ರಾಹುಲ್ ಗಾಂಧಿ 
ದೇಶ

'100 ಪರ್ಸೆಂಟ್ ಪ್ರೂಫ್ ಇದೆ'; ಕರ್ನಾಟಕದಲ್ಲಿ ಚುನಾವಣಾ ಅಕ್ರಮಕ್ಕೆ ಆಯೋಗ ಅವಕಾಶ ನೀಡಿದೆ: ರಾಹುಲ್ ಗಾಂಧಿ

ನಾನು ಚುನಾವಣಾ ಆಯೋಗಕ್ಕೆ ಒಂದು ಸಂದೇಶ ಕಳುಹಿಸಲು ಬಯಸುತ್ತೇನೆ. ನೀವು ಇದರಿಂದ ತಪ್ಪಿಸಿಕೊಳ್ಳಬಹುದು ಎಂದು ಭಾವಿಸಿದ್ದರೆ ಅದು ಸಾಧ್ಯವಿಲ್ಲ ಎಂದು ರಾಹಲ್ ಗಾಂಧಿ ಹೇಳಿದ್ದಾರೆ.

ನವದೆಹಲಿ: ಕರ್ನಾಟಕದ ಒಂದು ಲೋಕಸಭಾ ಕ್ಷೇತ್ರದಲ್ಲಿ ಚುನಾವಣಾ ಆಯೋಗವು ಮತ ವಂಚನೆಗೆ ಅವಕಾಶ ನೀಡಿದೆ ಎಂಬುದಕ್ಕೆ ತಮ್ಮ ಬಳಿ "ಶೇಕಡಾ 100 ರಷ್ಟು ದೃಢವಾದ ಪುರಾವೆ" ಇದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಗುರುವಾರ ಹೇಳಿದ್ದಾರೆ.

ಚುನಾವಣಾ ಆಯೋಗವು ಭಾರತದ ಚುನಾವಣಾ ಆಯೋಗವಾಗಿ ಕಾರ್ಯನಿರ್ವಹಿಸುತ್ತಿಲ್ಲ. ಅದು ಕೇಂದ್ರ ಸರ್ಕಾರದ ಆಯೋಗವಾಗಿ ಕಾರ್ಯನಿರ್ವಹಿಸುತ್ತಿದೆ. ನಾನು ಚುನಾವಣಾ ಆಯೋಗಕ್ಕೆ ಒಂದು ಸಂದೇಶ ಕಳುಹಿಸಲು ಬಯಸುತ್ತೇನೆ. ನೀವು ಇದರಿಂದ ತಪ್ಪಿಸಿಕೊಳ್ಳಬಹುದು ಎಂದು ಭಾವಿಸಿದ್ದರೆ ಅದು ಸಾಧ್ಯವಿಲ್ಲ ಎಂದು ರಾಹಲ್ ಗಾಂಧಿ ಹೇಳಿದ್ದಾರೆ.

ಬಿಹಾರದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ(SIR) ಮತ್ತು ಬಿಹಾರ ವಿಧಾನಸಭಾ ಚುನಾವಣೆಯನ್ನು ಬಹಿಷ್ಕರಿಸಲು ಮುಂದಾಗಿರುವ RJD ನಾಯಕ ತೇಜಸ್ವಿ ಯಾದವ್ ಅವರ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ರಾಹುಲ್ ಗಾಂಧಿ, ಕರ್ನಾಟಕದ ಒಂದು ಸ್ಥಾನದಲ್ಲಿ ಚುನಾವಣಾ ಆಯೋಗವು ವಂಚನೆಗೆ ಅವಕಾಶ ನೀಡಿದೆ ಎಂಬುದಕ್ಕೆ ತಮ್ಮ ಪಕ್ಷವು "ಶೇಕಡಾ 100 ರಷ್ಟು ದೃಢವಾದ ಪುರಾವೆ" ಹೊಂದಿದೆ ಎಂದು ತಿಳಿಸಿದರು.

"ಶೇಕಡಾ 90 ಅಲ್ಲ, ನಾವು ಅದನ್ನು ನಿಮಗೆ ತೋರಿಸಲು ನಿರ್ಧರಿಸಿದಾಗ, ಅದು 100 ರಷ್ಟು ದೃಢವಾದ ಪುರಾವೆಯಾಗಿದೆ" ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ಹೇಳಿದರು.

