ಕೇಂದ್ರೀಯ ವಿಶ್ವವಿದ್ಯಾಲಯ 
ದೇಶ

ಕೇಂದ್ರೀಯ ವಿದ್ಯಾಲಯ, ನವೋದಯ ವಿದ್ಯಾಲಯಗಳಲ್ಲಿ 12,000 ಕ್ಕೂ ಹೆಚ್ಚು ಬೋಧಕ ಹುದ್ದೆ ಖಾಲಿ: ಕೇಂದ್ರ ಸರ್ಕಾರ

'ಕೇಂದ್ರ ಸರ್ಕಾರ ನಡೆಸುವ ಶಾಲೆಗಳು ಎದುರಿಸುತ್ತಿರುವ ನಿರಂತರ ಸಿಬ್ಬಂದಿ ನೇಮಕಾತಿ ಸವಾಲುಗಳನ್ನು ಎತ್ತಿ ತೋರಿಸುವ ಲಿಖಿತ ಉತ್ತರದಲ್ಲಿ ಕೇಂದ್ರ ಶಿಕ್ಷಣ ರಾಜ್ಯ ಸಚಿವ ಜಯಂತ್ ಚೌಧರಿ ಈ ಡೇಟಾವನ್ನು ಹಂಚಿಕೊಂಡಿದ್ದಾರೆ.

ನವದೆಹಲಿ: ದೇಶದ ಕೇಂದ್ರೀಯ ವಿದ್ಯಾಲಯಗಳು (ಕೆವಿಗಳು) ಮತ್ತು ನವೋದಯ ವಿದ್ಯಾಲಯಗಳಲ್ಲಿ (ಎನ್‌ವಿಗಳು) 12,000 ಕ್ಕೂ ಹೆಚ್ಚು ಬೋಧಕ ಹುದ್ದೆಗಳು ಪ್ರಸ್ತುತ ಖಾಲಿ ಇವೆ ಎಂದು ಶಿಕ್ಷಣ ಸಚಿವಾಲಯ ತಿಳಿಸಿದೆ.

ಈ ಕುರಿತು ಬುಧವಾರ ರಾಜ್ಯಸಭೆಗೆ ಮಾಹಿತಿ ನೀಡಿದ ಕೇಂದ್ರ ಸರ್ಕಾರ, ಕೇಂದ್ರೀಯ ವಿದ್ಯಾಲಯಗಳು (ಕೆವಿಗಳು) ಮತ್ತು ನವೋದಯ ವಿದ್ಯಾಲಯಗಳಲ್ಲಿ (ಎನ್‌ವಿಗಳು) 12,000 ಕ್ಕೂ ಹೆಚ್ಚು ಬೋಧಕ ಹುದ್ದೆಗಳು ಪ್ರಸ್ತುತ ಖಾಲಿ ಇವೆ. ನೇಮಕಾತಿಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಹೇಳಿದೆ.

ಮೂಲಗಳ ಪ್ರಕಾರ, 'ಕೇಂದ್ರ ಸರ್ಕಾರ ನಡೆಸುವ ಶಾಲೆಗಳು ಎದುರಿಸುತ್ತಿರುವ ನಿರಂತರ ಸಿಬ್ಬಂದಿ ನೇಮಕಾತಿ ಸವಾಲುಗಳನ್ನು ಎತ್ತಿ ತೋರಿಸುವ ಲಿಖಿತ ಉತ್ತರದಲ್ಲಿ ಕೇಂದ್ರ ಶಿಕ್ಷಣ ರಾಜ್ಯ ಸಚಿವ ಜಯಂತ್ ಚೌಧರಿ ಈ ಡೇಟಾವನ್ನು ಹಂಚಿಕೊಂಡಿದ್ದಾರೆ ಎಂದು ಹೇಳಲಾಗಿದೆ.

ಒದಗಿಸಲಾದ ಅಂಕಿಅಂಶಗಳ ಪ್ರಕಾರ, ಕೇಂದ್ರೀಯ ವಿದ್ಯಾಲಯ ಸಂಘಟನ್ (ಕೆವಿಎಸ್) ನಲ್ಲಿ ಪ್ರಸ್ತುತ 7,765 ಹುದ್ದೆಗಳು ಖಾಲಿಯಾಗಿದ್ದರೆ, ನವೋದಯ ವಿದ್ಯಾಲಯ ಸಮಿತಿ (ಎನ್‌ವಿಎಸ್) ನಲ್ಲಿ 4,323 ಹುದ್ದೆಗಳು ಭರ್ತಿಯಾಗದೆ ಉಳಿದಿವೆ. ಒಟ್ಟಾರೆಯಾಗಿ, ಈ ಪ್ರಮುಖ ಶಾಲಾ ವ್ಯವಸ್ಥೆಗಳಲ್ಲಿ ಒಟ್ಟು ಖಾಲಿ ಹುದ್ದೆಗಳ ಸಂಖ್ಯೆ 12,088 ಕ್ಕೆ ತರುತ್ತದೆ ಎಂದು ಹೇಳಲಾಗಿದೆ.

