ಇಂಡಿಯಾ ಬ್ಲಾಕ್ ಮೈತ್ರಿಕೂಟದಿಂದ ಪ್ರತಿಭಟನೆ  
ದೇಶ

'SIR' ಪೋಸ್ಟರ್ ಹರಿದು INDIA bloc ನಾಯಕರ ಪ್ರತಿಭಟನೆ: ಲೋಕಸಭೆ ಮಧ್ಯಾಹ್ನ 2 ಗಂಟೆಗೆ, ರಾಜ್ಯಸಭೆ ಕಲಾಪ ದಿನದ ಮಟ್ಟಿಗೆ ಮುಂದೂಡಿಕೆ

ಸಂಸತ್ ಭವನದ ಆವರಣದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿ, ಎರಡೂ ಸದನಗಳಲ್ಲಿ ಈ ವಿಷಯದ ಬಗ್ಗೆ ಚರ್ಚೆ ನಡೆಸುವಂತೆ ಒತ್ತಾಯಿಸಿದರು.

ನವದೆಹಲಿ: ಬಿಹಾರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆಯನ್ನು ವಿರೋಧಿಸಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಪಕ್ಷದ ಮಾಜಿ ಮುಖ್ಯಸ್ಥ ರಾಹುಲ್ ಗಾಂಧಿ ಸೇರಿದಂತೆ ಇಂಡಿಯಾ ಬ್ಲಾಕ್ ಮೈತ್ರಿಕೂಟಗಳ ಹಲವು ಸಂಸದರು ಶುಕ್ರವಾರ ಸಂಸತ್ ಭವನದ ಸಂಕೀರ್ಣದಲ್ಲಿ 'ಸರ್' ಎಂದು ಬರೆದ ಪೋಸ್ಟರ್‌ಗಳನ್ನು ಹರಿದು ಕಸದ ಬುಟ್ಟಿಗೆ ಹಾಕುವ ಮೂಲಕ ವಿಶಿಷ್ಟವಾಗಿ ಪ್ರತಿಭಟನೆ ನಡೆಸಿದರು.

ಸಂಸತ್ ಭವನದ ಆವರಣದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿ, ಎರಡೂ ಸದನಗಳಲ್ಲಿ ಈ ವಿಷಯದ ಬಗ್ಗೆ ಚರ್ಚೆ ನಡೆಸುವಂತೆ ಒತ್ತಾಯಿಸಿದರು.

ಇಂದು ದಿನದ ಕಲಾಪ ಆರಂಭವಾಗುವ ಮುನ್ನ, ಕಾಂಗ್ರೆಸ್, ಡಿಎಂಕೆ, ಸಮಾಜವಾದಿ ಪಕ್ಷ, ಟಿಎಂಸಿ, ಆರ್‌ಜೆಡಿ ಮತ್ತು ಎಡಪಕ್ಷಗಳ ಸದಸ್ಯರು ಸೇರಿದಂತೆ ವಿರೋಧ ಪಕ್ಷದ ಹಲವಾರು ಸಂಸದರು 'ಸರ್- ಲೋಕತಂತ್ರ ಪರ್ ವರ್' ಎಂಬ ಬ್ಯಾನರ್‌ನೊಂದಿಗೆ ಪ್ರತಿಭಟನಾ ಮೆರವಣಿಗೆ ನಡೆಸಿದರು.

ನಂತರ ಸಂಸತ್ತಿನ ಮಕರ ದ್ವಾರದ ಮೆಟ್ಟಿಲುಗಳ ಮುಂದೆ ಒಂದು ಕಸದ ಡಬ್ಬಿಯನ್ನು ಇರಿಸಿ ಅಲ್ಲಿ ಮಲ್ಲಿಕಾರ್ಜುನ ಖರ್ಗೆ ಮತ್ತು ರಾಹುಲ್ ಗಾಂಧಿ ಸೇರಿದಂತೆ ವಿರೋಧ ಪಕ್ಷದ ನಾಯಕರು ಒಬ್ಬೊಬ್ಬರಾಗಿ SIR ಎಂದು ಬರೆದಿದ್ದ ಪೋಸ್ಟರ್ ನ್ನು ಹರಿದು ಕಸದ ಡಬ್ಬಿಯಲ್ಲಿ ಹಾಕಿದರು.

