ನ್ಯಾಯಮೂರ್ತಿ ಯಶವಂತ್ ವರ್ಮಾ 
ದೇಶ

ನಗದು ಪತ್ತೆ ಪ್ರಕರಣ: ನ್ಯಾ. ಯಶವಂತ್ ವರ್ಮಾ ವಿರುದ್ಧ ಮಹಾಭಿಯೋಗ ಪ್ರಕ್ರಿಯೆ ಆರಂಭ, ಮುಂದೇನು..?

ಲೋಕಸಭೆಯ 145 ಮತ್ತು ರಾಜ್ಯಸಭೆಯ 63 ಸಂಸದರು ಯಶವಂತ್ ವರ್ಮಾ ವಿರುದ್ಧ ವಾಗ್ದಂಡನೆ ಕೋರಿ ಲೋಕಸಭೆಯ ಸ್ಪೀಕರ್‌ ಮತ್ತು ರಾಜ್ಯಸಭೆಯ ಸಭಾಧ್ಯಕ್ಷರಿಗೆ ನೋಟಿಸ್‌ ನೀಡಿದ್ದಾರೆ.

ನವದೆಹಲಿ: ಅಲಹಾಬಾದ್ ಹೈಕೋರ್ಟ್ ನ್ಯಾಯಾಧೀಶ ಯಶವಂತ್ ವರ್ಮಾ ವಿರುದ್ಧ ಮಹಾಭಿಯೋಗ ಪ್ರಸ್ತಾವನೆಯ ಪ್ರಕ್ರಿಯೆಗೆ ಸೋಮವಾರ ಸಂಸತ್ತಿನಲ್ಲಿ ಅಧಿಕೃತ ಚಾಲನೆ ಸಿಕ್ಕಿದ್ದು, ನಗದು ಪತ್ತೆ ಪ್ರಕರಣದಲ್ಲಿ ನ್ಯಾಯಮೂರ್ತಿ ವರ್ಮಾ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ಪಕ್ಷಾತೀತವಾಗಿ 200 ಕ್ಕೂ ಹೆಚ್ಚು ಸಂಸತ್ ಸದಸ್ಯರು (ಸಂಸದರು) ಅಂಕಿತ ಹಾಕಿದ್ದಾರೆ.

ಲೋಕಸಭೆಯ 145 ಮತ್ತು ರಾಜ್ಯಸಭೆಯ 63 ಸಂಸದರು ಯಶವಂತ್ ವರ್ಮಾ ವಿರುದ್ಧ ವಾಗ್ದಂಡನೆ ಕೋರಿ ಲೋಕಸಭೆಯ ಸ್ಪೀಕರ್‌ ಮತ್ತು ರಾಜ್ಯಸಭೆಯ ಸಭಾಧ್ಯಕ್ಷರಿಗೆ ನೋಟಿಸ್‌ ನೀಡಿದ್ದಾರೆ.

ರಾಜ್ಯಸಭೆಯ ಸ್ಪೀಕರ್‌ ಜಗದೀಪ್‌ ಧನಕರ್‌ ಅವರಿಗೆ ಸಲ್ಲಿಕೆಯಾದ ಪತ್ರಕ್ಕೆ AAP ಮತ್ತು ಇಂಡಿಯಾ ಕೂಟದ ನಾಯಕರು ಸೇರಿದಂತೆ 63 ರಾಜ್ಯಸಭಾ ಸದಸ್ಯರು ಅಂಕಿತ ಹಾಕಿದ್ದಾರೆ.

ಸಂವಿಧಾನದ 124, 217 ಮತ್ತು 218 ನೇ ವಿಧಿಗಳ ಅಡಿಯಲ್ಲಿ ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರಿಗೆ ನೋಟಿಸ್ ಸಲ್ಲಿಸಲಾಗಿದೆ.

ಮಹಾಭಿಯೋಗ ಪ್ರಕ್ರಿಯೆ ಹೇಗೆ ನಡೆಯುತ್ತದೆ?

ನ್ಯಾಯಾಧೀಶರ ಪದಚ್ಯುತಿಗೆ ಲೋಕಸಭೆಯಲ್ಲಿ ಕನಿಷ್ಠ 100 ಸದಸ್ಯರು ಮತ್ತು ರಾಜ್ಯಸಭೆಯಲ್ಲಿ ಕನಿಷ್ಠ 50 ಸದಸ್ಯರು ಸಹಿ ಹಾಕಬೇಕು. ಈ ಪ್ರಸ್ತಾವನೆಯನ್ನು ಸ್ಪೀಕರ್ ಅಥವಾ ಅಧ್ಯಕ್ಷರು ಅಂಗೀಕರಿಸಬಹುದು ಅಥವಾ ತಿರಸ್ಕರಿಸಬಹುದು.

