ಗೋವಿಂದಚಾಮಿ 
ದೇಶ

ಕಣ್ಣೂರು ಜೈಲಿನಿಂದ ತಪ್ಪಿಸಿಕೊಂಡ ಕೆಲವೇ ಗಂಟೆಗಳಲ್ಲಿ ಸಿಕ್ಕಿಬಿದ್ದ ಕೊಲೆ ಅಪರಾಧಿ ಗೋವಿಂದಚಾಮಿ

ಗೋವಿಂದಚಾಮಿಗೆ ಎಡಗೈ ತುಂಡಾಗಿದ್ದು, ಕಣ್ಣೂರು ನಗರ ವ್ಯಾಪ್ತಿಯ ಥಲಾಪ್‌ನಲ್ಲಿರುವ ಪಾಳುಬಿದ್ದ ಕಟ್ಟಡದ ಸಮೀಪ ಆತನನ್ನು ಸೆರೆಹಿಡಿಯಲಾಗಿದೆ.

ಕಣ್ಣೂರು: ಭಾರಿ ಸಂಚಲನ ಮೂಡಿಸಿದ್ದ 2011ರ ಕೇರಳದ ಸೌಮ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ದೋಷಿ ಗೊವಿಂದಚಾಮಿ ಭಾರಿ ಭದ್ರತೆ ಇರುವ ಕಣ್ಣೂರು ಕೇಂದ್ರ ಜೈಲಿನಿಂದ ಶುಕ್ರವಾರ ಬೆಳಿಗ್ಗೆ ತಪ್ಪಿಸಿಕೊಂಡಿದ್ದು, ಕೆಲವೇ ಗಂಟೆಗಳಲ್ಲಿ ಆತನನ್ನು ಪೊಲೀಸರು ಬಂಧಿಸಿದ್ದಾರೆ.

ಗೋವಿಂದಚಾಮಿಗೆ ಎಡಗೈ ತುಂಡಾಗಿದ್ದು, ಕಣ್ಣೂರು ನಗರ ವ್ಯಾಪ್ತಿಯ ಥಲಾಪ್‌ನಲ್ಲಿರುವ ಪಾಳುಬಿದ್ದ ಕಟ್ಟಡದ ಸಮೀಪ ಆತನನ್ನು ಸೆರೆಹಿಡಿಯಲಾಗಿದೆ. ವರದಿಗಳ ಪ್ರಕಾರ ಆತ ಕಟ್ಟಡದ ಸಮೀಪ ಇದ್ದ ಬಾವಿಯಲ್ಲಿ ಅಡಗಿ ಕುಳಿತಿದ್ದ.

ಬೆಳಗಿನ ಜಾವ 1.15 ರ ಸುಮಾರಿಗೆ ಈ ಘಟನೆ ನಡೆದಿದೆ. 10 ನೇ ಬ್ಲಾಕ್‌ನಲ್ಲಿರುವ ಬಿಗಿ ಭದ್ರತೆಯ ಸೆಲ್‌ನಲ್ಲಿ ಏಕಾಂಗಿಯಾಗಿದ್ದ ಗೋವಿಂದಚಾಮಿ, ಕಬ್ಬಿಣದ ಸರಳುಗಳನ್ನು ಕತ್ತರಿಸಿ ವಾಶ್ ಏರಿಯಾದಿಂದ ಬಟ್ಟೆಗಳನ್ನು ಬಳಸಿ ಜೈಲಿನ ಗೋಡೆಯಿಂದ ಕೆಳಕ್ಕೆ ಇಳಿದಿದ್ದ ಎಂದು ಜೈಲು ಅಧಿಕಾರಿಗಳು ತಿಳಿಸಿದ್ದಾರೆ.

ಸಿಸಿಟಿವಿ ದೃಶ್ಯಾವಳಿಗಳು ಅವನಿಗೆ ಹೊರಗಿನಿಂದ ಸಹಾಯ ದೊರೆತಿರುವುದನ್ನು ತೋರಿಸುತ್ತದೆ. ಆದಾಗ್ಯೂ, ಜೈಲು ಸಿಬ್ಬಂದಿ ಬೆಳಿಗ್ಗೆ 5 ಗಂಟೆಯ ಸುಮಾರಿಗೆ ಬೆಳಗಿನ ಜಾವದ ಸಮಯದಲ್ಲಿ ಮಾತ್ರ ಆತ ಅಲ್ಲಿ ಇಲ್ಲದ್ದನ್ನು ಗಮನಿಸಿದರು. ನಂತರ ಜೈಲಿನೊಳಗೆ ಹುಡುಕಾಟ ನಡೆಸಲಾಯಿತು ಆದರೆ ಅವನು ಪತ್ತೆಯಾಗಲಿಲ್ಲ. ಅಧಿಕಾರಿಗಳು ಅವರು ಹಲವು ಗಂಟೆಗಳ ಕಾಲ ಕಾಣೆಯಾಗಿದ್ದನ್ನು ದೃಢಪಡಿಸಿದರು.

