ಚುನಾವಣಾ ಆಯೋಗ 
ದೇಶ

ಧನಕರ್ ರಾಜೀನಾಮೆ: ಉಪ ರಾಷ್ಟ್ರಪತಿ ಚುನಾವಣೆ ಪ್ರಕ್ರಿಯೆ ಆರಂಭಿಸಿದ ECI

ಉಪ ರಾಷ್ಟ್ರಪತಿ ಚುನಾವಣೆಗೆ ಪೂರ್ವಸಿದ್ಧತಾ ಕಾರ್ಯಗಳು ಈಗಾಗಲೇ ಆರಂಭವಾಗಿವೆ ಮತ್ತು ಚುನಾವಣೆಗೆ ಅಧಿಕೃತ ವೇಳಾಪಟ್ಟಿಯನ್ನು "ಚುನಾವಣಾ ಪೂರ್ವ ಚಟುವಟಿಕೆಗಳು ಪೂರ್ಣಗೊಂಡ ನಂತರ ಶೀಘ್ರದಲ್ಲೇ ಪ್ರಕಟಿಸಲಾಗುವುದು"

ನವದೆಹಲಿ: ಜಗದೀಪ್ ಧನಕರ್ ಅವರ ರಾಜೀನಾಮೆಯಿಂದ ತೆರವಾದ ಉಪ ರಾಷ್ಟ್ರಪತಿ ಸ್ಥಾನಕ್ಕೆ ಚುನಾವಣೆ ನಡೆಸುವ ಪ್ರಕ್ರಿಯೆಯನ್ನು ಭಾರತೀಯ ಚುನಾವಣಾ ಆಯೋಗ(ECI) ಬುಧವಾರ ಪ್ರಾರಂಭಿಸಿದೆ.

ಗೃಹ ಸಚಿವಾಲಯ(MHA), ಜುಲೈ 22, 2025 ರಂದು ಹೊರಡಿಸಿದ ಗೆಜೆಟ್ ಅಧಿಸೂಚನೆಯ ಮೂಲಕ ಧನಕರ್ ಅವರ ರಾಜೀನಾಮೆ ಅಂಗೀಕರಿಸಿರುವುದನ್ನು ಅಧಿಕೃತವಾಗಿ ತಿಳಿಸಿದ್ದು, ಈ ಮೂಲಕ ಸಾಂವಿಧಾನಿಕ ಖಾಲಿ ಹುದ್ದೆಯನ್ನು ಭರ್ತಿ ಮಾಡಲು ಚುನಾವಣಾ ಪ್ರಕ್ರಿಯೆಗೆ ದಾರಿ ಮಾಡಿಕೊಟ್ಟಿದೆ ಎಂದು ECI ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದೆ.

"ಸಂವಿಧಾನದ 324ನೇ ವಿಧಿಯ ಪ್ರಕಾರ, ಉಪರಾಷ್ಟ್ರಪತಿ ಹುದ್ದೆಗೆ ಚುನಾವಣೆ ನಡೆಸಲು ECI ಗೆ ಅಧಿಕಾರವಿದೆ. ಈ ಚುನಾವಣೆಗಳು 1952 ರ ರಾಷ್ಟ್ರಪತಿ ಮತ್ತು ಉಪರಾಷ್ಟ್ರಪತಿ ಚುನಾವಣಾ ಕಾಯ್ದೆ ಮತ್ತು 1974 ರ ರಾಷ್ಟ್ರಪತಿ ಮತ್ತು ಉಪರಾಷ್ಟ್ರಪತಿ ಚುನಾವಣಾ ನಿಯಮಗಳಿಂದ ನಿಯಂತ್ರಿಸಲ್ಪಡುತ್ತವೆ" ಎಂದು ECI ತಿಳಿಸಿದೆ.

