ಅಖಿಲೇಶ್ ಯಾದವ್ ಮತ್ತಿತರರು 
ದೇಶ

ದೆಹಲಿಯ ಮಸೀದಿಯಲ್ಲಿ ರಾಜಕೀಯ ಸಭೆ: ಅಖಿಲೇಶ್ ಯಾದವ್ ವಿರುದ್ಧ ಉತ್ತರಾಖಂಡ ವಕ್ಪ್ ಮಂಡಳಿ ಕಿಡಿ!

ರಾಂಪುರ ಸಂಸದ ಮೌಲಾನಾ ಮೊಹಿಬುಲ್ಲಾ ನದ್ವಿ ಅವರ ದೆಹಲಿ ನಿವಾಸದಲ್ಲಿ ತೆಗೆದ ಚಿತ್ರಗಳು ಎಂದು ಹೇಳುವ ಮೂಲಕ ಧರ್ಮೇಂದ್ರ ಯಾದವ್ ಸುಳ್ಳು ಹೇಳಿದ್ದಾರೆ ಎಂದು ಶಮ್ಸ್ ಆರೋಪಿಸಿದ್ದಾರೆ.

ನವದೆಹಲಿ: ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ರಾಜಕೀಯ ಸಭೆಗಾಗಿ ರಾಷ್ಟ್ರ ರಾಜಧಾನಿಯ ಪಾರ್ಲಿಮೆಂಟ್ ಸ್ಟ್ರೀಟ್ ನಲ್ಲಿರುವ ಮಸೀದಿಯನ್ನು ಬಳಸಿಕೊಂಡಿದ್ದಾರೆ ಎಂದು ಉತ್ತರಾಖಂಡ್ ವಕ್ಪ್ ಮಂಡಳಿ ಅಧ್ಯಕ್ಷ ಶಾದಾಬ್ ಶಾಮ್ಸ್ ಮಂಗಳವಾರ ಆರೋಪಿಸಿದ್ದಾರೆ.

ಇದು ಮುಸ್ಲಿಂ ಭಾವನೆಗಳಿಗೆ ಧಕ್ಕೆ ತಂದಿದ್ದು, ಅಖಿಲೇಶ್ ಯಾದವ್ ಕ್ಷಮೆಯಾಚಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.

SP ಸಂಸದ ಧರ್ಮೇಂದ್ರ ಯಾದವ್ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಹಂಚಿಕೊಂಡ ಫೋಟೋದಲ್ಲಿ ಪತ್ನಿ ಡಿಂಪಲ್ ಯಾದವ್, ರಾಂಪುರದ ಪಕ್ಷದ ಸಂಸದ ಮೌಲಾನಾ ಮೊಹಿಬುಲ್ಲಾ ನದ್ವಿ ಮತ್ತು ಸಂಭಾಲ್ ಸಂಸದ ಶಫೀಕರ್ ರಹಮಾನ್ ಬಾರ್ಕ್ ಸೇರಿದಂತೆ ಹಲವಾರು ಪಕ್ಷದ ಸಂಸದರೊಂದಿಗೆ ಅಖಿಲೇಶ್ ಯಾದವ್ ಮಸೀದಿಯೊಳಗೆ ಕುಳಿತಿರುವುದನ್ನು ಕಾಣಬಹುದು.

ಈ ಪೋಟೋಗೆ ಪ್ರತಿಕ್ರಿಯಿಸಿರುವ ಶಾದಾಬ್ ಶಾಮ್ಸ್, ಮಸೀದಿಗಳು ಧಾರ್ಮಿಕ ನಂಬಿಕೆಯ ಪವಿತ್ರ ಕೇಂದ್ರಗಳಾಗಿದ್ದು, ರಾಜಕೀಯ ಚರ್ಚೆ ಅಲ್ಲಿ ನಡೆಯಬಾರದು. ಪಕ್ಷದ ಸಂಸದರೊಂದಿಗಿನ ರಾಜಕೀಯ ಸಭೆಗೆ ಮಸೀದಿಯನ್ನು ಬಳಸಿಕೊಳ್ಳುವ ಮೂಲಕ ಅಖಿಲೇಶ್ ಯಾದವ್ ಮುಸ್ಲಿಮರ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ. ಇದಕ್ಕಾಗಿ ಅವರು ಮುಸ್ಲಿಮರಲ್ಲಿ ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿದ್ದಾರೆ.

