ವಿರೋಧ ಪಕ್ಷಗಳ ಪ್ರತಿಭಟನೆ  
ದೇಶ

Monsoon Session Day 4 |ವಿರೋಧ ಪಕ್ಷಗಳ ಮುಂದುವರಿದ ಗದ್ದಲ, ಕೋಲಾಹಲ: ಸಂಸತ್ತು ಉಭಯ ಸದನಗಳ ಕಲಾಪ ಮಧ್ಯಾಹ್ನ 2 ಗಂಟೆಗೆ ಮುಂದೂಡಿಕೆ

ಇದೇ ರೀತಿಯ ಪ್ರತಿಭಟನೆಗಳಿಂದಾಗಿ ಅಧಿವೇಶನದ ಮೊದಲ ಮೂರು ದಿನಗಳು ವ್ಯರ್ಥವಾಗಿ ಕಳೆದುಹೋದವು. ಇದರಿಂದಾಗಿ ಪದೇ ಪದೇ ಮುಂದೂಡಿಕೆಯಾಗಿ ಯಾವುದೇ ಫಲಪ್ರದ ಚರ್ಚೆಗಳು ನಡೆಯಲಿಲ್ಲ.

ಮಳೆಗಾಲದ ಅಧಿವೇಶನದ ನಾಲ್ಕನೇ ದಿನವಾದ ಇಂದು ಕೂಡ ಸಂಸತ್ತಿನ ಉಭಯ ಸದನಗಳಲ್ಲಿ ಗದ್ದಲ ಕೋಲಾಹಲ ಆರಂಭವಾಯಿತು, ವಿರೋಧ ಪಕ್ಷದ ಸಂಸದರು ಸದನದಲ್ಲಿ ಪ್ರತಿಭಟನೆ ನಡೆಸಿದ ನಂತರ ಲೋಕಸಭೆ ಮತ್ತು ರಾಜ್ಯಸಭೆ ಕಲಾಪವನ್ನು ಮಧ್ಯಾಹ್ನ 2 ಗಂಟೆಯವರೆಗೆ ಮುಂದೂಡಲಾಯಿತು.

ಅಧಿವೇಶನ ಪ್ರಾರಂಭವಾಗುವ ಮೊದಲು ವಿರೋಧ ಪಕ್ಷದ ಸದಸ್ಯರು ಬಿಹಾರದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ಸಂಸತ್ತಿನ ಮಕರ ದ್ವಾರದಲ್ಲಿ ಹೊಸ ಪ್ರತಿಭಟನೆಗಳನ್ನು ನಡೆಸಿದರು.

ಇದೇ ರೀತಿಯ ಪ್ರತಿಭಟನೆಗಳಿಂದಾಗಿ ಅಧಿವೇಶನದ ಮೊದಲ ಮೂರು ದಿನಗಳು ವ್ಯರ್ಥವಾಗಿ ಕಳೆದುಹೋದವು. ಇದರಿಂದಾಗಿ ಪದೇ ಪದೇ ಮುಂದೂಡಿಕೆಯಾಗಿ ಯಾವುದೇ ಫಲಪ್ರದ ಚರ್ಚೆಗಳು ನಡೆಯಲಿಲ್ಲ.

ಗಮನಾರ್ಹವಾಗಿ, ಬಿಹಾರದಲ್ಲಿ ನಡೆಯುತ್ತಿರುವ ಎಸ್ ಐಆರ್ ಅಭಿಯಾನ, ಆಪರೇಷನ್ ಸಿಂದೂರ್, ಭಾರತ ಮತ್ತು ಪಾಕಿಸ್ತಾನದ ನಡುವೆ ಕದನ ವಿರಾಮ ಮಾತುಕತೆ ನಡೆಸಿದ್ದಾಗಿ ಡೊನಾಲ್ಡ್ ಟ್ರಂಪ್ ಅವರ ಪದೇ ಪದೇ ಹೇಳಿಕೊಳ್ಳುವಿಕೆ ಮತ್ತು ಅಧಿವೇಶನದ ಮೊದಲ ದಿನ ಜಗದೀಪ್ ಧಂಖರ್ ಅವರು ಉಪ ರಾಷ್ಟ್ರಪತಿ ಸ್ಥಾನಕ್ಕೆ ಹಠಾತ್ ರಾಜೀನಾಮೆಗೆ ಉತ್ತರಗಳನ್ನು ಕೋರಿ ವಿರೋಧ ಪಕ್ಷವು ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರುತ್ತಲೇ ಇವೆ.

ಬಿಹಾರದ ಬಗ್ಗೆ ಪ್ರತಿಪಕ್ಷಗಳು ಕೇಂದ್ರದ ಮೇಲೆ ಒತ್ತಡ ಹೇರಿದ್ದರಿಂದ ಲೋಕಸಭೆಯು ಮತ್ತೊಂದು ದಿನ ಮುಂದೂಡಿಕೆ ಕಂಡಿದೆ.

ಬಿಹಾರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಕುರಿತು ಪ್ರತಿಪಕ್ಷಗಳ ಪ್ರತಿಭಟನೆಯ ನಂತರ ಇಂದು ಲೋಕಸಭಾ ಕಲಾಪವನ್ನು ಮಧ್ಯಾಹ್ನ 2 ಗಂಟೆಯವರೆಗೆ ಮುಂದೂಡಲಾಯಿತು. ಸಂಸತ್ತಿನ ಮಳೆಗಾಲದ ಅಧಿವೇಶನ ಪ್ರಾರಂಭವಾದಾಗಿನಿಂದ ಇದು ಸತತ ನಾಲ್ಕನೇ ದಿನವಾದ ಪ್ರಶ್ನೋತ್ತರ ಅವಧಿಗೆ ಅಡ್ಡಿಯಾಗಿದೆ.

ಇಂದು ಸದನವು ದಿನದ ಸಭೆ ಸೇರಿದ ತಕ್ಷಣ, ವಿವಿಧ ವಿರೋಧ ಪಕ್ಷದ ಸದಸ್ಯರು ಬಿಹಾರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆಯ ವಿಷಯವನ್ನು ಪ್ರಸ್ತಾಪಿಸಲು ಬಯಸಿ ಘೋಷಣೆಗಳನ್ನು ಕೂಗಿದರು. ಕೆಲವು ಸದಸ್ಯರು ಸದನದ ಬಾವಿಗಿಳಿದು ಫಲಕಗಳನ್ನು ಸಹ ಪ್ರದರ್ಶಿಸಿದರು.

ಸ್ಪೀಕರ್ ಓಂ ಬಿರ್ಲಾ ಪ್ರತಿಭಟನಾ ನಿರತ ಸದಸ್ಯರನ್ನು ತಮ್ಮ ಸ್ಥಾನಗಳಿಗೆ ಹಿಂತಿರುಗುವಂತೆ ಕೇಳಿಕೊಂಡರು. ನಿಯಮಗಳ ಪ್ರಕಾರ ಅವರಿಗೆ ಸಮಸ್ಯೆಗಳನ್ನು ಎತ್ತಲು ಅವಕಾಶ ನೀಡಲಾಗುವುದು ಎಂದು ಭರವಸೆ ನೀಡಿದರು. ಹಿರಿಯ ಕಾಂಗ್ರೆಸ್ ನಾಯಕ ಕೆ.ಸಿ. ವೇಣುಗೋಪಾಲ್ ಅವರ ಹೆಸರನ್ನು ಉಲ್ಲೇಖಿಸಿ ಸದನದಲ್ಲಿ ಘೋಷಣೆಗಳಲ್ಲಿ ತೊಡಗುವುದು ತಮ್ಮ ಪಕ್ಷದ ಸಂಸ್ಕೃತಿಯಲ್ಲ ಎಂದು ಹೇಳಿದರು.

ಘೋಷಣೆಗಳು ಮತ್ತು ಫಲಕಗಳ ಪ್ರದರ್ಶನವು ಸದನದ ಘನತೆಗೆ ತಕ್ಕುದಲ್ಲ ಎಂದು ಓಂ ಬಿರ್ಲಾ ಪದೇ ಪದೇ ಉಲ್ಲೇಖಿಸಿದರು. ಅಂತಹ ಕ್ರಮಗಳು ಯಾವ ರೀತಿಯ ಸಂದೇಶವನ್ನು ಕಳುಹಿಸುತ್ತವೆ ಎಂದು ಕೇಳಿದರು. ಗದ್ದಲ ಮುಂದುವರಿದಂತೆ, ಬಿರ್ಲಾ ಏಳು ನಿಮಿಷಗಳಿಗಿಂತ ಕಡಿಮೆ ಅವಧಿಗೆ ಕಲಾಪವನ್ನು ಮುಂದೂಡಿದರು. ಒಂದು ಪ್ರಶ್ನೆಯನ್ನು ಎತ್ತಿಕೊಂಡು ನಂತರ ಕಲಾಪವನ್ನು ಮಧ್ಯಾಹ್ನ 2 ಗಂಟೆಯವರೆಗೆ ಮುಂದೂಡಲಾಯಿತು.

ಈ ವರ್ಷದ ಕೊನೆಯಲ್ಲಿ ನಡೆಯಲಿರುವ ಬಿಹಾರ ರಾಜ್ಯ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ ಚುನಾವಣಾ ಆಯೋಗವು ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ಚರ್ಚೆ ನಡೆಸಬೇಕೆಂದು ವಿರೋಧ ಪಕ್ಷಗಳು ಒತ್ತಾಯಿಸುತ್ತಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

SCROLL FOR NEXT