ಎಂಜಿನಿಯರ್ ರಶೀದ್ 
ದೇಶ

Terror case: ಸಂಸತ್ ಅಧಿವೇಶನದಲ್ಲಿ ಭಾಗಿಯಾಗಲು ಜೈಲಿನಲ್ಲಿರುವ ಸಂಸದ ರಶೀದ್ ಗೆ ಕಸ್ಟಡಿ ಪೆರೋಲ್!

ಭಯೋತ್ಪಾದನೆಗೆ ಹಣಕಾಸಿನ ನೆರವು ನೀಡಿದ್ದ ಪ್ರಕರಣದಲ್ಲಿ ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆಯಡಿ 2019ರಲ್ಲಿ ರಾಷ್ಟ್ರೀಯ ತನಿಖಾ ದಳದಿಂದ ಬಂಧನಕ್ಕೊಳಗಾದ ನಂತರ ರಶೀದ್ ತಿಹಾರ್ ಜೈಲಿನಲ್ಲಿದ್ದಾರೆ.

ನವದೆಹಲಿ: ಜೈಲಿನಲ್ಲಿರುವ ಸಂಸದ ಎಂಜಿನಿಯರ್ ರಶೀದ್ ಗೆ ಜುಲೈ 24 ರಿಂದ ಆಗಸ್ಟ್ 4ರವರೆಗೆ ಸಂಸತ್ತಿನ ಮುಂಗಾರು ಅಧಿವೇಶನದಲ್ಲಿ ಭಾಗಿಯಾಗಲು ದೆಹಲಿ ನ್ಯಾಯಾಲಯ ಮಂಗಳವಾರ ಪೆರೋಲ್ ನೀಡಿದೆ.

ಭಯೋತ್ಪಾದನೆಗೆ ಹಣಕಾಸಿನ ನೆರವು ನೀಡಿದ್ದ ಪ್ರಕರಣದಲ್ಲಿ ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆಯಡಿ 2019ರಲ್ಲಿ ರಾಷ್ಟ್ರೀಯ ತನಿಖಾ ದಳದಿಂದ ಬಂಧನಕ್ಕೊಳಗಾದ ನಂತರ ರಶೀದ್ ತಿಹಾರ್ ಜೈಲಿನಲ್ಲಿದ್ದಾರೆ.

ಹೆಚ್ಚುವರಿ ಸೆಷನ್ ಜಡ್ಜ್ ಚಂದೇರ್ ಜಿತ್ಸಿಂಗ್ ಅವರು ರಶೀದ್ ಅವರಿಗೆ ಪೆರೋಲ್ ನೀಡಿದ್ದಾರೆ. ಸಂಸತ್ ಅಧಿವೇಶನದಲ್ಲಿ ತನ್ನ ಕರ್ತವ್ಯ ನಿರ್ವಹಿಸಲು ಮಧ್ಯಂತರ ಜಾಮೀನು ನೀಡಬೇಕು ಅಥವಾ ಕಸ್ಟಡಿ ಪೆರೋಲ್ ನೀಡುವಂತೆ ಬಾರಮುಲ್ಲಾ ಸಂಸದರಾಗಿರುವ ರಶೀದ್ ನ್ಯಾಯಾಲಯವನ್ನು ಕೋರಿದ್ದರು. ಪೆರೋಲ್ ವೇಳೆ ರಶೀದ್ ಜೊತೆಗೆ ಶಸ್ತ್ರ ಸಜ್ಜಿತ ಪೊಲೀಸ್ ಸಿಬ್ಬಂದಿ ಇರಲಿದ್ದಾರೆ.

ರಶೀದ್ ಪರ ವಾದ ಮಂಡಿಸಿದ ವಕೀಲ ವಿಖ್ಯಾತ್ ಒಬೆರಾಯ್, ಸಂಸತ್ ಅಧಿವೇಶನದಲ್ಲಿ ಭಾಗವಹಿಸಲು ತನ್ನ ಕಕ್ಷಿದಾರರಿಗೆ ಮಧ್ಯಂತರ ಜಾಮೀನು ನೀಡಬೇಕು. ಇಲ್ಲದಿದ್ದರೆ ಪ್ರಯಾಣದ ವೆಚ್ಚ ಇಲ್ಲದೆ ಕಸ್ಟಡಿ ಪೆರೋಲ್ ನೀಡುವಂತೆ ಮನವಿ ಮಾಡಿದ್ದರು.

ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಎನ್ ಐಎ ಪರ ವಕೀಲರು, ಯಾವುದೇ ಕಾರಣಕ್ಕೂ ಮಧ್ಯಂತರ ಜಾಮೀನು ನೀಡಬಾರದು. ಪ್ರಯಾಣದ ವೆಚ್ಚ ಪಾವತಿಸಿದ ನಂತರವೇ ಕಸ್ಟಡಿ ಪೆರೋಲ್ ನೀಡುವಂತೆ ಹೇಳಿದರು.

ರಶೀದ್ 2024ರ ಲೋಕಸಭಾ ಚುನಾವಣೆಯಲ್ಲಿ ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಕ್ಷೇತ್ರದಲ್ಲಿ ಒಮರ್ ಅಬ್ದುಲ್ಲಾ ಅವರನ್ನು ಸೋಲಿಸಿ ಸಂಸದರಾಗಿ ಆಯ್ಕೆಯಾಗಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತದ ಚುನಾವಣಾ ವ್ಯವಸ್ಥೆಯ ವಿಶ್ವಾಸಾರ್ಹತೆ ಬಗ್ಗೆ ಜಾಗತಿಕವಾಗಿ ಅತ್ಯುತ್ತಮ ಸ್ಪಷ್ಟ ಅಭಿಪ್ರಾಯ- ಟ್ರಂಪ್ ಹೇಳಿಕೆ ಬೆನ್ನಲ್ಲೇ MEA ಪ್ರತಿಕ್ರಿಯೆ!

ಮಾಜಿ ಸಚಿವ ಬಿ. ಸಿ. ನಾಗೇಶ್ ನಿಧನ: ನಾಳೆ ತಿಪಟೂರಿನಲ್ಲಿ ಅಂತ್ಯಕ್ರಿಯೆ!

ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ ನಕಲಿ ಔಷಧಿ ಮರುಪ್ಯಾಕಿಂಗ್ ಬೃಹತ್ ಜಾಲ ಪತ್ತೆ: 5 ಕೋಟಿ ರೂ. ಮೌಲ್ಯದ ವಸ್ತುಗಳು ವಶಕ್ಕೆ!

ಪಸಿಂದು ಗೋಲ್ಡನ್ ಡಕೌಟ್: ಆಡಿದ 2ನೇ ಪಂದ್ಯದಲ್ಲೇ ಕುಂಬ್ಳೆ ದಾಖಲೆ ಸರಿಗಟ್ಟಿದ Team India ಯುವ ಸ್ಪಿನ್ನರ್ ಮಾನವ್ ಸುತಾರ್!

ದೇವೇಗೌಡರ ಕೂಸನ್ನು ಹಾದಿ ತಪ್ಪಿಸಿ ಯಾರಪ್ಪನಿಗೆ ಕೊಡಲು ಹೊರಟಿದ್ದೀರಿ ಮಿಸ್ಟರ್ ಡಿ.ಕೆ. ಶಿವಕುಮಾರ್? ತಾಕತ್ ಇದ್ರೆ ಚರ್ಚೆಗೆ ಬನ್ನಿ, ಕುಮಾರಸ್ವಾಮಿ ಸವಾಲು!