ಜಾರ್ಖಂಡ್ ನಕ್ಸಲ್ ಎನ್ಕೌಂಟರ್ 
ದೇಶ

Jharkhand: 3 ನಕ್ಸಲರ ಹೊಡೆದುರುಳಿಸಿದ ಭದ್ರತಾ ಪಡೆಗಳು!

ಸಿಪಿಐ-ಮಾವೋವಾದಿಗಳ ವಿಭಜಿತ ಗುಂಪಾದ ಜಾರ್ಖಂಡ್ ಜನ ಮುಕ್ತಿ ಪರಿಷತ್ (ಜೆಜೆಎಂಪಿ) ಸದಸ್ಯರು ಘಾಗ್ರಾ ಅರಣ್ಯದಲ್ಲಿ ಒಟ್ಟುಗೂಡಿದ್ದು, ಭದ್ರತಾ ಪಡೆಗಳ ಮೇಲೆ ದಾಳಿ ನಡೆಸಲು ಯೋಜಿಸುತ್ತಿದ್ದರು.

ರಾಂಚಿ: ಜಾರ್ಖಂಡ್‌ನಲ್ಲಿ ಶನಿವಾರ ಮುಂಜಾನೆ ನಡೆದ ಭದ್ರತಾ ಪಡೆಗಳೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ 3 ನಕ್ಸಲರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಜಾರ್ಖಂಡ್‌ನ ಗುಮ್ಲಾ ಜಿಲ್ಲೆಯಲ್ಲಿ ಶನಿವಾರ ಬೆಳಿಗ್ಗೆ ಭದ್ರತಾ ಪಡೆಗಳೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ನಕ್ಸಲರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಸಿಪಿಐ-ಮಾವೋವಾದಿಗಳ ವಿಭಜಿತ ಗುಂಪಾದ ಜಾರ್ಖಂಡ್ ಜನ ಮುಕ್ತಿ ಪರಿಷತ್ (ಜೆಜೆಎಂಪಿ) ಸದಸ್ಯರು ಘಾಗ್ರಾ ಅರಣ್ಯದಲ್ಲಿ ಒಟ್ಟುಗೂಡಿದ್ದು, ಭದ್ರತಾ ಪಡೆಗಳ ಮೇಲೆ ದಾಳಿ ನಡೆಸಲು ಯೋಜಿಸುತ್ತಿದ್ದರು. ಈ ವೇಳೆ ಇದರ ಮಾಹಿತಿ ಪಡೆದ ಭದ್ರತಾ ಪಡೆಗಳು ಗುಪ್ತಚರ ಮಾಹಿತಿಯನ್ನಾಧರಿಸಿ ದಿಢೀರ್ ದಾಳಿ ನಡೆಸಿವೆ.

ಸುಳಿವಿನ ಮೇರೆಗೆ ಜಾರ್ಖಂಡ್ ಜಾಗ್ವಾರ್ ಮತ್ತು ಗುಮ್ಲಾ ಪೊಲೀಸರು ಜಂಟಿಯಾಗಿ ಕಾರ್ಯಾಚರಣೆ ನಡೆಸಿದರು. ಎರಡೂ ಕಡೆಯಿಂದ ಹಲವಾರು ಸುತ್ತಿನ ಗುಂಡುಗಳನ್ನು ಹಾರಿಸಲಾಗಿದೆ. ಈ ವೇಳೆ ಮೂವರು ನಕ್ಸಲರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಗುಂಡಿನ ದಾಳಿ ನಿಂತ ನಂತರ ಸ್ಥಳದಿಂದ ಒಂದು ಎಕೆ -47 ಮತ್ತು ಎರಡು ಐಎನ್‌ಎಸ್‌ಎಎಸ್ ರೈಫಲ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ಕಾರ್ಯಾಚರಣೆ ಇನ್ನೂ ಮುಂದುವರೆದಿದೆ ಎಂದು ಜಾರ್ಖಂಡ್ ಪೊಲೀಸರ ಐಜಿ (ಕಾರ್ಯಾಚರಣೆ) ಮೈಕೆಲ್ ಎಸ್ ರಾಜ್ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆ: ವಯೋಮಿತಿ 5 ವರ್ಷ ಸಡಿಲಿಕೆ; ಸಮಸ್ಯೆಗೆ ಬಿಜೆಪಿಯೇ ಕಾರಣ ಎಂದ CM

Ranji Trophy final: ಮೊದಲ ದಿನ ಬಲಿಷ್ಠ ಕರ್ನಾಟಕ ವಿರುದ್ಧ ಪ್ರಾಬಲ್ಯ ಸಾಧಿಸಿದ ಜಮ್ಮು ಕಾಶ್ಮೀರ!

ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ: ಮ್ಯೂಸಿಕ್ ಮೈಲಾರಿಗೆ ಬಿಗ್ ರಿಲೀಫ್; ಜಾಮೀನು ಮಂಜೂರು

AIADMKಯಿಂದ ಮತ್ತಷ್ಟು ಫ್ರೀಬೀಸ್ ಘೋಷಣೆ; ಪ್ರತಿ ಕುಟುಂಬಕ್ಕೆ 10,000 ರೂ. ನೆರವು!

ಶಿವಮೊಗ್ಗದಲ್ಲಿ ಶಾಲಾ ಬಾಲಕನ ಹತ್ಯೆ, 7 ಅಪ್ರಾಪ್ತರ ಬಂಧನ; 15 ಲಕ್ಷ ರೂ ಪರಿಹಾರ ಘೋಷಣೆ

SCROLL FOR NEXT