ಮಲ್ಲಿಕಾರ್ಜುನ ಖರ್ಗೆ 
ದೇಶ

11 ವರ್ಷದಿಂದ ಜಡತ್ವಗೊಂಡಿರುವ ಭಾರತಕ್ಕೆ ಬೇಕಿದೆ 2ನೇ ಆರ್ಥಿಕ ಸುಧಾರಣೆ: ಮಲ್ಲಿಕಾರ್ಜುನ ಖರ್ಗೆ

ಕಾಂಗ್ರೆಸ್ ಪಕ್ಷವು ತನ್ನ ಆರ್ಥಿಕ ಉದಾರೀಕರಣ ನೀತಿಗಳ ಬಗ್ಗೆ ಅಪಾರ ಹೆಮ್ಮೆಪಡುತ್ತದೆ, ಇದು ಭಾರತದ ಸಮಗ್ರ ಬೆಳವಣಿಗೆಗೆ ಗಮನಾರ್ಹವಾಗಿ ಉತ್ತೇಜನ ನೀಡಿದ ಮತ್ತು ಕೋಟ್ಯಂತರ ಜನರನ್ನು ಬಡತನದಿಂದ ಮೇಲೆತ್ತಲು ಸಹಾಯ ಮಾಡಿದ ಒಂದು ಸಾಧನೆಯಾಗಿದೆ.

ನವದೆಹಲಿ: ಕಳೆದ ಹನ್ನೊಂದು ವರ್ಷಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಜಡಗೊಂಡಿದ್ದು, ಇದಕ್ಕೆ 1991ರಲ್ಲಿ ನಡೆದ ಐತಿಹಾಸಿಕ ಉದಾರವಾದಿ ಬಜೆಟ್‌ನಂತೆಯೇ 2ನೇ ತಲೆಮಾರಿನ ಆರ್ಥಿಕ ಸುಧಾರಣೆ ಅಗತ್ಯವಿದೆ ಎಂದು ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

ಡಾ. ಮನಮೋಹನ್ ಸಿಂಗ್ ಅವರು ಮಂಡಿಸಿದ ಆರ್ಥಿಕ ಉದಾರೀಕರಣ ಬಜೆಟ್‌ನ 34ನೇ ವರ್ಷಾಚರಣೆಯ ನೆನಪಿನಲ್ಲಿ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಈ ವಿಷಯವನ್ನು ಅವರು ಹಂಚಿಕೊಂಡಿದ್ದಾರೆ. ಮೋದಿ ಸರ್ಕಾರ ವಿನಾಶಕಾರಿ ಆರ್ಥಿಕ ನೀತಿಗಳಿಂದಾಗಿ ದೂರದೃಷ್ಟಿ ಮತ್ತು ಕ್ರಿಯೆ ಎರಡನ್ನೂ ಕಳೆದುಕೊಂಡಿದೆ.

ಇದರಿಂದ ದೇಶದ ಬೆಳವಣಿಗೆ ದರವೇ ಪಾತಾಳಕ್ಕೆ ಕುಸಿಯುತ್ತಿದೆ. ಸಮಾಜದಲ್ಲಿ ಅಸಮಾನತೆ ಇನ್ನಷ್ಟು ಹೆಚ್ಚಾಗುತ್ತಿದೆ. ವೇತನ ಹೆಚ್ಚಾಗದ ಕಾರಣ ಜನರು, ನೌಕರ ವರ್ಗ ತತ್ತರಿಸಿದೆ. ಕಾರ್ಪೊರೇಟ್ ಕುಳಗಳಿಗೆ ಸಹಾಯ ಮಾಡಲು ಮಧ್ಯಮ ವರ್ಗ ಹಾಗೂ ಬಡವರನ್ನು ಸುಲಿಗೆ ಮಾಡಲಾಗುತ್ತಿದೆ. ಈ ಎಲ್ಲಾ ಸಮಸ್ಯೆಗಳು ಕೃಷಿ ಮತ್ತು ತಯಾರಿಕಾ ಘಟಕದಲ್ಲೂ ತಲೆದೋರಿವೆ ಎಂದು ಖರ್ಗೆ ಹೇಳಿದ್ದಾರೆ.

