ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ನಿತ್ಯಾನಂದ ರೈ 
ದೇಶ

Census 2027: ಡಿಜಿಟಲ್ ದತ್ತಾಂಶ ಸಂಗ್ರಹ, ಜಾತಿ ಗಣತಿಗೆ ಸಿದ್ಧತೆ- MoS ನಿತ್ಯಾನಂದ ರೈ

ಲೋಕಸಭೆಗೆ ಲಿಖಿತ ರೂಪದಲ್ಲಿ ಉತ್ತರಿಸಿರುವ ಗೃಹ ಖಾತೆ ರಾಜ್ಯ ಸಚಿವ ನಿತ್ಯಾನಂದ ರೈ, ಜುಲೈ 3 ಮತ್ತು 4 ರಂದು ರಾಷ್ಟ್ರ ರಾಜಧಾನಿಯಲ್ಲಿ ನಡೆದ ಎರಡು ದಿನಗಳ ಸಮ್ಮೇಳನದಲ್ಲಿ ಚರ್ಚಿಸಲಾಗಿದೆ ಎಂದು ತಿಳಿಸಿದ್ದಾರೆ.

ನವದೆಹಲಿ: 2027 ರ ಜನಗಣತಿಗೆ ಸಿದ್ದತೆ ಆರಂಭಿಸಲಾಗಿದೆ ಎಂದು ಕೇಂದ್ರ ಗೃಹ ಸಚಿವಾಲಯ (MHA) ಮಂಗಳವಾರ ಹೇಳಿದೆ.

ಜಾತಿ ಗಣತಿ ಕಾರ್ಯತಂತ್ರ ಕುರಿತು ಚರ್ಚಿಸಲು ಇದೇ ತಿಂಗಳ ಆರಂಭದಲ್ಲಿ ಜನಗಣತಿ ಕಾರ್ಯಾಚರಣೆಗಳ ನಿರ್ದೇಶಕರ ಎರಡು ದಿನಗಳ ಸಮ್ಮೇಳನ ನಡೆಸಲಾಗಿದ್ದು, ಎರಡು ಹಂತಗಳಲ್ಲಿ ಜಾತಿಗಣತಿ ನಡೆಸಲಾಗುವುದು. ಇದರಲ್ಲಿ ಡಿಜಿಟಲ್ ಡೇಟಾ ಸಂಗ್ರಹಣೆ ಮತ್ತು ಜಾತಿ ಗಣತಿ ಒಳಗೊಂಡಿರುತ್ತದೆ ಎಂದು ಸಚಿವಾಲಯ ಸ್ಪಷ್ಪಪಡಿಸಿದೆ.

ಈ ಸಂಬಂಧ ಲೋಕಸಭೆಗೆ ಲಿಖಿತ ರೂಪದಲ್ಲಿ ಉತ್ತರಿಸಿರುವ ಗೃಹ ಖಾತೆ ರಾಜ್ಯ ಸಚಿವ ನಿತ್ಯಾನಂದ ರೈ, ಜುಲೈ 3 ಮತ್ತು 4 ರಂದು ರಾಷ್ಟ್ರ ರಾಜಧಾನಿಯಲ್ಲಿ ಎರಡು ದಿನಗಳ ಸಮ್ಮೇಳನವನ್ನು ಆಯೋಜಿಸಲಾಗಿತ್ತು. ಇದರಲ್ಲಿ ಜನಗಣತಿ ಕಾರ್ಯಾಚರಣೆಗಳ ನಿರ್ದೇಶಕರು, ಜನಗಣತಿ ಕಾರ್ಯಾಚರಣೆಗಳ ನಿರ್ದೇಶನಾಲಯಗಳ ಹಿರಿಯ ಅಧಿಕಾರಿಗಳು ಮತ್ತು ರಿಜಿಸ್ಟ್ರಾರ್ ಜನರಲ್ ಮತ್ತು ಸೆನ್ಸಸ್ ಕಮಿಷನರ್ ಕಚೇರಿಯ ಅಧಿಕಾರಿಗಳು ಭಾಗವಹಿಸಿದ್ದರು ಎಂದು ತಿಳಿಸಿದ್ದಾರೆ.

