ಒಂದು ವರ್ಷದ ಮಗು ಗೋವಿಂದಾ 
ದೇಶ

ಪವಾಡ ಸದೃಶ ಘಟನೆ: ವಿಷಪೂರಿತ ನಾಗರಹಾವನ್ನು ಕಚ್ಚಿದ ಒಂದು ವರ್ಷದ ಮಗು; ಹಾವು ಸಾವು, ಮೂರ್ಛೆ ಹೋಗಿದ್ದ ಮಗುವಿಗೆ ಏನಾಯ್ತು? Video

ಅತ್ಯಂತ ಧೈರ್ಯಶಾಲಿ ಕೂಡ ಬುಸುಗುಡುವ ವಿಷಪೂರಿತ ನಾಗರಹಾವನ್ನು ನೋಡಿ ಬೆವರಲು ಪ್ರಾರಂಭಿಸುತ್ತಾನೆ. ಆದರೆ ಬಿಹಾರದ ಬೆಟ್ಟಿಯಾದಲ್ಲಿ ವಿಚಿತ್ರ ಘಟನೆ ನಡೆದಿದೆ. ಒಂದು ವರ್ಷದ ಮಗು ವಿಷಪೂರಿತ ನಾಗರಹಾವನ್ನು ಕಚ್ಚಿದೆ.

ಅತ್ಯಂತ ಧೈರ್ಯಶಾಲಿ ಕೂಡ ಬುಸುಗುಡುವ ವಿಷಪೂರಿತ ನಾಗರಹಾವನ್ನು ನೋಡಿ ಬೆವರಲು ಪ್ರಾರಂಭಿಸುತ್ತಾನೆ. ಆದರೆ ಬಿಹಾರದ ಬೆಟ್ಟಿಯಾದಲ್ಲಿ ವಿಚಿತ್ರ ಘಟನೆ ನಡೆದಿದೆ. ಒಂದು ವರ್ಷದ ಮಗು ವಿಷಪೂರಿತ ನಾಗರಹಾವನ್ನು ಕಚ್ಚಿದೆ. ಇದರಿಂದಾಗಿ ಹಾವು ಸ್ಥಳದಲ್ಲೇ ಸಾವನ್ನಪ್ಪಿದೆ. ಇನ್ನು ಹಾವನ್ನು ಕಚ್ಚಿದ ಕೆಲವು ಗಂಟೆಗಳ ನಂತರ ಮಗು ಕೂಡ ಮೂರ್ಛೆ ಹೋಯಿತು.

ಈ ಘಟನೆ ಪಶ್ಚಿಮ ಚಂಪಾರಣ್ ಜಿಲ್ಲೆಯ ಮಜೌಲಿಯಾ ಬ್ಲಾಕ್‌ನ ಮೊಹ್ಚಿ ಬಂಕಟ್ವಾ ಗ್ರಾಮದಲ್ಲಿ ನಡೆದಿದೆ. ಮಗುವನ್ನು ಪ್ರಜ್ಞಾಹೀನ ಸ್ಥಿತಿಯಲ್ಲಿ ಮಜೌಲಿಯಾ ಪಿಎಚ್‌ಸಿಗೆ ದಾಖಲಿಸಲಾಗಿತ್ತು. ಅಲ್ಲಿ ಪ್ರಥಮ ಚಿಕಿತ್ಸೆಯ ನಂತರ, ಬೆಟ್ಟಿಯಾದಲ್ಲಿರುವ ಸರ್ಕಾರಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ (ಜಿಎಂಸಿಎಚ್) ರವಾನಿಸಲಾಗಿತ್ತು.

