ಮಲ್ಲಿಕಾರ್ಜುನ ಖರ್ಗೆ 
ದೇಶ

'ಏನೋ ಅನುಮಾನಾಸ್ಪದವಾಗಿದೆ': ಜಗದೀಪ್ ಧನಕರ್ ರಾಜೀನಾಮೆಗೆ ಸರ್ಕಾರ ಸ್ಪಷ್ಟನೆ ನೀಡಬೇಕು; ಮಲ್ಲಿಕಾರ್ಜುನ ಖರ್ಗೆ; Video

ಧನಕರ್ ಬಿಜೆಪಿ-ಆರ್‌ಎಸ್‌ಎಸ್ ಜನರಿಗಿಂತ ಹೆಚ್ಚಾಗಿ ಬಿಜೆಪಿ ಮತ್ತು ಆರ್‌ಎಸ್‌ಎಸ್ ಅನ್ನು 'ಸಮರ್ಥಿಸಿಕೊಳ್ಳುತ್ತಿದ್ದರು'. ಆದರೆ, ಅಂತಹವರೇ ರಾಜೀನಾಮೆ ನೀಡಬೇಕಾಯಿತು ಎಂದು ಖರ್ಗೆ ಹೇಳಿದ್ದಾರೆ.

ನವದೆಹಲಿ: ಉಪರಾಷ್ಟ್ರಪತಿ ಹುದ್ದೆಗೆ ಜಗದೀಪ್ ಧನಕರ್ ರಾಜೀನಾಮೆ ಘೋಷಿಸಿರುವುದರಲ್ಲಿ ಏನೋ ಅನುಮಾನಾಸ್ಪದ ಅಂಶವಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬುಧವಾರ ಹೇಳಿದ್ದು, ಸರ್ಕಾರ ಈ ಬಗ್ಗೆ ಸ್ಪಷ್ಟನೆ ನೀಡಬೇಕೆಂದು ಒತ್ತಾಯಿಸಿದ್ದಾರೆ.

ಧನಕರ್ ಬಿಜೆಪಿ-ಆರ್‌ಎಸ್‌ಎಸ್ ಜನರಿಗಿಂತ ಹೆಚ್ಚಾಗಿ ಬಿಜೆಪಿ ಮತ್ತು ಆರ್‌ಎಸ್‌ಎಸ್ ಅನ್ನು 'ಸಮರ್ಥಿಸಿಕೊಳ್ಳುತ್ತಿದ್ದರು'. ಆದರೆ, ಅಂತಹವರೇ ರಾಜೀನಾಮೆ ನೀಡಬೇಕಾಯಿತು ಎಂದು ಖರ್ಗೆ ಹೇಳಿದ್ದಾರೆ.

'ಅವರು ಏಕೆ ರಾಜೀನಾಮೆ ನೀಡಿದರು, ಅದಕ್ಕೆ ಕಾರಣಗಳೇನು, ಅದರ ಹಿಂದಿನ ರಹಸ್ಯವೇನು ಎಂಬುದನ್ನು ಸರ್ಕಾರ ಉತ್ತರಿಸಬೇಕು. ನಮಗೆ 'ದಾಲ್ ಮೇ ಕುಚ್ ಕಾಲಾ ಹೈ (ಏನೋ ಅನುಮಾನಾಸ್ಪದವಾಗಿದೆ)' ಎಂದು ಅನ್ನಿಸುತ್ತಿದೆ. ಅವರು ಆರೋಗ್ಯವಾಗಿರುವಂತೆ ಕಾಣುತ್ತಾರೆ ಮತ್ತು ಅವರು ಯಾವಾಗಲೂ ಚೆನ್ನಾಗಿ ಮಾತನಾಡುತ್ತಾರೆ ಮತ್ತು ಸ್ಪಷ್ಟವಾಗಿ ಸಂವಹನ ನಡೆಸುತ್ತಾರೆ. ಆದರೆ ಏನಾಯಿತು? ಅವರು ಬಿಜೆಪಿ-ಆರ್‌ಎಸ್‌ಎಸ್ ಜನರಿಗಿಂತ ಹೆಚ್ಚಾಗಿ ಬಿಜೆಪಿ ಮತ್ತು ಆರ್‌ಎಸ್‌ಎಸ್ ಅನ್ನು ಸಮರ್ಥಿಸಿಕೊಳ್ಳುತ್ತಿದ್ದರು' ಎಂದು ಹೇಳಿದರು.

'ಬಿಜೆಪಿ-ಆರ್‌ಎಸ್‌ಎಸ್ ಬಗ್ಗೆ ಧನಕರ್ ಅವರ ನಿಷ್ಠೆ ಅಂತದ್ದಾಗಿತ್ತು. ಇಂತಹ ಸಮಯದಲ್ಲಿ ಅವರು ರಾಜೀನಾಮೆ ನೀಡಿದ್ದಾರೆ. ಆದ್ದರಿಂದ, ರಾಜೀನಾಮೆ ಹಿಂದಿನ ಕಾರಣವೇನು ಮತ್ತು ಇದರ ಹಿಂದೆ ಯಾರಿದ್ದಾರೆ ಎಂಬುದನ್ನು ದೇಶದ ಜನರಿಗೆ ತಿಳಿಸಬೇಕು' ಎಂದು ಅವರು ಸುದ್ದಿಗಾರರಿಗೆ ತಿಳಿಸಿದರು.