ಜೈಲು ಅಧಿಕೃತವಾಗಿ ಬೆಳಿಗ್ಗೆ 7 ಗಂಟೆಗೆ ಪೊಲೀಸರಿಗೆ ಮಾಹಿತಿ ನೀಡಿತು ಮತ್ತು ಪೂರ್ಣ ಪ್ರಮಾಣದ ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಯಿತು. ಫೆಬ್ರವರಿ 1, 2011 ರಂದು ಸೌಮ್ಯ ಎಂಬ ಯುವತಿ ಎರ್ನಾಕುಲಂನಿಂದ ಶೋರ್ನೂರ್‌ಗೆ ಹೋಗುವ ರೈಲಿನಲ್ಲಿ ಮಹಿಳಾ ಕಂಪಾರ್ಟ್‌ಮೆಂಟ್‌ಗೆ ಹತ್ತಿದ್ದಳು. ಏಕಾಏಕಿ ಕಂಪಾರ್ಟ್‌ಮೆಂಟ್‌ಗೆ ನುಗ್ಗಿದ ಗೋವಿಂದಚಾಮಿ, ಸೌಮ್ಯ ಮೇಲೆ ಹಲ್ಲೆ ನಡೆಸಿ, ಬರ್ಬರವಾಗಿ ಅತ್ಯಾಚಾರ ಎಸಗಿ ನಂತರ ರೈಲಿನಿಂದ ಎಸೆದು ಕ್ರೌರ್ಯ ಮೆರೆದಿದ್ದ.

ಗಂಭೀರವಾಗಿ ಗಾಯಗೊಂಡಿದ್ದ ಸೌಮ್ಯಾ ಫೆಬ್ರವರಿ 6, 2011 ರಂದು ತ್ರಿಶೂರ್ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಸಾವನ್ನಪ್ಪಿದಳು. ಪ್ರಕರಣಕ್ಕೆ ಸಂಬಂಧಿಸಿದಂತೆ ಗೋವಿಂದಚಾಮಿಯನ್ನು ಅರೆಸ್ಟ್‌ ಮಾಡಲಾಗಿತ್ತು. ತ್ರಿಶೂರ್ ಫಾಸ್ಟ್ ಟ್ರ್ಯಾಕ್ ವಿಶೇಷ ನ್ಯಾಯಾಲಯವು ನವೆಂಬರ್ 11, 2011 ರಂದು ಗೋವಿಂದಚಾಮಿಗೆ ಮರಣದಂಡನೆ ಶಿಕ್ಷೆ ವಿಧಿಸಿತು. ಆದಾಗ್ಯೂ, ಸುಪ್ರೀಂ ಕೋರ್ಟ್ ಸೆಪ್ಟೆಂಬರ್ 2016 ರಲ್ಲಿ ಮರಣದಂಡನೆಯನ್ನು ಕಡಿಮೆ ಮಾಡಿತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಗಾಂಧಿ ಜಯಂತಿ 2025: ರಾಜ್‌ಘಾಟ್‌ನಲ್ಲಿ ಪ್ರಧಾನಿ ಮೋದಿ ಸೇರಿ ಗಣ್ಯರಿಂದ ಪುಷ್ಪ ನಮನ

ವಸ್ತುಸ್ಥಿತಿಯ ಬಗ್ಗೆ ಅರಿವಿಲ್ಲದೇ ಮಾತನಾಡುವ ವಿಪಕ್ಷಗಳ ಭವಿಷ್ಯ ನಿಜವಾಗದು: ಸಿಎಂ ಸಿದ್ದರಾಮಯ್ಯ

RSS ಶತಮಾನೋತ್ಸವ: ಈ ಅದ್ಭುತ ಪಯಣ ಭಾರತದ ದಿಕ್ಕನ್ನೇ ಬದಲಾಯಿಸಿದೆ; BJP

ದ್ವೇಷ, ಹಿಂಸೆ, ಅನ್ಯಾಯವೆಂಬ ಅಂಧಕಾರ ಆವರಿಸಿದಂತೆಲ್ಲಾ ಅದರಿಂದ ಹೊರಬರಲು ಮತ್ತೆ ಮತ್ತೆ ನೆನಪಾಗುವುದು ಬಾಪು: ಸಿಎಂ ಸಿದ್ದರಾಮಯ್ಯ

ಗೃಹಲಕ್ಷ್ಮಿ ಹಣದಿಂದ ವಾಷಿಂಗ್ ಮಷಿನ್ ಖರೀದಿ: ನವರಾತ್ರಿ ವೇಳೆ ಮಹಿಳೆಯೊಬ್ಬರ ಸಂಭ್ರಮಕ್ಕೆ ಯೋಜನೆ ಕಾರಣವಾಗಿರುವುದು ಸಾರ್ಥಕ ತರಿಸಿದೆ ಎಂದ ಸಿಎಂ

SCROLL FOR NEXT