ಸಮ್ಮೇಳನದಲ್ಲಿ ಮುಂಬರುವ ಜನಗಣತಿ ಮತ್ತು ಸಂಬಂಧಿತ ಚಟುವಟಿಕೆಗಳ ಕುರಿತು ಕೈಗೊಳ್ಳಬೇಕಾದ ಕಾರ್ಯತಂತ್ರ ಕುರಿತು ಚರ್ಚಿಸಲಾಗಿದೆ. ಮೊಬೈಲ್ ಆ್ಯಪ್ ಮೂಲಕ ಡೇಟಾ ಸಂಗ್ರಹಣೆ, ಜನಗಣತಿ ನಿರ್ವಹಣೆ ಮತ್ತು ಮಾನಿಟರಿಂಗ್ ಸಿಸ್ಟಮ್ (CMMS) ಪೋರ್ಟಲ್ ಮೂಲಕ ನಿರ್ವಹಣೆ ಮತ್ತು ಮೇಲ್ವಿಚಾರಣೆ, ಸ್ವಯಂ-ಎಣಿಕೆ, ಜನಗಣತಿ ಸಿಬ್ಬಂದಿಯ ತರಬೇತಿ ಮತ್ತಿತರ ಪ್ರಮುಖ ವಿಷಯಗಳ ಕುರಿತು ಚರ್ಚಿಸಲಾಗಿದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.

ಹವಾಮಾನ ಮತ್ತು ಕಾರ್ಯತಂತ್ರದ ಕಾರಣದಿಂದ ಎರಡು ಹಂತಗಳಲ್ಲಿ ಗಣತಿ ನಡೆಯಲಿವೆ. 2027ರ ಮಾರ್ಚ್ 1 ರಿಂದ ದೇಶದ ಬಹುತೇಕ ಭಾಗಗಳಲ್ಲಿ, 2026ರ ಅಕ್ಟೋಬರ್ 1ರಿಂದ ಕೇಂದ್ರಾಡಳಿತ ಪ್ರದೇಶಗಳಾದ ಲಡಾಖ್, ಜಮ್ಮು ಮತ್ತು ಕಾಶ್ಮೀರ, ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡ ರಾಜ್ಯಗಳಲ್ಲಿ ಗಣತಿಗಳು ಆರಂಭವಾಗಲಿವೆ ಎಂದು ಗೃಹ ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ.

2011ರಲ್ಲಿ ಕೊನೆಯ ಬಾರಿಗೆ ಗಣತಿಯನ್ನು ನಡೆಸಲಾಗಿತ್ತು. ಕೋವಿಡ್ ಕಾರಣ ನೀಡಿ 2021ರಲ್ಲಿ ನಡೆಯಬೇಕಿದ್ದ ಗಣತಿಯನ್ನು ಕೇಂದ್ರ ಸರ್ಕಾರ ಮುಂದೂಡಿತ್ತು. ಜನಗಣತಿ ಕಾಯ್ದೆ 1948 ಮತ್ತು ಜನಗಣತಿ ನಿಯಮಗಳು 1990 ರ ನಿಬಂಧನೆಗಳ ಅಡಿಯಲ್ಲಿ ಭಾರತದಲ್ಲಿ ಜನಗಣತಿಯನ್ನು ನಡೆಸಲಾಗುತ್ತದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕೇಂದ್ರ ಬಜೆಟ್ 2026: ಷೇರುಮಾರುಕಟ್ಟೆ 'ರಕ್ತಪಾತ', ಹೂಡಿಕೆದಾರರ 9.40 ಲಕ್ಷ ಕೋಟಿ ರೂ ನಷ್ಟ! ಕುಸಿತಕ್ಕೆ ಕಾರಣವೇನು?

'ಆಗ ಸಿದ್ಧಾರ್ಥ್, ಈಗ CJ Roy': 'ತೆರಿಗೆ ಭಯೋತ್ಪಾದನೆ'; ಐಟಿ ದಾಳಿ ಕುರಿತು ಕೇಂದ್ರಕ್ಕೆ ಉದ್ಯಮಿ Mohandas Pai ಪತ್ರ! Video

T20 World Cup 2026: 'ಟೂರ್ನಿ ಆಡ್ತೇವೆ.. ಆದ್ರೆ ಭಾರತದ ವಿರುದ್ಧ ಆಡಲ್ಲ'; ಐಸಿಸಿಗೆ PCB ಹೊಸ ತಲೆನೋವು!

ಇನ್ಮುಂದೆ ಷೇರು ಮರುಖರೀದಿ ಲಾಭಕ್ಕೂ ತೆರಿಗೆ! Capital gains ಎಂದು ಪರಿಗಣಿಸುವ ಘೋಷಣೆ

U19 World Cup: ಪಾಕಿಸ್ತಾನವನ್ನು ಬಗ್ಗು ಬಡಿದು ಭಾರತ ಸೆಮಿಫೈನಲ್‌ಗೆ ಲಗ್ಗೆ; ಅಫ್ಘಾನ್ ಜೊತೆ ಗುದ್ದಾಟ!

SCROLL FOR NEXT