ರಾಂಪುರ ಸಂಸದ ಮೌಲಾನಾ ಮೊಹಿಬುಲ್ಲಾ ನದ್ವಿ ಅವರ ದೆಹಲಿ ನಿವಾಸದಲ್ಲಿ ತೆಗೆದ ಚಿತ್ರಗಳು ಎಂದು ಹೇಳುವ ಮೂಲಕ ಧರ್ಮೇಂದ್ರ ಯಾದವ್ ಸುಳ್ಳು ಹೇಳಿದ್ದಾರೆ ಎಂದು ಶಮ್ಸ್ ಆರೋಪಿಸಿದ್ದಾರೆ. ಪಾರ್ಲಿಮೆಂಟ್ ಸ್ಟ್ರೀಟ್‌ನಲ್ಲಿರುವ ಮಸೀದಿಯ ಒಳಭಾಗವು ಫೋಟೋಗಳಲ್ಲಿ ಸ್ಪಷ್ಟವಾಗಿ ಕಾಣಿಸುತ್ತದೆ. ಅದನ್ನು ಸುಲಭವಾಗಿ ಗುರುತಿಸಬಹುದು. ಧರ್ಮೇಂದ್ರ ಯಾದವ್ ಅದರ ಬಗ್ಗೆ ಸುಳ್ಳು ಹೇಳಬಾರದು ಎಂದು ವಕ್ಫ್ ಬೋರ್ಡ್ ಅಧ್ಯಕ್ಷರು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇಂಡೋನೇಷ್ಯಾ ಸಂಸತ್ತಿನಲ್ಲಿ ಒಡಿಶಾದ ಮಾಜಿ ಸಿಎಂ ಬಿಜು ಪಟ್ನಾಯಕ್ ಪರಾಕ್ರಮ ಬಣ್ಣಿಸಿದ ಪ್ರಧಾನಿ ಮೋದಿ!

FIFA World Cup 2026: ಕೊನೆಯ 15 ನಿಮಿಷದಲ್ಲಿ 3 ಗೋಲು; ಈಜಿಪ್ಟ್ ಮಣಿಸಿ ಕ್ವಾರ್ಟರ್ ಫೈನಲ್‌ಗೆ ಅರ್ಜೆಂಟೀನಾ ಲಗ್ಗೆ!

E20 ಪೆಟ್ರೋಲ್‌ನಿಂದಾಗಿ ಎಂಜಿನ್‌ ಹಾಳಾದ ಒಂದೇ ಒಂದು ಕಾರನ್ನು ತೋರಿಸಿ: ಗಡ್ಕರಿ ಬಹಿರಂಗ ಸವಾಲು

ಭಯಾನಕ ಅಪಘಾತ: ಫುಟ್​ಪಾತ್​ನಲ್ಲಿ ಕುಳಿತಿದ್ದ ಕುಟುಂಬದ ಮೇಲೆ ಹರಿದ ಟಿಪ್ಪರ್; ತಂದೆ, ಮೂವರು ಮಕ್ಕಳು ಸ್ಥಳದಲ್ಲೇ ಸಾವು - Video

ವಯನಾಡು ಭೂಕುಸಿತ 'ಮಾನವ ನಿರ್ಮಿತ'; ಮಣ್ಣು ತೆರವುಗೊಳಿಸಲು ಗುತ್ತಿಗೆದಾರರಿಗೆ ಸರ್ಕಾರ ಸೂಚಿಸಿದ್ರೂ ನಿರ್ಲಕ್ಷ್ಯ!