ಮಾಹಿತಿಯ ಪ್ರಕಾರ, ಸುನಿಲ್ ಸಾ ಅವರ ಒಂದು ವರ್ಷದ ಮಗ ಗೋವಿಂದ ನಿನ್ನೆ ಮಧ್ಯಾಹ್ನ ಅವರ ಮನೆಯಲ್ಲಿ ಆಟವಾಡುತ್ತಿದ್ದಾಗ ಎರಡು ಅಡಿ ಉದ್ದದ ನಾಗರಹಾವು ಬಂದಿತ್ತು ಎಂದು ಅಜ್ಜಿ ಮಾಟೇಶ್ವರಿ ದೇವಿ ಹೇಳಿದರು. ಅದನ್ನು ಆಟಿಕೆ ಎಂದು ಭಾವಿಸಿ ಮಗು ಹಾವನ್ನು ಹಿಡಿದುಕೊಂಡು ತನ್ನ ಹಲ್ಲುಗಳಿಂದ ಕಚ್ಚಿದೆ. ಇದಾದ ಕೂಡಲೇ ನಾಗರಹಾವು ಸತ್ತುಹೋಯಿತು. ಮಗುವು ಹಾವನ್ನು ಕಚ್ಚಿ ಎರಡು ತುಂಡುಗಳಾಗಿತ್ತು ಎಂದು ಹೇಳಲಾಗುತ್ತಿದೆ.

ಬೆಟ್ಟಯ್ಯದ ಜಿಎಂಸಿಎಚ್ ಆಸ್ಪತ್ರೆಯ ಉಪ ಅಧೀಕ್ಷಕ ಡಾ. ದಿವಾಕಾಂತ್ ಮಿಶ್ರಾ, ಮಗುವಿಗೆ ವಿಷಪ್ರಾಶನದ ಯಾವುದೇ ಲಕ್ಷಣಗಳಿಲ್ಲ ಎಂದು ಹೇಳಿದರು. ಪ್ರಸ್ತುತ ಚಿಕಿತ್ಸೆ ನಡೆಯುತ್ತಿದೆ. ಮಗು ಪ್ರಾಣಾಪಾಯದಿಂದ ಪಾರಾಗಿದೆ ಎಂದು ಹೇಳಿದ್ದಾರೆ. ಈ ಘಟನೆಯ ನಂತರ, ಕುಟುಂಬವು ಭಯಭೀತಗೊಂಡಿದೆ. ಅದೇ ಸಮಯದಲ್ಲಿ, ಮಗುವಿನ ಕಡಿತದಿಂದ ಹಾವು ಸಾವನ್ನಪ್ಪಿದ ಬಗ್ಗೆ ಜನರು ಆಶ್ಚರ್ಯ ವ್ಯಕ್ತಪಡಿಸುತ್ತಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಧರ್ಮಸ್ಥಳ ಬುರುಡೆ ಪ್ರಕರಣ: ಸಾಕ್ಷಿ-ದೂರುದಾರ ಚಿನ್ನಯ್ಯನಿಗೆ ಜಾಮೀನು ಮಂಜೂರು

KSCA ಅಧ್ಯಕ್ಷರಾಗಿ ಕನ್ನಡಿಗ ವೆಂಕಟೇಶ್ ಪ್ರಸಾದ್ ಅವಿರೋಧ ಆಯ್ಕೆ!

12 ಸಾವಿರ ವರ್ಷಗಳಲ್ಲೇ ಮೊದಲು: ಹೈಲಿ ಗುಬ್ಬಿ ಜ್ವಾಲಾಮುಖಿ ಸ್ಫೋಟ; ಭಾರತ ಸೇರಿ ಹಲವು ದೇಶಗಳ ವಿಮಾನಗಳ ಮಾರ್ಗ ಬದಲಾವಣೆ!

"ಧರ್ಮ ಗ್ರಂಥಗಳಲ್ಲಿ ಧ್ವಜಾರೋಹಣದ ಉಲ್ಲೇಖ ಇಲ್ಲ": ರಾಮ ಮಂದಿರದಲ್ಲಿ ಕೇಸರಿ ಧ್ವಜಾರೋಹಣಕ್ಕೆ ಅವಿಮುಕ್ತೇಶ್ವರಾನಂದ ಸರಸ್ವತಿ ಮತ್ತೆ ತಗಾದೆ!

ಕಾಂಗ್ರೆಸ್‌ನಲ್ಲಿ ಅವರ ಶಾಸಕರನ್ನ ಅವರೇ ಖರೀದಿ ಮಾಡುತ್ತಿದ್ದಾರೆ; ಒಬ್ಬರಿಗೆ 100 ಕೋಟಿ ರೂ ಆಫರ್‌; ಕಾರು, ಫ್ಲ್ಯಾಟು ಗಿಫ್ಟು!

SCROLL FOR NEXT