ಬ್ರಿಟನ್ ಪ್ರಧಾನಿ ಕೀರ್ ಸ್ಟಾರ್ಮರ್ ಅವರೊಂದಿಗೆ ಪ್ರಧಾನಿ ಮೋದಿ 
ದೇಶ

ಯುಕೆ ಜೊತೆಗೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ: ಭಾರತದ 75,000 ಉದ್ಯೋಗಿಗಳಿಗೆ ಪ್ರಯೋಜನ!

ಇದು ಯುಕೆಯಲ್ಲಿ ಪೋಸ್ಟ್ ಮಾಡಲಾದ ಭಾರತೀಯ ವೃತ್ತಿಪರರಿಗೆ‌, ಮೂರು ವರ್ಷಗಳವರೆಗೆ ಸಾಮಾಜಿಕ ಭದ್ರತಾ ಕೊಡುಗೆಗಳನ್ನು ಪಾವತಿಸುವುದರಿಂದ ವಿನಾಯಿತಿ ನೀಡುತ್ತದೆ ಎಂದು ವಾಣಿಜ್ಯ ಸಚಿವಾಲಯದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ನವದೆಹಲಿ: ಇಂಗ್ಲೆಂಡ್ ಜೊತೆಗಿನ ಮುಕ್ತ ವ್ಯಾಪಾರ ಒಪ್ಪಂದದಿಂದ 75,000 ಕ್ಕೂ ಹೆಚ್ಚು ಭಾರತೀಯ ಉದ್ಯೋಗಿಗಳು ಮತ್ತು 900 ಕ್ಕೂ ಹೆಚ್ಚು ಉದ್ಯೋಗದಾತರಿಗೆ ಪ್ರಯೋಜನವಾಗಲಿದೆ ಎಂದು ಅಂದಾಜಿಸಲಾಗಿದೆ.

ಇದು ಯುಕೆಯಲ್ಲಿ ಪೋಸ್ಟ್ ಮಾಡಲಾದ ಭಾರತೀಯ ವೃತ್ತಿಪರರಿಗೆ‌, ಮೂರು ವರ್ಷಗಳವರೆಗೆ ಸಾಮಾಜಿಕ ಭದ್ರತಾ ಕೊಡುಗೆಗಳನ್ನು ಪಾವತಿಸುವುದರಿಂದ ವಿನಾಯಿತಿ ನೀಡುತ್ತದೆ ಎಂದು ವಾಣಿಜ್ಯ ಸಚಿವಾಲಯದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

283 ಬಿಲಿಯನ್ ಡಾಲರ್ ಮೊತ್ತದ ಭಾರತದ ಐಟಿ ಉದ್ಯಮಕ್ಕೆ ಯುಕೆ ಎರಡನೇ ಅತಿದೊಡ್ಡ ರಫ್ತು ಮಾರುಕಟ್ಟೆಯಾಗಿರುವುದರಿಂದ ಈ ಕ್ರಮ ಮಹತ್ವದ್ದಾಗಿದೆ. ಅಲ್ಲದೇ ರಫ್ತು ವಲಯಕ್ಕೆ ಶೇಕಡಾ 17 ರಷ್ಟು ಕೊಡುಗೆ ನೀಡುತ್ತದೆ.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಮಾಹಿತಿ ಹಂಚಿಕೊಂಡಿರುವ ಕೇಂದ್ರ ವಾಣಿಜ್ಯ ಸಚಿವ ಪಿಯೂಷ್ ಗೋಯಲ್, DCC ಭಾಗವಾಗಿ (The Double Contribution Convention ) ಮೂರು ವರ್ಷಗಳವರೆಗೆ ಸಾಮಾಜಿಕ ಭದ್ರತಾ ಕೊಡುಗೆ ಪಾವತಿಸುವುದರಿಂದ ವಿನಾಯಿತಿ ನೀಡುವುದರಿಂದ ಭಾರತೀಯ ಉದ್ಯೋಗಿಗಳು ಮತ್ತು ಅವರ ಉದ್ಯೋಗದಾತರಿಗೆ ಗಮನಾರ್ಹ ಪ್ರಗತಿ ಎಂದಿದ್ದಾರೆ.

ಮುಕ್ತ ವ್ಯಾಪಾರದೊಂದಿಗೆ DCCಯಿಂದ ಉಭಯ ದೇಶಗಳ ಉದ್ಯೋಗಿಗಳು ತಾತ್ಕಾಲಿಕವಾಗಿ ಕೆಲಸ ಮಾಡುವಾಗ, ತಮ್ಮ ಸಾಮಾಜಿಕ ಭದ್ರತೆಗೆ ದುಪ್ಪಟ್ಟು ಕೊಡುಗೆಗಳನ್ನು ಪಾವತಿಸಬೇಕಾಗಿಲ್ಲ.

ಭಾರತ ಮತ್ತು ಯುಕೆ ಗುರುವಾರ ಮುಕ್ತ ವ್ಯಾಪಾರ ಒಪ್ಪಂದಕ್ಕೆ (ಎಫ್‌ಟಿಎ) ಸಹಿ ಹಾಕಿವೆ. ಇದರಿಂದ ಬ್ರಿಟಿಷ್ ವಿಸ್ಕಿ, ಕಾರುಗಳು ಮತ್ತಿತರ ದುಬಾರಿ ವಸ್ತುಗಳ ಮೇಲಿನ ಸುಂಕವನ್ನು ಕಡಿತಗೊಳಿಸುತ್ತದೆ. ಜೊತೆಗೆ ವಾರ್ಷಿಕವಾಗಿ ಸುಮಾರು 34 ಬಿಲಿಯನ್ ಡಾಲರ್ ನಷ್ಟು ದ್ವಿಪಕ್ಷೀಯ ವ್ಯಾಪಾರವನ್ನು ಹೆಚ್ಚಿಸುತ್ತದೆ.

ಈ ಒಪ್ಪಂದಕ್ಕೆ ಪ್ರಧಾನಿ ನರೇಂದ್ರ ಮೋದಿ ಮತ್ತು ಬ್ರಿಟನ್ ಪ್ರಧಾನಿ ಕೀರ್ ಸ್ಟಾರ್ಮರ್ ಅವರ ಸಮ್ಮುಖದಲ್ಲಿ ವಾಣಿಜ್ಯ ಸಚಿವ ಪಿಯೂಷ್ ಗೋಯಲ್ ಮತ್ತು ಬ್ರಿಟಿಷ್ ವಾಣಿಜ್ಯ ಸಚಿವ ಜೊನಾಥನ್ ರೆನಾಲ್ಡ್ಸ್ ಸಹಿ ಹಾಕಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

ಪಕ್ಷದ ಮೇಲೆ ನನಗೆ ನಂಬಿಕೆ ಇದೆ: ದುಡ್ಡು- ಬ್ಲಡ್ ನಿರಂತರ ಚಲನೆಯಲ್ಲಿ ಇರಬೇಕು; ಅಕ್ಕಪಕ್ಕದಲ್ಲಿ ಇರುವವರೇ ಮೋಸ ಮಾಡುತ್ತಾರೆ, ಎಚ್ಚರ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT