ದೇವ್‌ಹಾರನ್ ಜಲಪಾತ  Deojharan waterfall
ದೇಶ

ಒಡಿಶಾ: ದೇವ್‌ಹಾರನ್ ಜಲಪಾತದಲ್ಲಿ ಮುಳುಗಿ ಇಬ್ಬರು MMBS ವಿದ್ಯಾರ್ಥಿಗಳು ಸಾವು

ಮೃತರನ್ನು ರಾಜಸ್ಥಾನ ಮೂಲದ ಮೋನಿಕಾ ಮೀನಾ ಮತ್ತು ದೆಹಲಿಯ ಸಂದೀಪ್ ಪುರಿ ಎಂದು ಗುರುತಿಸಲಾಗಿದೆ.

ಸಂಬಲ್ಪುರ: ಒಡಿಶಾದ ಬುರ್ಲಾದ ವೀರ್ ಸುರೇಂದ್ರ ಸಾಯಿ ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ(ವಿಮ್ಸಾರ್) ಅಂತಿಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿಗಳಿಬ್ಬರು ಶನಿವಾರ ಸಂಬಲ್ಪುರ ಜಿಲ್ಲೆಯ ಜುಜೋಮುರಾ ಪ್ರದೇಶದ ದೇವ್‌ಹಾರನ್ ಜಲಪಾತದಲ್ಲಿ ಸ್ನಾನ ಮಾಡುವಾಗ ಮುಳುಗಿ ಸಾವನ್ನಪ್ಪಿದ ಘಟನೆ ನಡೆದಿದೆ.

ಮೃತರನ್ನು ರಾಜಸ್ಥಾನ ಮೂಲದ ಮೋನಿಕಾ ಮೀನಾ ಮತ್ತು ದೆಹಲಿಯ ಸಂದೀಪ್ ಪುರಿ ಎಂದು ಗುರುತಿಸಲಾಗಿದೆ.

ಜುಜೋಮುರಾ ಐಐಸಿ ಸಂಜಯ್ ರೌತ್ ಅವರ ಪ್ರಕಾರ, ಆರು ವಿದ್ಯಾರ್ಥಿಗಳ ಗುಂಪು ಜನಪ್ರಿಯ ಜಲಪಾತ ಸ್ಥಳಕ್ಕೆ ವಿಹಾರಕ್ಕೆ ಹೋಗಿತ್ತು. ಅವರು ಸ್ನಾನ ಮಾಡುತ್ತಿದ್ದಾಗ, ಹಠಾತ್ ಮಳೆಯಿಂದಾಗಿ ಹೊಳೆಯ ನೀರಿನ ಮಟ್ಟ ತೀವ್ರವಾಗಿ ಹೆಚ್ಚಾಗಿ ಇಬ್ಬರು ವಿದ್ಯಾರ್ಥಿಗಳು ಕೊಚ್ಚಿ ಹೋಗಿದ್ದರು.

ಸ್ಥಳೀಯ ಪ್ರವಾಸಿಗರು ಮತ್ತು ಉಳಿದ ವಿದ್ಯಾರ್ಥಿಗಳು ತಕ್ಷಣ ಅಗ್ನಿಶಾಮಕ ದಳದ ಸಿಬ್ಬಂದಿ ಮತ್ತು ಪೊಲೀಸರಿಗೆ ಮಾಹಿತಿ ನೀಡಿದರು. ರಕ್ಷಣಾ ತಂಡಗಳು ಸ್ಥಳಕ್ಕೆ ಆಗಮಿಸಿ ಇಬ್ಬರನ್ನು ನೀರಿನಿಂದ ಹೊರತೆಗೆದಿವೆ. ಆದರೆ ಅವರನ್ನು ಸ್ಥಳೀಯ ಆಸ್ಪತ್ರೆಗೆ ತಲುಪುವಷ್ಟರಲ್ಲಿ ಇಬ್ಬರೂ ಮೃತಪಟ್ಟಿದ್ದಾರೆ ಎಂದು ವೈದ್ಯರು ಘೋಷಿಸಿದ್ದಾರೆ.

ಬಂಡೆಗೆ ಡಿಕ್ಕಿ ಹೊಡೆದು ಮೋನಿಕಾ ತಲೆಗೆ ಗಾಯವಾಗಿದ್ದು, ರಕ್ತಸ್ರಾವವಾಗುತ್ತಿರುವುದು ಕಂಡುಬಂದಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಈ ಸಂಬಂಧ ಪೊಲೀಸರು ಅಸಹಜ ಸಾವು ಪ್ರಕರಣ ದಾಖಲಿಸಿಕೊಂಡಿದ್ದು, ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

'China isn't afraid': ಅಮೆರಿಕದ ಶೇ.100 ರಷ್ಟು ಸುಂಕದ ಬಗ್ಗೆ ಚೀನಿಯರ ