ರಾಮನಾಥ್ ಠಾಕೂರ್ ಮತ್ತು ಹರಿವಂಶ್ ನಾರಾಯಣ್ ಸಿಂಗ್ 
ದೇಶ

ಉಪರಾಷ್ಟ್ರಪತಿ ಹುದ್ದೆ ರೇಸ್ ನಲ್ಲಿ ಕರ್ಪೂರಿ ಠಾಕೂರ್ ಪುತ್ರ ರಾಮನಾಥ್: ರಾಜ್ಯಸಭಾ ಉಪಾಧ್ಯಕ್ಷ ಹರಿವಂಶ್ ನಾರಾಯಣ್ ಸಿಂಗ್!

ಬಿಜೆಪಿ ಅಧ್ಯಕ್ಷ ಜೆ ಪಿ ನಡ್ಡಾ ಹೆಸರು ಕೂಡ ಕೇಳಿ ಬಂದಿದೆ ಎಂದು ವರದಿಯಾಗಿದೆ. ನಡ್ಡಾ ಆಯ್ಕೆಯಾದರೆ, ಯಾವುದೇ ಔಪಚಾರಿಕ ಘೋಷಣೆಗೆ ಮುಂಚಿತವಾಗಿ ಸಂಪುಟ ಪುನರ್ರಚನೆ ನಡೆಯಬಹುದು ಎಂದು ಪಕ್ಷದ ಹಿರಿಯ ನಾಯಕರು ಹೇಳಿದ್ದಾರೆ.

ನವದೆಹಲಿ: ಉಪಾಧ್ಯಕ್ಷ ಜಗದೀಪ್ ಧಂಖರ್ ಅನಾರೋಗ್ಯದ ಕಾರಣ ನೀಡಿ ಹಠಾತ್ತನೆ ರಾಜೀನಾಮೆ ನೀಡಿದ ಒಂದು ದಿನದ ನಂತರ, ಎನ್‌ಡಿಎ ಹಿಂದುಳಿದ ಅಥವಾ ಅತ್ಯಂತ ಹಿಂದುಳಿದ ವರ್ಗಗಳ ಅಭ್ಯರ್ಥಿಯನ್ನು ಅವರ ಉತ್ತರಾಧಿಕಾರಿಯಾಗಿ ಕಣಕ್ಕಿಳಿಸುವ ಸಾಧ್ಯತೆಯಿದೆ.

ಆಡಳಿತ ಮೈತ್ರಿಕೂಟವು ಹಿಂದುಳಿದ ಸಮುದಾಯಗಳ ಅಭ್ಯರ್ಥಿಯತ್ತ ಒಲವು ತೋರುತ್ತಿದೆ . ಚಲಾವಣೆಯಲ್ಲಿರುವ ಹೆಸರುಗಳ ಪೈಕಿ, ಕೃಷಿ ರಾಜ್ಯ ಸಚಿವ ಮತ್ತು ಬಿಹಾರದ ಮಾಜಿ ಮುಖ್ಯಮಂತ್ರಿ ಮತ್ತು ಭಾರತ ರತ್ನ ಪ್ರಶಸ್ತಿ ಪುರಸ್ಕೃತ ಕರ್ಪೂರಿ ಠಾಕೂರ್ ಅವರ ಪುತ್ರ ರಾಮ್ ನಾಥ್ ಠಾಕೂರ್ ಅವರ ಹೆಸರು ಮುಂಚೂಣಿಯಲ್ಲಿದೆ. ಅತಿ-ಪಿಚಾರ ವರ್ಗದ ನಯಿ (ಕ್ಷೌರಿಕ) ಸಮುದಾಯಕ್ಕೆ ಸೇರಿದ ಠಾಕೂರ್ ಅವರನ್ನು ಪರಿಗಣಿಸಲಾಗುತ್ತಿದೆ ಎಂದು ಎನ್‌ಡಿಎಯ ಹಲವಾರು ಸಂಸದರು ತಿಳಿಸಿದ್ದಾರೆ.

ಬಿಜೆಪಿ ಅಧ್ಯಕ್ಷ ಜೆ ಪಿ ನಡ್ಡಾ ಹೆಸರು ಕೂಡ ಕೇಳಿ ಬಂದಿದೆ ಎಂದು ವರದಿಯಾಗಿದೆ. ನಡ್ಡಾ ಆಯ್ಕೆಯಾದರೆ, ಯಾವುದೇ ಔಪಚಾರಿಕ ಘೋಷಣೆಗೆ ಮುಂಚಿತವಾಗಿ ಸಂಪುಟ ಪುನರ್ರಚನೆ ನಡೆಯಬಹುದು ಎಂದು ಪಕ್ಷದ ಹಿರಿಯ ನಾಯಕರು ಹೇಳಿದ್ದಾರೆ.