"ನಾವು ಒಂದು ಕ್ಷೇತ್ರದಲ್ಲಿ ಪರಿಶೀಲನೆ ನಡೆಸಿದಾಗ ಇದು ನಮ್ಮ ಗಮನಕ್ಕೆ ಬಂದಿದೆ. ಪ್ರತಿಯೊಂದು ಕ್ಷೇತ್ರದಲ್ಲೂ ಇದೇ ಡ್ರಾಮಾ ನಡೆಯುತ್ತಿದೆ ಎಂದು ನನಗೆ ಸಂಪೂರ್ಣವಾಗಿ ಮನವರಿಕೆಯಾಗಿದೆ. ಸಾವಿರಾರು ಹೊಸ ಮತದಾರರು, ಅವರ ವಯಸ್ಸು ಎಷ್ಟು? - ಒಂದು ಕ್ಷೇತ್ರದಲ್ಲಿ 45, 50, 60, 65 ವರ್ಷ ಎಂದು ಹೇಳಿಕೊಂಡು ಸಾವಿರಾರ ಸೇರ್ಪಡೆಯಾಗಿದೆ. ಇದು ಒಂದು ವಿಷಯವಾದರೆ, ಮತದಾರರ ಅಳಿಸುವಿಕೆ, ಅಕ್ರಮವಾಗಿ 18 ವರ್ಷಕ್ಕಿಂತ ಮೇಲ್ಪಟ್ಟ ಹೊಸ ಮತದಾರರ ಸೇರ್ಪಡೆಯನ್ನು ಪತ್ತೆ ಮಾಡಿದ್ದೇವೆ" ಎಂದು ಅವರು ತಿಳಿಸಿದರು.

"ನಾನು ಚುನಾವಣಾ ಆಯೋಗಕ್ಕೆ ಒಂದು ಸಂದೇಶ ಕಳುಹಿಸಲು ಬಯಸುತ್ತೇನೆ - ನೀವು ಇದರಿಂದ ತಪ್ಪಿಸಿಕೊಳ್ಳುತ್ತೀರಿ ಎಂದು ಭಾವಿಸಿದರೆ ಅದು ಸಾಧ್ಯವಿಲ್ಲ. ಏಕೆಂದರೆ ನೀವು ತಪ್ಪು ಮಾಡಿದ್ದೀರಿ. ನಾವು ಆ ತಪ್ಪಿನ ಕುರಿತಾದ ಪುರಾವೆಯೊಂದಿಗೆ ನಿಮ್ಮ ಬಳಿಗೆ ಬರುತ್ತೇವೆ" ಎಂದು ರಾಹುಲ್ ಗಾಂಧಿ ಸಂಸತ್ತಿನ ಆವರಣದಲ್ಲಿ ವರದಿಗಾರರಿಗೆ ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್‌ ಸರ್ಕಾರ ವಿರುದ್ಧ ಪ್ರತಿಭಟನೆ: ಹಿಂಸಾಚಾರದಲ್ಲಿ ಮೃತಪಟ್ಟವರ ಸಂಖ್ಯೆ 116 ಕ್ಕೆ ಏರಿಕೆ

ಕೇಂದ್ರ ಬಜೆಟ್ 2026-27: ರಾಜ್ಯದ ಹಣಕಾಸು ಸಮತೋಲನ ಪುನಃಸ್ಥಾಪಿಸಲು ಹೆಚ್ಚಿನ ಅನುದಾನ ಒದಗಿಸಿ; ಕೇಂದ್ರಕ್ಕೆ ರಾಜ್ಯ ಸರ್ಕಾರ ಆಗ್ರಹ

ನೋಂದಣಿ ಇಲ್ಲದೆ 'stock tips': ‘Finfluencers’ಗಳ ಸುಮಾರು 1 ಲಕ್ಷ ವಿಡಿಯೋ ಡಿಲೀಟ್​ ಮಾಡಿದ SEBI

ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಯಿಂದ ರಿಷಭ್ ಪಂತ್ ಔಟ್; ಭಾರತ ತಂಡ ಸೇರಿದ 24 ವರ್ಷದ ಆಟಗಾರ!

ಕೇರಳದ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಹೋರಾಟ ನಡೆಸುತ್ತೇವೆಂದ ಸಿಎಂ ಸಿದ್ದರಾಮಯ್ಯ

SCROLL FOR NEXT