ನ್ಯಾಯಾಧೀಶರ (ವಿಚಾರಣಾ) ಕಾಯ್ದೆಯ ಪ್ರಕಾರ, ಸಂಸತ್ತಿನ ಎರಡೂ ಸದನಗಳಲ್ಲಿ ಒಂದೇ ದಿನ ಪ್ರಸ್ತಾವನೆಯ ನೋಟೀಸ್ ಸಲ್ಲಿಸಿದಾಗ, ನ್ಯಾಯಾಧೀಶರ ವಿರುದ್ಧ ಹೊರಿಸಲಾದ ಆರೋಪಗಳನ್ನು ಪರಿಶೀಲಿಸಲು ಲೋಕಸಭಾ ಸ್ಪೀಕರ್ ಮತ್ತು ರಾಜ್ಯಸಭೆಯ ಅಧ್ಯಕ್ಷರು ಸಮಿತಿಯನ್ನು ರಚಿಸುತ್ತಾರೆ.

ಉಭಯ ಸದನಗಳಲ್ಲಿ ಪ್ರಸ್ತಾವನೆಯನ್ನು ಅಂಗೀಕರಿಸದ ಹೊರತು ಯಾವುದೇ ಸಮಿತಿಯನ್ನು ರಚಿಸಬಾರದು ಎಂದು ಕಾಯ್ದೆ ಹೇಳುತ್ತದೆ.

ಸಮಿತಿ ಸದಸ್ಯರು ಯಾರಾಗಿರುತ್ತಾರೆ?

ಸುಪ್ರೀಂ ಕೋರ್ಟ್‌ನ ಹಿರಿಯ ನ್ಯಾಯಾಧೀಶರು, ಹೈಕೋರ್ಟ್‌ನ ಹಾಲಿ ಮುಖ್ಯ ನ್ಯಾಯಮೂರ್ತಿ ಮತ್ತು ನ್ಯಾಯಶಾಸ್ತ್ರಜ್ಞರನ್ನು ಒಳಗೊಂಡ ಸಮಿತಿಯು ನ್ಯಾಯಮೂರ್ತಿ ವರ್ಮಾ ವಿರುದ್ಧದ ಆರೋಪಗಳ ತನಿಖೆ ನಡೆಸುತ್ತದೆ ಮತ್ತು ಮೂರು ತಿಂಗಳಲ್ಲಿ ವರದಿ ನೀಡುವಂತೆ ಸೂಚಿಸಲಾಗುತ್ತದೆ.

ಬಳಿಕ ಈ ತನಿಖಾ ವರದಿಯನ್ನು ಸಂಸತ್ತಿನಲ್ಲಿ ಮಂಡಿಸಲಾಗುತ್ತದೆ, ನಂತರ ಎರಡೂ ಸದನಗಳಲ್ಲಿ ಚರ್ಚೆ ನಡೆಯುತ್ತದೆ, ನಂತರ ನ್ಯಾಯಮೂರ್ತಿ ವರ್ಮಾ ಅವರನ್ನು ಪದಚ್ಯುತಗೊಳಿಸುವ ಪ್ರಸ್ತಾವನೆಯ ಮೇಲೆ ಮತದಾನ ನಡೆಯಲಿದೆ. ನ್ಯಾಯಾಧೀಶರನ್ನು ತೆಗೆದು ಹಾಕುವ ಬಗ್ಗೆ ನಿರ್ಧಾರ ಕೈಗೊಳ್ಳಲಾಗುತ್ತದೆ.

2/3ರಷ್ಟು ಬಹುಮತ ದೊರೆತರೆ ವರ್ಮಾರ ವಾಗ್ದಂಡನೆ ಅವಕಾಶ ಸಿಗುತ್ತದೆ. ಬಳಿಕ ಸಂಸತ್ತಿನ ಶಿಫಾರಸಿನ ಅನ್ವಯ ರಾಷ್ಟ್ರಪತಿಗಳು, ನ್ಯಾಯಾಧೀಶರ ವಜಾ ಮಾಡುತ್ತಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಗೆ ರೂ.10 ಕೋಟಿ: ಸುರಂಗ ರಸ್ತೆ ಯೋಜನೆಯಿಂದ 'ಸಸ್ಯೋದ್ಯಾನ'ದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ- ಡಿಕೆ ಶಿವಕುಮಾರ್

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

Belagavi: ಲವರ್ ಜೊತೆ ಮಗಳು ಪರಾರಿ; ಇಡೀ ಊರಿಗೆ 'ತಿಥಿ' ಊಟ ಹಾಕಿಸಿದ ತಂದೆ!

ದ್ವಿಶತಕ ಮಿಸ್: ಗಿಲ್ ತಪ್ಪಿನಿಂದ ರನ್ ಔಟ್ ಆಗಿ ತಲೆ ಚಚ್ಚಿಕೊಂಡ ಜೈಸ್ವಾಲ್; ಮೈದಾನ ತೊರೆಯುವಂತೆ ಅಂಪೈರ್ ತಾಕೀತು; Video!

SCROLL FOR NEXT