ರಾಹುಲ್ ಗಾಂಧಿ 
ದೇಶ

'100 ಪರ್ಸೆಂಟ್ ಪ್ರೂಫ್ ಇದೆ'; ಕರ್ನಾಟಕದಲ್ಲಿ ಚುನಾವಣಾ ಅಕ್ರಮಕ್ಕೆ ಆಯೋಗ ಅವಕಾಶ ನೀಡಿದೆ: ರಾಹುಲ್ ಗಾಂಧಿ

ನಾನು ಚುನಾವಣಾ ಆಯೋಗಕ್ಕೆ ಒಂದು ಸಂದೇಶ ಕಳುಹಿಸಲು ಬಯಸುತ್ತೇನೆ. ನೀವು ಇದರಿಂದ ತಪ್ಪಿಸಿಕೊಳ್ಳಬಹುದು ಎಂದು ಭಾವಿಸಿದ್ದರೆ ಅದು ಸಾಧ್ಯವಿಲ್ಲ ಎಂದು ರಾಹಲ್ ಗಾಂಧಿ ಹೇಳಿದ್ದಾರೆ.

ನವದೆಹಲಿ: ಕರ್ನಾಟಕದ ಒಂದು ಲೋಕಸಭಾ ಕ್ಷೇತ್ರದಲ್ಲಿ ಚುನಾವಣಾ ಆಯೋಗವು ಮತ ವಂಚನೆಗೆ ಅವಕಾಶ ನೀಡಿದೆ ಎಂಬುದಕ್ಕೆ ತಮ್ಮ ಬಳಿ "ಶೇಕಡಾ 100 ರಷ್ಟು ದೃಢವಾದ ಪುರಾವೆ" ಇದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಗುರುವಾರ ಹೇಳಿದ್ದಾರೆ.

ಚುನಾವಣಾ ಆಯೋಗವು ಭಾರತದ ಚುನಾವಣಾ ಆಯೋಗವಾಗಿ ಕಾರ್ಯನಿರ್ವಹಿಸುತ್ತಿಲ್ಲ. ಅದು ಕೇಂದ್ರ ಸರ್ಕಾರದ ಆಯೋಗವಾಗಿ ಕಾರ್ಯನಿರ್ವಹಿಸುತ್ತಿದೆ. ನಾನು ಚುನಾವಣಾ ಆಯೋಗಕ್ಕೆ ಒಂದು ಸಂದೇಶ ಕಳುಹಿಸಲು ಬಯಸುತ್ತೇನೆ. ನೀವು ಇದರಿಂದ ತಪ್ಪಿಸಿಕೊಳ್ಳಬಹುದು ಎಂದು ಭಾವಿಸಿದ್ದರೆ ಅದು ಸಾಧ್ಯವಿಲ್ಲ ಎಂದು ರಾಹಲ್ ಗಾಂಧಿ ಹೇಳಿದ್ದಾರೆ.

ಬಿಹಾರದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ(SIR) ಮತ್ತು ಬಿಹಾರ ವಿಧಾನಸಭಾ ಚುನಾವಣೆಯನ್ನು ಬಹಿಷ್ಕರಿಸಲು ಮುಂದಾಗಿರುವ RJD ನಾಯಕ ತೇಜಸ್ವಿ ಯಾದವ್ ಅವರ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ರಾಹುಲ್ ಗಾಂಧಿ, ಕರ್ನಾಟಕದ ಒಂದು ಸ್ಥಾನದಲ್ಲಿ ಚುನಾವಣಾ ಆಯೋಗವು ವಂಚನೆಗೆ ಅವಕಾಶ ನೀಡಿದೆ ಎಂಬುದಕ್ಕೆ ತಮ್ಮ ಪಕ್ಷವು "ಶೇಕಡಾ 100 ರಷ್ಟು ದೃಢವಾದ ಪುರಾವೆ" ಹೊಂದಿದೆ ಎಂದು ತಿಳಿಸಿದರು.

"ಶೇಕಡಾ 90 ಅಲ್ಲ, ನಾವು ಅದನ್ನು ನಿಮಗೆ ತೋರಿಸಲು ನಿರ್ಧರಿಸಿದಾಗ, ಅದು 100 ರಷ್ಟು ದೃಢವಾದ ಪುರಾವೆಯಾಗಿದೆ" ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ಹೇಳಿದರು.

"ನಾವು ಒಂದು ಕ್ಷೇತ್ರದಲ್ಲಿ ಪರಿಶೀಲನೆ ನಡೆಸಿದಾಗ ಇದು ನಮ್ಮ ಗಮನಕ್ಕೆ ಬಂದಿದೆ. ಪ್ರತಿಯೊಂದು ಕ್ಷೇತ್ರದಲ್ಲೂ ಇದೇ ಡ್ರಾಮಾ ನಡೆಯುತ್ತಿದೆ ಎಂದು ನನಗೆ ಸಂಪೂರ್ಣವಾಗಿ ಮನವರಿಕೆಯಾಗಿದೆ. ಸಾವಿರಾರು ಹೊಸ ಮತದಾರರು, ಅವರ ವಯಸ್ಸು ಎಷ್ಟು? - ಒಂದು ಕ್ಷೇತ್ರದಲ್ಲಿ 45, 50, 60, 65 ವರ್ಷ ಎಂದು ಹೇಳಿಕೊಂಡು ಸಾವಿರಾರ ಸೇರ್ಪಡೆಯಾಗಿದೆ. ಇದು ಒಂದು ವಿಷಯವಾದರೆ, ಮತದಾರರ ಅಳಿಸುವಿಕೆ, ಅಕ್ರಮವಾಗಿ 18 ವರ್ಷಕ್ಕಿಂತ ಮೇಲ್ಪಟ್ಟ ಹೊಸ ಮತದಾರರ ಸೇರ್ಪಡೆಯನ್ನು ಪತ್ತೆ ಮಾಡಿದ್ದೇವೆ" ಎಂದು ಅವರು ತಿಳಿಸಿದರು.

"ನಾನು ಚುನಾವಣಾ ಆಯೋಗಕ್ಕೆ ಒಂದು ಸಂದೇಶ ಕಳುಹಿಸಲು ಬಯಸುತ್ತೇನೆ - ನೀವು ಇದರಿಂದ ತಪ್ಪಿಸಿಕೊಳ್ಳುತ್ತೀರಿ ಎಂದು ಭಾವಿಸಿದರೆ ಅದು ಸಾಧ್ಯವಿಲ್ಲ. ಏಕೆಂದರೆ ನೀವು ತಪ್ಪು ಮಾಡಿದ್ದೀರಿ. ನಾವು ಆ ತಪ್ಪಿನ ಕುರಿತಾದ ಪುರಾವೆಯೊಂದಿಗೆ ನಿಮ್ಮ ಬಳಿಗೆ ಬರುತ್ತೇವೆ" ಎಂದು ರಾಹುಲ್ ಗಾಂಧಿ ಸಂಸತ್ತಿನ ಆವರಣದಲ್ಲಿ ವರದಿಗಾರರಿಗೆ ತಿಳಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದ ಯುವಕ ದಾರುಣ ಅಂತ್ಯ

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್

Cricket: ಪಂತ್‌ರಂತೆ ಆಡಲು ಪ್ರಯತ್ನಿಸಲ್ಲ, ಅವರ ಜೊತೆ ಆಡೋದು ದೊಡ್ಡ ಅನುಭವ: ಫಿಟ್ನೆಸ್ ಅಪ್ಡೇಟ್ ಕೊಟ್ಟ Dhruv Jurel