ಸುಪ್ರೀಂ ಕೋರ್ಟ್  
ದೇಶ

ನ್ಯಾಯಾಧೀಶರ ನೇಮಕಾತಿಯಲ್ಲಿ ವಿಳಂಬ: ಅರ್ಜಿಗಳ ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ಕೆಲವು ನ್ಯಾಯಾಧೀಶರ ಹೆಸರುಗಳನ್ನು 2019, 2020 ಮತ್ತು 2022 ರಲ್ಲಿ ಪುನರುಚ್ಚರಿಸಲಾಯಿತು, ಆದರೆ ಇಲ್ಲಿಯವರೆಗೆ ತೆರವುಗೊಳಿಸಲಾಗಿಲ್ಲ.

ನವದೆಹಲಿ: ನ್ಯಾಯಾಧೀಶರ ನೇಮಕಾತಿಯಲ್ಲಿ ಕೇಂದ್ರ ಸರ್ಕಾರದ ವಿಳಂಬವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳನ್ನು ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಕೊಂಡಿದೆ.

ಹಿರಿಯ ವಕೀಲ ಅರವಿಂದ್ ದಾತಾರ್ ಮತ್ತು ವಕೀಲ ಪ್ರಶಾಂತ್ ಭೂಷಣ್ ಅವರು ಅರ್ಜಿಗಳನ್ನು ತುರ್ತು ಪಟ್ಟಿಗೆ ಉಲ್ಲೇಖಿಸಿದ ಎರಡು ವಾರಗಳ ನಂತರ ಅರ್ಜಿಗಳನ್ನು ವಿಚಾರಣೆ ನಡೆಸುವುದಾಗಿ ಮುಖ್ಯ ನ್ಯಾಯಮೂರ್ತಿ (CJI) ಬಿ ಆರ್ ಗವಾಯಿ ಮತ್ತು ನ್ಯಾಯಮೂರ್ತಿ ಕೆ ವಿನೋದ್ ಚಂದ್ರನ್ ಅವರನ್ನೊಳಗೊಂಡ ಪೀಠವು ತಿಳಿಸಿದೆ. ಅರ್ಜಿಗಳನ್ನು 2023 ರಲ್ಲಿ ಪಟ್ಟಿ ಮಾಡಲಾಗಿತ್ತು ಆದರೆ ಇದ್ದಕ್ಕಿದ್ದಂತೆ ಪ್ರಕರಣ ಪಟ್ಟಿಯಿಂದ ಕೈಬಿಡಲಾಗಿದೆ ಎಂದು ಆಕ್ಷೇಪ ವ್ಯಕ್ತಪಡಿಸಿದರು.

ಕೆಲವು ನ್ಯಾಯಾಧೀಶರ ಹೆಸರುಗಳನ್ನು 2019, 2020 ಮತ್ತು 2022 ರಲ್ಲಿ ಪುನರುಚ್ಚರಿಸಲಾಯಿತು, ಆದರೆ ಇಲ್ಲಿಯವರೆಗೆ ತೆರವುಗೊಳಿಸಲಾಗಿಲ್ಲ. ನ್ಯಾಯಾಲಯವು ಪ್ರತಿ ಹಂತದಲ್ಲೂ ನಿರ್ಧಾರಗಳನ್ನು ತೆಗೆದುಕೊಳ್ಳಲು ನಿಗದಿತ ಸಮಯ ಮಿತಿಯನ್ನು ಹೊಂದಿದೆ. ಕೆಲವು ವಾರಗಳ ವಿಳಂಬವು ಅರ್ಥವಾಗುವಂತಹದ್ದಾಗಿದೆ ಆದರೆ ನಾಲ್ಕು ವರ್ಷಗಳ ವಿಳಂಬಕ್ಕೆ ಏನರ್ಥ ಎಂದು ದಾತಾರ್ ಕೇಳಿದರು.

ಸುಪ್ರೀಂ ಕೋರ್ಟ್ ಕೊಲಿಜಿಯಂ ನ್ಯಾಯಾಧೀಶ ಸ್ಥಾನಕ್ಕೆ ಶಿಫಾರಸು ಮಾಡಿದ ಅಭ್ಯರ್ಥಿಯು ಕ್ರಮೇಣ ಆಸಕ್ತಿ ಮತ್ತು ಹಿರಿತನವನ್ನು ಕಳೆದುಕೊಳ್ಳುತ್ತಾನೆ ಎಂದು ಹೇಳಿದರು. ದೆಹಲಿ ಮತ್ತು ಮುಂಬೈನಲ್ಲಿ ಶಿಫಾರಸು ಮಾಡಲಾದ ವಕೀಲರು ಅಂತಿಮವಾಗಿ ತಮ್ಮ ಹೆಸರುಗಳನ್ನು ಹಿಂತೆಗೆದುಕೊಂಡ ಸಂದರ್ಭಗಳನ್ನು ವಕೀಲರು ಉಲ್ಲೇಖಿಸಿದರು.

ಹೈಕೋರ್ಟ್ ನ್ಯಾಯಾಧೀಶರ ಬಡ್ತಿ ಮತ್ತು ವರ್ಗಾವಣೆಗೆ ಸುಪ್ರೀಂ ಕೋರ್ಟ್ ಕೊಲಿಜಿಯಂ ಶಿಫಾರಸು ಮಾಡಿದ ಹೆಸರುಗಳನ್ನು ತೆರವುಗೊಳಿಸಲು 2021 ರ ತೀರ್ಪಿನಲ್ಲಿ ನ್ಯಾಯಾಲಯ ನಿಗದಿಪಡಿಸಿದ ಗಡುವನ್ನು ಪಾಲಿಸದ ಕಾರಣ ಕೇಂದ್ರ ಕಾನೂನು ಮತ್ತು ನ್ಯಾಯ ಇಲಾಖೆ ಸಚಿವಾಲಯದ ವಿರುದ್ಧ ನ್ಯಾಯಾಂಗ ನಿಂದನೆ ಕ್ರಮ ಕೈಗೊಳ್ಳಬೇಕೆಂದು ಕೋರಿ ಬೆಂಗಳೂರಿನ ವಕೀಲರ ಸಂಘ ಸಲ್ಲಿಸಿದ ಅರ್ಜಿ ಸೇರಿದಂತೆ ಹಲವು ಅರ್ಜಿಗಳನ್ನು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸುತ್ತಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

ಶಿಬು ಸೊರೇನ್ 'ರಾಜ್ಯದ ಪಿತಾಮಹ' ಎಂದು ಘೋಷಿಸುವಂತೆ ಜೆಎಂಎಂ ಆಗ್ರಹ

SCROLL FOR NEXT