ಆ್ಯಂಬುಲೆನ್ಸ್ ಫೋಟೋ 
ದೇಶ

ತವರು ಮನೆಗೆ ಹೋದ ಪತ್ನಿ: ಮಗ, ಮಗಳು, ತಾಯಿ ಜೊತೆ ಸಲ್ಫಾ ಮಾತ್ರೆ ಸೇವಿಸಿ ವ್ಯಕ್ತಿ ಆತ್ಮಹತ್ಯೆ!

ತೆಹಾರ್ ಗ್ರಾಮದಲ್ಲಿ ಒಂದೇ ಕುಟುಂಬದ ನಾಲ್ವರು ಸದಸ್ಯರು ಒಟ್ಟಿಗೆ ಸಲ್ಫಾ ಮಾತ್ರೆ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮಧ್ಯಪ್ರದೇಶದ ಸಾಗರ್ ಜಿಲ್ಲೆಯಲ್ಲಿ ಹೃದಯ ವಿದ್ರಾವಕ ಘಟನೆ ನಡೆದಿದ್ದು, ಇದು ಇಡೀ ಪ್ರದೇಶವನ್ನು ಬೆಚ್ಚಿಬೀಳಿಸಿದೆ. ಇಲ್ಲಿ ತೆಹಾರ್ ಗ್ರಾಮದಲ್ಲಿ, ಒಂದೇ ಕುಟುಂಬದ ನಾಲ್ವರು ಸದಸ್ಯರು ಒಟ್ಟಿಗೆ ಸಲ್ಫಾ ಮಾತ್ರೆ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತರಲ್ಲಿ ತಂದೆ, ಮಗ-ಮಗಳು ಮತ್ತು 70 ವರ್ಷದ ಅಜ್ಜಿ ಸೇರಿದ್ದಾರೆ. ಕೆಲವು ದಿನಗಳ ಹಿಂದೆ ಮನೆಯ ಯಜಮಾನ್ತಿ ತಮ್ಮ ತಾಯಿಯ ಮನೆಗೆ ಹೋಗಿದ್ದಾಗ ಈ ಘಟನೆ ನಡೆದಿದೆ.

ಏಜೆನ್ಸಿಯ ಪ್ರಕಾರ, ಶನಿವಾರ ಮುಂಜಾನೆ ತೆಹಾರ್ ಗ್ರಾಮದಲ್ಲಿ 45 ವರ್ಷದ ಮನೋಹರ್ ಲೋಧಿ, ಅವರ ಮಗಳು 18 ವರ್ಷದ ಶಿವಾನಿ, 16 ವರ್ಷದ ಮಗ ಅಂಕಿತ್ ಮತ್ತು 70 ವರ್ಷದ ಫೂಲ್ರಾಣಿ ಲೋಧಿ ಸಲ್ಫಾ ಮಾತ್ರೆಗಳನ್ನು ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೊದಲನೆಯದಾಗಿ, 70 ವರ್ಷದ ಫೂಲ್ರಾಣಿ ಲೋಧಿ ಮತ್ತು 16 ವರ್ಷದ ಅಂಕಿತ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಆಸ್ಪತ್ರೆಗೆ ದಾಖಲಾಗಿದ್ದ ಮಗಳು ಶಿವಾನಿ ಚಿಕಿತ್ಸೆಯ ಸಮಯದಲ್ಲಿ ಸಾವನ್ನಪ್ಪಿದ್ದರೆ ತಂದೆ ಮನೋಹರ್ ಅವರನ್ನು ಸಾಗರ್ ಜಿಲ್ಲಾ ಆಸ್ಪತ್ರೆಗೆ ಕರೆದೊಯ್ಯವಾಗ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ.

ಮನೋಹರ್ ಲೋಧಿ ಅವರ ಪತ್ನಿ ಕೆಲವು ದಿನಗಳ ಹಿಂದೆ ತಮ್ಮ ತಾಯಿಯ ಮನೆಗೆ ಹೋಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಏತನ್ಮಧ್ಯೆ, ಶುಕ್ರವಾರ ತಡರಾತ್ರಿ ಮನೆಯಲ್ಲಿ ಈ ಭಯಾನಕ ಹೆಜ್ಜೆ ಇಡಲಾಗಿದೆ. ಆತ್ಮಹತ್ಯೆಗೆ ಕಾರಣ ಇನ್ನೂ ಸ್ಪಷ್ಟವಾಗಿಲ್ಲ, ಆದರೆ ಕೌಟುಂಬಿಕ ಉದ್ವಿಗ್ನತೆ ಮತ್ತು ಖಿನ್ನತೆಯನ್ನು ಶಂಕಿಸಲಾಗಿದೆ.