ರಾಜಸ್ಥಾನದ ಮಾಜಿ ಸಿಎಂ ವಸುಂಧರಾ ರಾಜೆ, ಬಿಹಾರ ರಾಜ್ಯಪಾಲ ಮೊಹಮ್ಮದ್ ಆರಿಫ್ ಖಾನ್, ಮಾಜಿ ಕೇಂದ್ರ ಸಚಿವ ಮುಖ್ತಾರ್ ಅಬ್ಬಾಸ್ ನಖ್ವಿ ಮತ್ತು ರಾಜ್ಯಸಭಾ ಉಪಾಧ್ಯಕ್ಷ ಹರಿವಂಶ್ ಕೂಡ ಆಕಾಂಕ್ಷಿಗಳೆಂದು ಹೇಳಲಾಗುತ್ತಿದೆ. ಬಿಹಾರ ಸಿಎಂ ನಿತೀಶ್ ಕುಮಾರ್ ಬಗ್ಗೆ ಊಹಾಪೋಹಗಳು ಸ್ವಲ್ಪ ಸಮಯದವರೆಗೆ ಸುಳಿದಾಡುತ್ತಿದ್ದರೂ, ಜೆಡಿಯು ಮುಖಂಡರು ಅದನ್ನು ತಳ್ಳಿಹಾಕಿದರು. "ಇದು ನಡೆಯಲು ಸಾಧ್ಯವಿಲ್ಲ" ಎಂದು ಪಕ್ಷದ ಹಿರಿಯ ನಾಯಕರೊಬ್ಬರು ಹೇಳಿದರು.

ಎರಡೂ ಸದನಗಳಲ್ಲಿ ಎನ್‌ಡಿಎ 422 ಸಂಸದರನ್ನು ಹೊಂದಿರುವುದರಿಂದ, ಮುಂದಿನ ಉಪಾಧ್ಯಕ್ಷರನ್ನು ಆಯ್ಕೆ ಮಾಡಲು ಅಗತ್ಯವಿರುವ 394 ಮತಗಳು ಇರುವುದರಿಂದ ಎನ್ ಡಿ ಎ ಮೈತ್ರಿ ಕೂಟ ಆರಾಮವಾಗಿದೆ. ಒಮ್ಮತದ ಅಭ್ಯರ್ಥಿಗೆ ಆದ್ಯತೆ ನೀಡುವುದಾಗಿ ಸರ್ಕಾರಿ ಮೂಲಗಳು ತಿಳಿಸಿವೆ, ಜುಲೈ 26 ರ ನಂತರ ನಿರ್ಧಾರ ನಿರೀಕ್ಷಿಸಲಾಗಿದೆ.

ನ್ಯಾಯಮೂರ್ತಿ ಯಶವಂತ್ ವರ್ಮಾ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷಗಳು ಮಂಡಿಸಿದ ನಿರ್ಣಯವನ್ನು ಧನಖರ್ ಒಪ್ಪಿಕೊಂಡ ಕೆಲವೇ ಗಂಟೆಗಳ ನಂತರ ಅವರು ಹಠಾತ್ ರಾಜೀನಾಮೆ ನೀಡಿದರು.

ನಿರ್ಣಯವನ್ನು ಒಪ್ಪಿಕೊಳ್ಳುವ ಅವರ ನಿರ್ಧಾರವು ಸರ್ಕಾರದ ಸ್ವಂತ ಕಾರ್ಯತಂತ್ರಕ್ಕೆ ವಿರುದ್ಧವಾಗಿರಬಹುದು ಎಂದು ಕೆಲವರು ನಂಬುತ್ತಾರೆ, ಇದು ಪ್ರತ್ಯೇಕ ಕ್ರಮದ ಮೇಲೆ ಕೇಂದ್ರೀಕೃತವಾಗಿತ್ತು ಎಂದು ವರದಿಯಾಗಿದೆ. 63 ವಿರೋಧ ಪಕ್ಷದ ಸಂಸದರು ಸಹಿ ಮಾಡಿದ ಮತ್ತು ಧಂಖರ್ ಅವರು ಒಪ್ಪಿಕೊಂಡ ರಾಜ್ಯಸಭಾ ಸೂಚನೆಯು ಕಾರ್ಯವಿಧಾನದ ಕ್ರಮಗಳನ್ನು ಪ್ರಾರಂಭಿಸಲು ಪ್ರಧಾನ ಕಾರ್ಯದರ್ಶಿಗೆ ಸೂಚಿಸಿದೆ .

