ಶಾಂತಾ ರಾವ್ ಮತ್ತು ಚಕ್ರಧರ್ ರಾವ್ 
ದೇಶ

ಆಂಧ್ರಪ್ರದೇಶ: ರಸ್ತೆ ಅಪಘಾತದಲ್ಲಿ ಇಬ್ಬರು DYSp ಗಳು ಸಾವು; ಇಬ್ಬರು ಅಧಿಕಾರಿಗಳಿಗೆ ಗಾಯ

ಹೈದರಾಬಾದ್ ಬಳಿಯ ಚೌಟುಪ್ಪಲ್‌ನಲ್ಲಿ ಚಾಲಕ ಹಠಾತ್ ಬ್ರೇಕ್ ಹಾಕಿದಾಗ, ಮುಂದೆ ಹೋಗುತ್ತಿದ್ದ ವಾಹನಕ್ಕೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಪ್ರಯತ್ನಿಸುವಾಗ ಕಾರು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದಿದೆ.

ಹೈದರಾಬಾದ್ : ಶನಿವಾರ ಸಂಭವಿಸಿದ ಅಪಘಾತದಲ್ಲಿ ಆಂಧ್ರಪ್ರದೇಶ ಪೊಲೀಸ್ ಇಲಾಖೆಯ ಡಿಎಸ್‌ಪಿಗಳು ಸಾವನ್ನಪ್ಪಿದ್ದು, ಹಿರಿಯ ಪೊಲೀಸ್ ಅಧಿಕಾರಿ ಸೇರಿದಂತೆ ಇಬ್ಬರು ಗಾಯಗೊಂಡಿದ್ದಾರೆ.

ಪೊಲೀಸ್ ಅಧಿಕಾರಿಗಳು ಅಧಿಕೃತ ಕೆಲಸದ ನಿಮಿತ್ತ ವಿಜಯವಾಡದಿಂದ ಹೈದರಾಬಾದ್‌ಗೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ಹೈದರಾಬಾದ್ ಬಳಿಯ ಚೌಟುಪ್ಪಲ್‌ನಲ್ಲಿ ಚಾಲಕ ಹಠಾತ್ ಬ್ರೇಕ್ ಹಾಕಿದಾಗ, ಮುಂದೆ ಹೋಗುತ್ತಿದ್ದ ವಾಹನಕ್ಕೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಪ್ರಯತ್ನಿಸುವಾಗ ಕಾರು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದಿದೆ.

ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದ ನಂತರ, ಕಾರು ರಸ್ತೆಯ ಇನ್ನೊಂದು ಬದಿಗೆ ಬಿದ್ದು, ಎದುರಿನಿಂದ ಬರುತ್ತಿದ್ದ ವಾಹನಕ್ಕೆ ಡಿಕ್ಕಿ ಹೊಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಆಂಧ್ರಪ್ರದೇಶ ಪೊಲೀಸರ ಗುಪ್ತಚರ ಭದ್ರತಾ ವಿಭಾಗದಲ್ಲಿ ಕೆಲಸ ಮಾಡುವ ಇಬ್ಬರು ಪೊಲೀಸ್ ಉಪ ವರಿಷ್ಠಾಧಿಕಾರಿಗಳು (ಡಿಎಸ್‌ಪಿಗಳು) ಅಪಘಾತದಲ್ಲಿ ಸಾವನ್ನಪ್ಪಿದರು, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಮತ್ತು ವಾಹನ ಚಾಲಕ ಗಾಯಗೊಂಡಿದ್ದಾರೆ. ಗಾಯಗೊಂಡವರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