ಲೋಕಸಭೆ 
ದೇಶ

ಭಾರತ-ಪಾಕ್ ಕದನ ವಿರಾಮ: ಅಮೆರಿಕ ಪಾತ್ರದ ಬಗ್ಗೆ ಲೋಕಸಭೆಗೆ ಉತ್ತರ ನೀಡಿದ ಕೇಂದ್ರ

'ಭಾರತ ಮತ್ತು ಪಾಕಿಸ್ತಾನದ ನಡುವಿನ ಕದನ ವಿರಾಮದಲ್ಲಿ ಅಮೆರಿಕದ ಹಸ್ತಕ್ಷೇಪ ಇರುವುದು ಸತ್ಯವೇ' ಎಂದು ಕೇಳಿದ ಪ್ರಶ್ನೆಗೆ ವಿದೇಶಾಂಗ ಸಚಿವಾಲಯ(MEA) ಇಂದು ಲಿಖಿತ ಉತ್ತರ ನೀಡಿದೆ.

ನವದೆಹಲಿ: ಭಾರತ ಮತ್ತು ಪಾಕಿಸ್ತಾನ ಮೇ 10 ರಂದು ಎರಡೂ ರಾಷ್ಟ್ರಗಳ ಮಿಲಿಟರಿ ಕಾರ್ಯಾಚರಣೆಗಳ ಮಹಾನಿರ್ದೇಶಕರ (DGMOs) ನಡುವಿನ 'ನೇರ ಮಾತುಕತೆ'ಯ ಪರಿಣಾಮವಾಗಿ ಕದನ ವಿರಾಮಕ್ಕೆ ಒಪ್ಪಿಕೊಂಡವು ಎಂದು ಕೇಂದ್ರ ಸರ್ಕಾರ ಶುಕ್ರವಾರ ಸಂಸತ್ತಿಗೆ ತಿಳಿಸಿದೆ.

'ಭಾರತ ಮತ್ತು ಪಾಕಿಸ್ತಾನದ ನಡುವಿನ ಕದನ ವಿರಾಮದಲ್ಲಿ ಅಮೆರಿಕದ ಹಸ್ತಕ್ಷೇಪ ಇರುವುದು ಸತ್ಯವೇ' ಎಂದು ಕೇಳಿದ ಪ್ರಶ್ನೆಗೆ ವಿದೇಶಾಂಗ ಸಚಿವಾಲಯ(MEA) ಇಂದು ಲಿಖಿತ ಉತ್ತರ ನೀಡಿದೆ.

ಲೋಕಸಭೆಯಲ್ಲಿ ಲಿಖಿತ ಉತ್ತರ ನೀಡಿದ ವಿದೇಶಾಂಗ ವ್ಯವಹಾರಗಳ ಖಾತೆ ರಾಜ್ಯ ಸಚಿವ ಕೀರ್ತಿ ವರ್ಧನ್ ಸಿಂಗ್ ಅವರು, ಪಾಕಿಸ್ತಾನ ಮೊದಲು ಕದನ ವಿರಾಮದ ಬಗ್ಗೆ ಪ್ರಸ್ತಾಪ ಮಾಡಿತು ಎಂದು ಹೇಳಿದ್ದಾರೆ.

ಭಾರತ ಮತ್ತು ಪಾಕಿಸ್ತಾನ ಮೇ 10 ರಂದು 'ಎರಡೂ ರಾಷ್ಟ್ರಗಳ DGMOs ನಡುವಿನ ನೇರ ಮಾತುಕತೆಯ ಪರಿಣಾಮವಾಗಿ ಗುಂಡಿನ ದಾಳಿ ಮತ್ತು ಮಿಲಿಟರಿ ಕಾರ್ಯಾಚರಣೆಯನ್ನು ನಿಲ್ಲಿಸಲು ಒಪ್ಪಿಕೊಂಡಿವೆ ಎಂದು ಹೇಳಿದರು.

ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಜಮ್ಮು ಮತ್ತು ಕಾಶ್ಮೀರದಲ್ಲಿನ ಭಯೋತ್ಪಾದಕರ ನೆಲೆಗಳನ್ನು ನಾಶಮಾಡುವ ವಿಷಯದಲ್ಲಿ ಭಾರತವು 'ಮೇ 08 ರಂದು ಮುಖ್ಯ ಗುರಿ ಸಾಧಿಸಿದೆ' ಎಂದು ಅವರು ತಿಳಿಸಿದ್ದಾರೆ.

ಪಹಲ್ಗಾಮ್ ಭಯೋತ್ಪಾದಕ ದಾಳಿ ನಡೆದ ಏಪ್ರಿಲ್ 22 ರಿಂದ ಮೇ 10 ರ ನಡುವೆ, 'ಅಮೆರಿಕ ಸೇರಿದಂತೆ ವಿವಿಧ ಹಂತಗಳಲ್ಲಿ ವಿವಿಧ ದೇಶಗಳೊಂದಿಗೆ ಹಲವಾರು ರಾಜತಾಂತ್ರಿಕ ಸಂಭಾಷಣೆಗಳು ನಡೆದಿವೆ' ಎಂದು ಸಚಿವರು ತಮ್ಮ ಪ್ರತಿಕ್ರಿಯೆಯಲ್ಲಿ ತಿಳಿಸಿದ್ದಾರೆ.

'ಅಮೆರಿಕಕ್ಕೆ ನಿರ್ದಿಷ್ಟವಾಗಿ ಹೇಳುವುದಾದರೆ, ಪಾಕಿಸ್ತಾನ ದೊಡ್ಡ ದಾಳಿ ನಡೆಸಿದರೆ ಅದಕ್ಕೆ ಭಾರತವು 'ಸೂಕ್ತವಾಗಿ ಪ್ರತಿಕ್ರಿಯಿಸುತ್ತದೆ' ಎಂದು ಮೇ 9 ರಂದು ಅಮೆರಿಕ ಉಪಾಧ್ಯಕ್ಷ ಜೆ ಡಿ ವ್ಯಾನ್ಸ್ ಅವರಿಗೆ ತಿಳಿಸಲಾಯಿತು. ಸಂಘರ್ಷಕ್ಕೆ ಸಂಬಂಧಿಸಿದ ಸಂಭಾಷಣೆಗಳ ಸಂದರ್ಭದಲ್ಲಿ ನಮ್ಮ ವ್ಯಾಪಾರದ ವಿಷಯ ಬಂದಿಲ್ಲ' ಎಂದು ಅವರು ಸ್ಪಷ್ಟಪಡಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಜ್ಯದಲ್ಲಿ ಮಳೆ ಅಭಾವ: ನಾಲ್ಕು ಕಂದಾಯ ವಿಭಾಗಗಳಲ್ಲಿ ಮೋಡ ಬಿತ್ತನೆ; 27 ಕೋಟಿ ರೂ ವೆಚ್ಚ- ಜಲ ಸಂಪನ್ಮೂಲ ಸಚಿವ ಚಲುವರಾಯಸ್ವಾಮಿ!

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

Congress ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಜಾರಿ, ಬಂಧನ ಭೀತಿ!

ಭಾರತದಲ್ಲಿ ಫುಡ್‌ ಕಂಪನಿಗಳ ಲಾಬಿ: ಚಿಪ್ಸ್ ಮತ್ತು ಕೂಲ್ ಡ್ರಿಂಕ್ಸ್ ಮೇಲೆ ‘ರೆಡ್‌ ಅಲರ್ಟ್’ ಪ್ರಸ್ತಾವ ಕೈಬಿಟ್ಟ FSSAI, ಆಗಿದ್ದೇನು?

'ಬ್ರೋ, ನೀವು ಸುಮ್ಮನೆ ಸಮಯ ವ್ಯರ್ಥ ಮಾಡುತ್ತಿದ್ದೀರಿ': ಎರಡನೇ ಟೆಸ್ಟ್ ಪಂದ್ಯದಲ್ಲಿ ಶ್ರೀಲಂಕಾ ನಾಯಕನ ಕಾಲೆಳೆದ ಸರ್ಫರಾಜ್ ಖಾನ್!