ಅಂತೆಯೇ ಈ ಕೊರತೆಯನ್ನು ನೀಗಿಸಲು, ನೇಮಕಾತಿ ನಡೆಯುತ್ತಿರುವ ಪ್ರಕ್ರಿಯೆಯಾಗಿದ್ದು, ಸಂಬಂಧಿತ ನೇಮಕಾತಿ ನಿಯಮಗಳಿಗೆ ಅನುಸಾರವಾಗಿ ನಡೆಸಲಾಗುತ್ತಿದೆ. ಹೆಚ್ಚುವರಿಯಾಗಿ, ಬೋಧನೆ ಮತ್ತು ಶೈಕ್ಷಣಿಕ ಚಟುವಟಿಕೆಗಳಿಗೆ ಅಡ್ಡಿಯಾಗದಂತೆ ನೋಡಿಕೊಳ್ಳಲು, ಶಾಲೆಗಳು ತಾತ್ಕಾಲಿಕ ಆಧಾರದ ಮೇಲೆ ಗುತ್ತಿಗೆ ಶಿಕ್ಷಕರನ್ನು ನೇಮಿಸಿಕೊಳ್ಳಲು ಅವಕಾಶ ನೀಡಲಾಗಿದೆ ಎಂದು ಸಚಿವರು ಹೇಳಿದರು.

ಸಿಬ್ಬಂದಿ ಬಿಕ್ಕಟ್ಟು ಕೇವಲ ಶಾಲೆಗಳಿಗೆ ಸೀಮಿತವಾಗಿಲ್ಲ. ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿಯಲ್ಲಿ (NCERT) 143 ಶೈಕ್ಷಣಿಕ ಹುದ್ದೆಗಳು ಖಾಲಿ ಇವೆ ಎಂದು ಚೌಧರಿ ಬಹಿರಂಗಪಡಿಸಿದರು. ಇದಲ್ಲದೆ, ರಾಷ್ಟ್ರೀಯ ಶಿಕ್ಷಕರ ಶಿಕ್ಷಣ ಮಂಡಳಿಯಲ್ಲಿ (NCTE) 60 ಹುದ್ದೆಗಳು ಖಾಲಿ ಇವೆ. ಈ ಎರಡೂ ಸಂಸ್ಥೆಗಳಿಗೆ ನೇಮಕಾತಿ ಪ್ರಸ್ತುತ ಪ್ರಗತಿಯಲ್ಲಿದೆ ಎಂದು ಅವರು ಭರವಸೆ ನೀಡಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಶಾಂತಿಗಿಂತ ರಾಜಕೀಯವೇ ಹೆಚ್ಚಾಯಿತು': ನೊಬೆಲ್ ಸಮಿತಿ ವಿರುದ್ಧ ಶ್ವೇತಭವನ ಕೆಂಡಾಮಂಡಲ!

ಚಿಕ್ಕಬಳ್ಳಾಪುರ: 'Miss U Chinna' ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

Maria Corina Machado: ನೋಬೆಲ್ ಶಾಂತಿ ಪ್ರಶಸ್ತಿ ಗೆದ್ದ ಮರಿಯಾ ಕೊರಿನಾ ಮಚಾದೊ ಕುರಿತು ಆಸಕ್ತಿಕರ ಮಾಹಿತಿ ಇಲ್ಲಿದೆ!

ಶಾಸಕರ ಭವನದಲ್ಲಿ ಬಾಂಬ್ ಇಟ್ಟಿದ್ದ ಪ್ರಕರಣಕ್ಕೆ ಮರುಜೀವ?: ಗಿರೀಶ್ ಮಟ್ಟಣ್ಣವರ್ ಗೆ ಸಂಕಷ್ಟ!

'ಇದೇ ಕೊನೆ, ಇನ್ನೆಂದೂ ಕಾಂಗ್ರೆಸ್ ಅಧಿಕಾರಕ್ಕೆ ಬರಲ್ಲ.. ಕರ್ನಾಟಕ 3 ಭಾಗ, ಭಾರತ 2 ಭಾಗ'.. 'ಮೋದಿ ದೇಶದ ರಕ್ಷಾ ಕವಚ': "ಬ್ರಹ್ಮಾಂಡ" ಭವಿಷ್ಯ

SCROLL FOR NEXT