ಮನೋಹರ್ ಅವರ ಕಿರಿಯ ಸಹೋದರ ನಂದ್ರಾಮ್ ಸಿಂಗ್ ಲೋಧಿ ಅವರು ತಡರಾತ್ರಿ 3 ಗಂಟೆ ಸುಮಾರಿಗೆ ಜೋರಾದ ಶಬ್ಧ ಕೇಳಿಸಿತು. ಆಗ ಎದ್ದು ನೋಡಿದಾಗ ಮನೋಹರ್ ವಾಂತಿ ಮಾಡುತ್ತಿರುವುದನ್ನು ಕಂಡಿದ್ದಾರೆ. ಅವರು ಸ್ಥಳಕ್ಕೆ ಧಾವಿಸಿ ನೆರೆಹೊರೆಯವರಿಗೆ ಕರೆ ಮಾಡಿ ಆಂಬ್ಯುಲೆನ್ಸ್‌ಗೆ ಕರೆ ಮಾಡಿದರು. ಆ ಹೊತ್ತಿಗೆ ತಾಯಿ ಫೂಲ್ರಾನಿ ಮತ್ತು ಸೋದರಳಿಯ ಅಂಕಿತ್ ಸಾವನ್ನಪ್ಪಿದ್ದರು.

ಖುರೈ ಸಿವಿಲ್ ಆಸ್ಪತ್ರೆಯ ಡಾ. ವರ್ಷಾ ಕೇಶರ್ವಾನಿ ಅವರು ನಾಲ್ವರೂ ಸಲ್ಫಾ ಮಾತ್ರೆಗಳನ್ನು ಸೇವಿಸಿದ್ದಾರೆ ಎಂದು ಹೇಳಿದರು. ಆತ್ಮಹತ್ಯೆಗೆ ಕಾರಣಗಳನ್ನು ತನಿಖೆ ನಡೆಸಲಾಗುತ್ತಿದೆ ಎಂದು ಖುರೈ ನಗರ ಪೊಲೀಸ್ ಠಾಣೆಯ ಉಸ್ತುವಾರಿ ಯೋಗೇಂದ್ರ ಸಿಂಗ್ ಡಾಂಗಿ ತಿಳಿಸಿದ್ದಾರೆ. ಸ್ಥಳದಿಂದ ಯಾವುದೇ ಆತ್ಮಹತ್ಯೆ ಪತ್ರ ಪತ್ತೆಯಾಗಿಲ್ಲ. ಆತ್ಮಹತ್ಯೆಗೆ ಕಾರಣ ತಿಳಿಯಲು ಪೊಲೀಸರು ಮೃತರ ಸಂಬಂಧಿಕರು ಮತ್ತು ಗ್ರಾಮಸ್ಥರನ್ನು ವಿಚಾರಣೆ ನಡೆಸುತ್ತಿದ್ದಾರೆ.

ಒಮ್ಮೆಲೇ ನಾಲ್ವರು ಸಾವನ್ನಪ್ಪಿದ್ದರಿಂದ ತೆಹಾರ್ ಗ್ರಾಮದಲ್ಲಿ ಶೋಕ ಮಡುಗಟ್ಟಿದೆ. ನೆರೆಹೊರೆಯವರು ಮತ್ತು ಸಂಬಂಧಿಕರು ಆಘಾತಕ್ಕೊಳಗಾಗಿದ್ದಾರೆ. ಮನೋಹರ್ ಸರಳ ವ್ಯಕ್ತಿಯಾಗಿದ್ದು, ಮಕ್ಕಳ ಶಿಕ್ಷಣದತ್ತ ಗಮನ ಹರಿಸುತ್ತಿದ್ದರು ಎಂದು ಗ್ರಾಮಸ್ಥರು ಹೇಳುತ್ತಾರೆ. ಅವರು ಆತ್ಮಹತ್ಯೆಯಂತಹ ಹೆಜ್ಜೆ ಇಟ್ಟಿದ್ದಕ್ಕೆ ಕಾರಣ ಯಾರಿಗೂ ಅರ್ಥವಾಗುತ್ತಿಲ್ಲ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಭಯೋತ್ಪಾದನೆಯನ್ನು ಯಾವುದೂ ಸಮರ್ಥಿಸಲು ಸಾಧ್ಯವಿಲ್ಲ, ಭಾರತ ಇಸ್ರೇಲ್ ಜೊತೆ ದೃಢವಾಗಿ ನಿಲ್ಲುತ್ತದೆ': ನೆಸ್ಸೆಟ್‌ನಲ್ಲಿ ಪ್ರಧಾನಿ ಮೋದಿ ಭಾಷಣ

'ನ್ಯಾಯಾಂಗದಲ್ಲಿ ಭ್ರಷ್ಟಾಚಾರ' ಪಾಠ: ಸುಪ್ರೀಂ ಕೋರ್ಟ್ ಚಾಟಿ ನಂತರ ವೆಬ್‌ಸೈಟ್‌ನಿಂದ ಪಠ್ಯಪುಸ್ತಕ ತೆಗೆದ NCERT

T20 World Cup 2026: ಶ್ರೀಲಂಕಾ ವಿರುದ್ಧ ನ್ಯೂಜಿಲ್ಯಾಂಡ್ ​ಗೆ 61 ರನ್ ಭರ್ಜರಿ ಗೆಲುವು

India to Israel: ಪ್ರಧಾನಿ ಮೋದಿ ಪಯಣಿಸಿದ Air India ವಿಮಾನ ವಿಶ್ವದಲ್ಲೇ ಅತಿ ಹೆಚ್ಚು ಟ್ರ್ಯಾಕ್: Flightradar24

Ranji Trophy final: ಕರ್ನಾಟಕ ವಿರುದ್ಧ ಜಮ್ಮು ಮತ್ತು ಕಾಶ್ಮೀರ ಬೃಹತ್ ಮೊತ್ತ; 527/6

SCROLL FOR NEXT