು ಅವರು ಸಿದ್ಧರಿಲ್ಲ. ಹೀಗಾಗಿ ತನ್ನ ಪುತ್ರ ನಿಶಾಂತ್ ಅವರಿಗೆ ಜವಾಬ್ದಾರಿಯನ್ನು ಹಸ್ತಾಂತರಿಸಲಿ ಎಂದು ರಾಬ್ರಿದೇವಿ ಒತ್ತಾಯಿಸಿದರು.

ರಾಜ್ಯ ವಿಧಾನಮಂಡಲದ ಮುಂಗಾರು ಅಧಿವೇಶನದ ಮೊದಲ ದಿನವಾದ ಇಂದು ರಾಜ್ಯದಲ್ಲಿನ ಕಾನೂನು ಸುವ್ಯವಸ್ಥೆ ವಿಚಾರ ಪ್ರಸ್ತಾಪಿಸಿ ಪ್ರತಿಪಕ್ಷಗಳು ಸರ್ಕಾರದ ವಿರುದ್ಧ ಮುಗಿಬಿದ್ದವು. ಇದೇ ವರ್ಷದ ಅಕ್ಟೋಬರ್-ನವೆಂಬರ್ ನಲ್ಲಿ ವಿಧಾನಸಭಾ ಚುನಾವಣೆ ನಡೆಯುವುದರಿಂದ ಎನ್ ಡಿಎ ಸರ್ಕಾರದ ಕೊನೆಯ ಅಧಿವೇಶನ ಇದಾಗಿದೆ.

ಇಲ್ಲಿಯವರೆಗೂ ಸಕ್ರಿಯ ರಾಜಕಾರಣಕ್ಕೆ ಧುಮ್ಮುಕುವ ಉದ್ದೇಶ ಸ್ಪಷ್ಪಪಡಿಸದ ನಿಶಾಂತ್ ಕುಮಾರ್ ಗೆ ಜೆಡಿಯು ನಾಯಕತ್ವವನ್ನು ಹಸ್ತಾಂತರಿಸಬೇಕು ಎಂದು RLM ಮುಖ್ಯಸ್ಥ ರಾಬ್ರಿದೇವಿ ಭಾನುವಾರ ನಿತೀಶ್ ಕುಮಾರ್ ಅವರನ್ನು ಒತ್ತಾಯಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಡಿಕೆ ಶಿವಕುಮಾರ್ ಇದ್ದ ವೇದಿಕೆಯಲ್ಲೇ ಹೈಡ್ರಾಮಾ: RSS ಸಮವಸ್ತ್ರದಲ್ಲಿ ಬಿಜೆಪಿ ಶಾಸಕ ಮುನಿರತ್ನ ಧರಣಿ! Video

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

SCROLL FOR NEXT