'ಭಾರತೀಯತೆಯನ್ನು' ಅಳವಡಿಸಿಕೊಳ್ಳುವಂತೆ ಮತ್ತು ಜಾಗತಿಕ ಸಮಸ್ಯೆಗಳಿಗೆ ಅದನ್ನು ಪರಿಹಾರವಾಗಿ ಪ್ರಸ್ತುತಪಡಿಸುವಂತೆ ಒತ್ತಾಯಿಸಿದ ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರ ಹೇಳಿಕೆಗಳನ್ನು ಟೀಕಿಸಿದ ಮಲ್ಲಿಕಾರ್ಜುನ ಖರ್ಗೆ, ಅವರು ಇತಿಹಾಸವನ್ನು ಪುನಃ ಬರೆಯುತ್ತಿದ್ದಾರೆ ಎಂದರು.

'ಜವಾಹರಲಾಲ್ ನೆಹರು ಡಿಸ್ಕವರಿ ಆಫ್ ಇಂಡಿಯಾ ಬರೆದರು ಆದರೆ ಅವರು ಅದನ್ನು ತಿರಸ್ಕರಿಸುತ್ತಾರೆ. ನಮ್ಮ ಇತಿಹಾಸ ಪ್ರಾಧ್ಯಾಪಕರು ಹೇಳುವುದನ್ನು ಸಹ ಅವರು ತಿರಸ್ಕರಿಸುತ್ತಾರೆ. ಅವರು ಹೇಳುವ ಇತಿಹಾಸ ಬೇರೆ ಮತ್ತು ದೇಶದ ಇತಿಹಾಸವೇ ಬೇರೆ' ಎಂದು ಖರ್ಗೆ ಹೇಳಿದರು.

ಸೋಮವಾರ ಸಂಜೆ ಜಗದೀಪ್ ಧನಕರ್ ಅವರು ವೈದ್ಯಕೀಯ ಕಾರಣಗಳನ್ನು ಉಲ್ಲೇಖಿಸಿ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದರು. ಅವರು ತಮ್ಮ ರಾಜೀನಾಮೆಯನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಕಳುಹಿಸಿದ್ದು, ತಕ್ಷಣದಿಂದ ಜಾರಿಗೆ ಬರುವಂತೆ ರಾಜೀನಾಮೆ ನೀಡುತ್ತಿರುವುದಾಗಿ ತಿಳಿಸಿದ್ದಾರೆ.

74 ವರ್ಷದ ಧನಕರ್ ಅವರು 2022ರ ಆಗಸ್ಟ್‌ನಲ್ಲಿ ಅಧಿಕಾರ ವಹಿಸಿಕೊಂಡರು ಮತ್ತು ಅವರ ಅಧಿಕಾರಾವಧಿ 2027 ರವರೆಗೆ ಇತ್ತು. ಅವರು ರಾಜ್ಯಸಭೆಯ ಅಧ್ಯಕ್ಷರೂ ಆಗಿದ್ದರು ಮತ್ತು ಸಂಸತ್ತಿನ ಮಳೆಗಾಲದ ಅಧಿವೇಶನದ ಮೊದಲ ದಿನದಂದು ಅವರು ರಾಜೀನಾಮೆ ಸಲ್ಲಿಸಿದರು.

ಧನಕರ್ ಇತ್ತೀಚೆಗೆ ದೆಹಲಿಯ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ (AIIMS) ಆಂಜಿಯೋಪ್ಲ್ಯಾಸ್ಟಿಗೆ ಒಳಗಾಗಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Karnataka Survey: ತಾಂತ್ರಿಕ ದೋಷ, ಸರ್ವರ್ ಸಮಸ್ಯೆ ನಡುವೆಯೂ ಜಾತಿ 'ಸಮೀಕ್ಷೆ', ಗಣತಿದಾರರ ಪ್ರತಿಭಟನೆ!

'Ukraine war ನ ಪ್ರಾಥಮಿಕ ಹೂಡಿಕೆದಾರರು'.. ರಷ್ಯಾ ಇಂಧನ ಖರೀದಿ ಕೂಡಲೇ ನಿಲ್ಲಿಸಿ': ಭಾರತ, ಚೀನಾ ವಿರುದ್ಧ ಮತ್ತೆ Donald Trump ಕಿಡಿ!

ACTION vs REACTION.. ವಿಕೆಟ್ ಪಡೆದು ಕೆಣಕಿದ ಪಾಕ್ ಬೌಲರ್ Abrar ಗೆ ಒಂದಲ್ಲ... ಎರಡು ಬಾರಿ ತಿರುಗೇಟು ಕೊಟ್ಟ Hasaranga, ಇಲ್ಲಿದೆ mimic Video

Asia Cup 2025: ಕಳಪೆ ಬ್ಯಾಟಿಂಗ್ ಗೆ ಬೆಲೆ ತೆತ್ತ Srilanka, ಪಾಕಿಸ್ತಾನಕ್ಕೆ 5 ವಿಕೆಟ್ ಭರ್ಜರಿ ಜಯ

PT ಟೀಚರ್ ಫೋನ್ ನಲ್ಲಿ 2500ಕ್ಕೂ ಅಧಿಕ ಅಶ್ಲೀಲ ವಿಡಿಯೋ, Prajwal Revanna ಕೇಸ್ ಅನ್ನೂ ಮೀರಿಸೋ Sex Scandal?

SCROLL FOR NEXT