"ಪ್ರಜಾಪ್ರಭುತ್ವವನ್ನು ಉಳಿಸಿ" "ಮತ-ಬಂದಿ ನಿಲ್ಲಿಸಿ" ಎಂಬ ಘೋಷಣೆಗಳನ್ನು ಕೂಗಿದರು. ಮತದಾರರ ವಿಶೇಷ ತೀವ್ರ ಪರಿಷ್ಕರಣೆ (SIR) ವಿರುದ್ಧ ಪ್ರತಿಪಕ್ಷಗಳು ಸಂಸತ್ತಿನ ಉಭಯ ಸದನಗಳಲ್ಲಿ ಪ್ರತಿಭಟನೆ ನಡೆಸುತ್ತಿವೆ, ಚುನಾವಣಾ ಆಯೋಗದ ಈ ಕಾರ್ಯವು ಬಿಹಾರದಲ್ಲಿ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ ಮತದಾರರ ಮತದಾನದ ಹಕ್ಕನ್ನು ಕಸಿದುಕೊಳ್ಳುವ ಗುರಿಯನ್ನು ಹೊಂದಿದೆ ಎಂದು ವಿರೋಧ ಪಕ್ಷಗಳ ನಾಯಕರು ಆರೋಪಿಸಿದರು.

ಕಲಾಪ ಮುಂದೂಡಿಕೆ: ಲೋಕಸಭೆಯಲ್ಲಿ ತೀವ್ರ ಗದ್ದಲ ಏರ್ಪಟ್ಟಿದ್ದರಿಂದ ಕಲಾಪವನ್ನು ಮಧ್ಯಾಹ್ನ 2 ಗಂಟೆಗೆ ಮತ್ತು ರಾಜ್ಯಸಭೆ ಕಲಾಪವನ್ನು ದಿನದ ಮಟ್ಟಿಗೆ ಮುಂದೂಡಲಾಯಿತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಒಬ್ಬ ಅಲ್ಲ.. ಭಾರತದ ಮೇಲೆ ದಾಳಿಗೆ ಸಾವಿರಾರು ಆತ್ಮಹತ್ಯಾ ಬಾಂಬರ್‌ಗಳು ಸಿದ್ಧ': ಪಾಕ್ ಮೂಲದ ಉಗ್ರ Masood Azhar ಆಡಿಯೋ ವೈರಲ್!

Pak ಸಚಿವನಿಗೆ ಮುಖಭಂಗ: ನೆತನ್ಯಾಹು ವಿರುದ್ಧ ಮಾತಾಡ್ತಿದ್ದಂತೆ ಶೋ ನಿಲ್ಲಿಸಿ ಆಸಿಫ್‌ನನ್ನು ಹೊರಕಹಿಸಿದ ಆ್ಯಂಕರ್, Video!

'ಅಪ್ಪ-ಅಮ್ಮನ ಪ್ರಜ್ಞೆ ತಪ್ಪಿಸಿ ಕಟ್ಟಿಹಾಕಿ ಕಳ್ಳತನ': ಮನೆಗೆಲಸದವರ ಮೇಲೆ ಮಾಜಿ ಐಎಎಸ್ ಅಧಿಕಾರಿ Puja Khedkar ಆರೋಪ!

1st ODI: ಮಿಚೆಲ್ ಸ್ಫೋಟಕ ಭರ್ಜರಿ ಬ್ಯಾಟಿಂಗ್, ಭಾರತಕ್ಕೆ ಗೆಲ್ಲಲು ಬೃಹತ್ ಗುರಿ ನೀಡಿದ ಕಿವೀಸ್

ಕೇರಳದಲ್ಲಿ ಕಾನೂನು ಸುವ್ಯವಸ್ಥೆಗೆ ಬೆದರಿಕೆ: SDPI, ಜಮಾತ್, ಸಂಘಟನೆಗಳ ಪಾತ್ರ ಪ್ರಶ್ನಿಸಿದ ಅಮಿತ್ ಶಾ!

SCROLL FOR NEXT