ಸೋಮವಾರ ಧಂಖರ್ ಅಧ್ಯಕ್ಷತೆಯಲ್ಲಿ ನಡೆದ ವ್ಯವಹಾರ ಸಲಹಾ ಸಮಿತಿ ಸಭೆಯಲ್ಲಿ ಸಚಿವರಾದ ನಡ್ಡಾ ಮತ್ತು ಕಿರಣ್ ರಿಜಿಜು ಅನುಪಸ್ಥಿತಿಯು ಬೆಂಕಿಗೆ ತುಪ್ಪ ಸುರಿಯುವಂತೆ ಮಾಡಿತು. ಇದರಿಂದ ಉಪ ರಾಷ್ಟ್ರಪತಿಗಳು ಸ್ಪಷ್ಟವಾಗಿ ಅಸಮಾಧಾನಗೊಂಡರು" ಎಂದು ಹಿರಿಯ ವಿರೋಧ ಪಕ್ಷದ ವ್ಯಕ್ತಿಯೊಬ್ಬರು ಹೇಳಿದರು. ಧನಕರ್ ಉತ್ತರಾಧಿಕಾರಿ ಪೂರ್ಣ ಅವಧಿಯ ಅಧಿಕಾರಾವಧಿಯನ್ನು ಪೂರೈಸುತ್ತಾರೆ ಎಂದು 67ನೇ ವಿಧಿ ಹೇಳುತ್ತದೆ, "ಉಪರಾಷ್ಟ್ರಪತಿಗಳು ತಮ್ಮ ಹುದ್ದೆಗೆ ಏರಿದ ದಿನಾಂಕದಿಂದ ಐದು ವರ್ಷಗಳ ಅವಧಿಗೆ ಅಧಿಕಾರ ವಹಿಸಿಕೊಳ್ಳುತ್ತಾರೆ.

ವಿಧಿ 68 ರ ಪ್ರಕಾರ, ಅವರ ಮರಣ, ರಾಜೀನಾಮೆ, ಪದಚ್ಯುತಿಗೆ ಸಂಬಂಧಿಸಿದಂತೆ ಉಪರಾಷ್ಟ್ರಪತಿ ಹುದ್ದೆಗೆ ಆದಷ್ಟು ಶೀಘ್ರವಾಗಿ ಚುನಾವಣೆಯನ್ನು ನಡೆಸಬೇಕು, ಚುನಾವಣಾ ಆಯೋಗವು ಖಾಲಿ ಹುದ್ದೆಯನ್ನು ಸೂಚಿಸಿದ ನಂತರ ಪ್ರಕ್ರಿಯೆಯು ಪ್ರಾರಂಭವಾಗುತ್ತದೆ ಮತ್ತು 32 ದಿನಗಳಲ್ಲಿ ಕೊನೆಗೊಳ್ಳುತ್ತದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್‌ ಸರ್ಕಾರ ವಿರುದ್ಧ ಪ್ರತಿಭಟನೆ: ಹಿಂಸಾಚಾರದಲ್ಲಿ ಮೃತಪಟ್ಟವರ ಸಂಖ್ಯೆ 116 ಕ್ಕೆ ಏರಿಕೆ

ಕೇಂದ್ರ ಬಜೆಟ್ 2026-27: ರಾಜ್ಯದ ಹಣಕಾಸು ಸಮತೋಲನ ಪುನಃಸ್ಥಾಪಿಸಲು ಹೆಚ್ಚಿನ ಅನುದಾನ ಒದಗಿಸಿ; ಕೇಂದ್ರಕ್ಕೆ ರಾಜ್ಯ ಸರ್ಕಾರ ಆಗ್ರಹ

Grok ಅಶ್ಲೀಲ ಕಂಟೆಂಟ್ ವಿವಾದ: ಕೇಂದ್ರ ಸರ್ಕಾರಕ್ಕೆ ಕೊನೆಗೂ ಮಣಿದ X, 600 ಖಾತೆಗಳ ಡಿಲೀಟ್!

ಕೌಟುಂಬಿಕ ಹಿಂಸಾಚಾರ ಸಂತ್ರಸ್ಥರಿಗೆ ಬೆಂಗಳೂರಿನಲ್ಲಿ ಅಣಬೆ ಕೃಷಿ ತರಬೇತಿ

ನೋಂದಣಿ ಇಲ್ಲದೆ 'stock tips': ‘Finfluencers’ಗಳ ಸುಮಾರು 1 ಲಕ್ಷ ವಿಡಿಯೋ ಡಿಲೀಟ್​ ಮಾಡಿದ SEBI

SCROLL FOR NEXT