ಉಪ ರಾಷ್ಟ್ರಪತಿ ಚುನಾವಣೆಗೆ ಪೂರ್ವಸಿದ್ಧತಾ ಕಾರ್ಯಗಳು ಈಗಾಗಲೇ ಆರಂಭವಾಗಿವೆ ಮತ್ತು ಚುನಾವಣೆಗೆ ಅಧಿಕೃತ ವೇಳಾಪಟ್ಟಿಯನ್ನು "ಚುನಾವಣಾ ಪೂರ್ವ ಚಟುವಟಿಕೆಗಳು ಪೂರ್ಣಗೊಂಡ ನಂತರ ಶೀಘ್ರದಲ್ಲೇ ಪ್ರಕಟಿಸಲಾಗುವುದು" ಎಂದು ಚುನಾವಣಾ ಆಯೋಗ ತಿಳಿಸಿದೆ.

ಉಪ ರಾಷ್ಟ್ರಪತಿಯನ್ನು ಲೋಕಸಭೆ ಮತ್ತು ರಾಜ್ಯಸಭೆಯ ಸದಸ್ಯರು ಆಯ್ಕೆ ಮಾಡುತ್ತಾರೆ. ಮೇಲ್ಮನೆಯ ನಾಮನಿರ್ದೇಶಿತ ಸದಸ್ಯರು ಸಹ ಮತ ಚಲಾಯಿಸಲು ಅರ್ಹರಾಗಿರುತ್ತಾರೆ.

ಬಿಜೆಪಿ ನೇತೃತ್ವದ ಎನ್​ಡಿಎ ಲೋಕಸಭೆಯಲ್ಲಿ 293 ಸದಸ್ಯರ ಬೆಂಬಲವನ್ನು ಹೊಂದಿದೆ( 542 ಸದಸ್ಯರು) ರಾಜ್ಯಸಭೆಯಲ್ಲಿ 129 ಸದಸ್ಯರ ಬೆಂಬಲವನ್ನು ಹೊಂದಿದೆ. ಇನ್ನು ನಾಮನಿರ್ದೇಶಿತ ಸದಸ್ಯರುಗಳನ್ನು ಸೇರಿಸಿದರೆ, ಆಡಳಿತ ಒಕ್ಕೂಟವು 786 ಸದಸ್ಯರಲ್ಲಿ 422 ಸದಸ್ಯರ ಬೆಂಬಲವನ್ನು ಹೊಂದಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್‌ ಸರ್ಕಾರ ವಿರುದ್ಧ ಪ್ರತಿಭಟನೆ: ಹಿಂಸಾಚಾರದಲ್ಲಿ ಮೃತಪಟ್ಟವರ ಸಂಖ್ಯೆ 116 ಕ್ಕೆ ಏರಿಕೆ

ಕೇಂದ್ರ ಬಜೆಟ್ 2026-27: ರಾಜ್ಯದ ಹಣಕಾಸು ಸಮತೋಲನ ಪುನಃಸ್ಥಾಪಿಸಲು ಹೆಚ್ಚಿನ ಅನುದಾನ ಒದಗಿಸಿ; ಕೇಂದ್ರಕ್ಕೆ ರಾಜ್ಯ ಸರ್ಕಾರ ಆಗ್ರಹ

Grok ಅಶ್ಲೀಲ ಕಂಟೆಂಟ್ ವಿವಾದ: ಕೇಂದ್ರ ಸರ್ಕಾರಕ್ಕೆ ಕೊನೆಗೂ ಮಣಿದ X, 600 ಖಾತೆಗಳ ಡಿಲೀಟ್!

ನೋಂದಣಿ ಇಲ್ಲದೆ 'stock tips': ‘Finfluencers’ಗಳ ಸುಮಾರು 1 ಲಕ್ಷ ವಿಡಿಯೋ ಡಿಲೀಟ್​ ಮಾಡಿದ SEBI

ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಯಿಂದ ರಿಷಭ್ ಪಂತ್ ಔಟ್; ಭಾರತ ತಂಡ ಸೇರಿದ 24 ವರ್ಷದ ಆಟಗಾರ!

SCROLL FOR NEXT