ಎಂಜಿನಿಯರ್ ರಶೀದ್ 
ದೇಶ

Terror case: ಸಂಸತ್ ಅಧಿವೇಶನದಲ್ಲಿ ಭಾಗಿಯಾಗಲು ಜೈಲಿನಲ್ಲಿರುವ ಸಂಸದ ರಶೀದ್ ಗೆ ಕಸ್ಟಡಿ ಪೆರೋಲ್!

ಭಯೋತ್ಪಾದನೆಗೆ ಹಣಕಾಸಿನ ನೆರವು ನೀಡಿದ್ದ ಪ್ರಕರಣದಲ್ಲಿ ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆಯಡಿ 2019ರಲ್ಲಿ ರಾಷ್ಟ್ರೀಯ ತನಿಖಾ ದಳದಿಂದ ಬಂಧನಕ್ಕೊಳಗಾದ ನಂತರ ರಶೀದ್ ತಿಹಾರ್ ಜೈಲಿನಲ್ಲಿದ್ದಾರೆ.

ನವದೆಹಲಿ: ಜೈಲಿನಲ್ಲಿರುವ ಸಂಸದ ಎಂಜಿನಿಯರ್ ರಶೀದ್ ಗೆ ಜುಲೈ 24 ರಿಂದ ಆಗಸ್ಟ್ 4ರವರೆಗೆ ಸಂಸತ್ತಿನ ಮುಂಗಾರು ಅಧಿವೇಶನದಲ್ಲಿ ಭಾಗಿಯಾಗಲು ದೆಹಲಿ ನ್ಯಾಯಾಲಯ ಮಂಗಳವಾರ ಪೆರೋಲ್ ನೀಡಿದೆ.

ಭಯೋತ್ಪಾದನೆಗೆ ಹಣಕಾಸಿನ ನೆರವು ನೀಡಿದ್ದ ಪ್ರಕರಣದಲ್ಲಿ ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆಯಡಿ 2019ರಲ್ಲಿ ರಾಷ್ಟ್ರೀಯ ತನಿಖಾ ದಳದಿಂದ ಬಂಧನಕ್ಕೊಳಗಾದ ನಂತರ ರಶೀದ್ ತಿಹಾರ್ ಜೈಲಿನಲ್ಲಿದ್ದಾರೆ.

ಹೆಚ್ಚುವರಿ ಸೆಷನ್ ಜಡ್ಜ್ ಚಂದೇರ್ ಜಿತ್ಸಿಂಗ್ ಅವರು ರಶೀದ್ ಅವರಿಗೆ ಪೆರೋಲ್ ನೀಡಿದ್ದಾರೆ. ಸಂಸತ್ ಅಧಿವೇಶನದಲ್ಲಿ ತನ್ನ ಕರ್ತವ್ಯ ನಿರ್ವಹಿಸಲು ಮಧ್ಯಂತರ ಜಾಮೀನು ನೀಡಬೇಕು ಅಥವಾ ಕಸ್ಟಡಿ ಪೆರೋಲ್ ನೀಡುವಂತೆ ಬಾರಮುಲ್ಲಾ ಸಂಸದರಾಗಿರುವ ರಶೀದ್ ನ್ಯಾಯಾಲಯವನ್ನು ಕೋರಿದ್ದರು. ಪೆರೋಲ್ ವೇಳೆ ರಶೀದ್ ಜೊತೆಗೆ ಶಸ್ತ್ರ ಸಜ್ಜಿತ ಪೊಲೀಸ್ ಸಿಬ್ಬಂದಿ ಇರಲಿದ್ದಾರೆ.

ರಶೀದ್ ಪರ ವಾದ ಮಂಡಿಸಿದ ವಕೀಲ ವಿಖ್ಯಾತ್ ಒಬೆರಾಯ್, ಸಂಸತ್ ಅಧಿವೇಶನದಲ್ಲಿ ಭಾಗವಹಿಸಲು ತನ್ನ ಕಕ್ಷಿದಾರರಿಗೆ ಮಧ್ಯಂತರ ಜಾಮೀನು ನೀಡಬೇಕು. ಇಲ್ಲದಿದ್ದರೆ ಪ್ರಯಾಣದ ವೆಚ್ಚ ಇಲ್ಲದೆ ಕಸ್ಟಡಿ ಪೆರೋಲ್ ನೀಡುವಂತೆ ಮನವಿ ಮಾಡಿದ್ದರು.

ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಎನ್ ಐಎ ಪರ ವಕೀಲರು, ಯಾವುದೇ ಕಾರಣಕ್ಕೂ ಮಧ್ಯಂತರ ಜಾಮೀನು ನೀಡಬಾರದು. ಪ್ರಯಾಣದ ವೆಚ್ಚ ಪಾವತಿಸಿದ ನಂತರವೇ ಕಸ್ಟಡಿ ಪೆರೋಲ್ ನೀಡುವಂತೆ ಹೇಳಿದರು.

ರಶೀದ್ 2024ರ ಲೋಕಸಭಾ ಚುನಾವಣೆಯಲ್ಲಿ ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಕ್ಷೇತ್ರದಲ್ಲಿ ಒಮರ್ ಅಬ್ದುಲ್ಲಾ ಅವರನ್ನು ಸೋಲಿಸಿ ಸಂಸದರಾಗಿ ಆಯ್ಕೆಯಾಗಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

T20 World Cup: Super 8 ಪ್ರವೇಶಿಸಿ ಜಿಂಬಾಬ್ವೆ ಇತಿಹಾಸ ಸೃಷ್ಟಿ; 17 ವರ್ಷಗಳ ನಂತರ Australia ಟೂರ್ನಿನಿಂದ ಔಟ್!

'ನ್ಯಾಯಯುತವಾಗಿ ನಡೆಸಿಕೊಳ್ಳಿ': ಪಾಕ್ ಮಾಜಿ ಪ್ರಧಾನಿ ಪರ ಕಪಿಲ್ ದೇವ್, ಸುನೀಲ್ ಗವಾಸ್ಕರ್ ಸೇರಿ 14 ಮಾಜಿ ನಾಯಕರು ಬ್ಯಾಟಿಂಗ್!

ಮಗನಿಗೆ ಸಿದ್ದರಾಮಯ್ಯ ಮೂಗುದಾರ: ನಾಯಕತ್ವ ಬದಲಾವಣೆ ಬಗ್ಗೆ ಮಾತನಾಡಲ್ಲ ಎಂದ MLC ಯತೀಂದ್ರ!

ಭಾರತದ ಸಪ್ತ ಸಹೋದರಿಯರು: ಮತ್ತೆ ಪ್ರಸ್ತಾಪಿಸಿ ವಿವಾದಕ್ಕೆ ಗುರಿಯಾದ ಮೊಹಮ್ಮದ್ ಯೂನಸ್!

ಕರ್ನಾಟಕದ ಯಾವ ಶಾಸಕನಿಗೂ ಕ್ಷೇತ್ರದ ಅಭಿವೃದ್ಧಿಯನ್ನು ಸೋಮಣ್ಣನ ತರ ಮಾಡೋಕೆ ಸಾಧ್ಯವಿಲ್ಲ: ಸಚಿವ ಜಮೀರ್ ಪ್ರಶಂಸೆ

SCROLL FOR NEXT