ಕಾಂಗ್ರೆಸ್ ಪಕ್ಷವು ತನ್ನ ಆರ್ಥಿಕ ಉದಾರೀಕರಣ ನೀತಿಗಳ ಬಗ್ಗೆ ಅಪಾರ ಹೆಮ್ಮೆಪಡುತ್ತದೆ, ಇದು ಭಾರತದ ಸಮಗ್ರ ಬೆಳವಣಿಗೆಗೆ ಗಮನಾರ್ಹವಾಗಿ ಉತ್ತೇಜನ ನೀಡಿದ ಮತ್ತು ಕೋಟ್ಯಂತರ ಜನರನ್ನು ಬಡತನದಿಂದ ಮೇಲೆತ್ತಲು ಸಹಾಯ ಮಾಡಿದ ಒಂದು ಹೆಗ್ಗುರುತು ಸಾಧನೆಯಾಗಿದೆ ಎಂದು ಖರ್ಗೆ ಹೇಳಿದರು.

1991ರ ಬಜೆಟ್‌ ಭಾರತದ ಪಾಲಿಗೆ ಪ್ರಮುಖ ಕ್ಷಣವಾಗಿತ್ತು. ದೇಶದಲ್ಲಿ ವ್ಯಾಪಕ ಬದಲಾವಣೆ, ಜನರ ಜೀವನ ಮಟ್ಟದಲ್ಲಿ ಸುಧಾರಣೆ ನಡೆಯಿತು. ಅಂದಿನ ಪ್ರಧಾನಿ ಪಿ.ವಿ. ನರಸಿಂಹರಾವ್ ಅವರ ಮಾರ್ಗದರ್ಶನದಲ್ಲಿ ಅಂದಿನ ವಿತ್ತ ಸಚಿವ ಮನಮೋಹನ ಸಿಂಗ್ ಅವರು ಆರ್ಥಿಕ ಸುಧಾರಣೆಗೆ ಸರಣಿ ನೀತಿಗಳನ್ನು ಜಾರಿಗೆ ತಂದ ಪರಿಣಾಮ ದೇಶದಲ್ಲಿ ಪರಿವರ್ತನೆ ಆರಂಭವಾಯಿತು. ಮುಂದಿನ ಪೀಳಿಗೆಯ ಮಧ್ಯಮ ವರ್ಗದ ಪರಿವರ್ತನೆಗೆ ಅದು ಸಹಕಾರಿಯಾಯಿತು ಎಂದಿದ್ದಾರೆ.

ಇಂದು ದೇಶವು ಅಂಥದ್ದೇ ಒಂದು ಅದ್ಭುತ 2ನೇ ತಲೆಮಾರಿನ ಆರ್ಥಿಕ ಸುಧಾರಣೆಯ ತುರ್ತು ಅಗತ್ಯದಲ್ಲಿದೆ. ಮಧ್ಯಮ ವರ್ಗ ಮತ್ತು ಅವಕಾಶ ವಂಚಿತರಿಗೆ ನೆರವಾಗಲು ಈಗ 2ನೇ ಸುಧಾರಣಾ ನೀತಿಯ ಅಗತ್ಯವಿದೆ. ಹೀಗಿದ್ದರೂ ಕಳೆದ 11 ವರ್ಷಗಳಿಂದ ಸರ್ಕಾರ ಜಡಗೊಂಡಿದೆ ಎಂದು ಖರ್ಗೆ ಹೇಳಿದ್ದಾರೆ.

ದೇಶದ ಹಣಕಾಸು ನೀತಿಗಳನ್ನು ರೂಪಿಸುವಲ್ಲಿ, ಬೆಲೆ ಏರಿಕೆ ನಿಯಂತ್ರಿಸುವಲ್ಲಿ, ಖಾಸಗಿ ಹೂಡಿಕೆಗಳನ್ನು ತಗ್ಗಿಸುವಲ್ಲಿ ಮತ್ತು ನೌಕರ ವರ್ಗದ ವೇತನ ಹೆಚ್ಚಿಸುವಲ್ಲಿ ಮತ್ತು ಸಾಮಾನ್ಯ ಜನರ ಕಷ್ಟ ನಿವಾರಣೆಯಲ್ಲಿ ಮೋದಿ ಸರ್ಕಾರ ಸದಾ ವಿಫಲವಾಗಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT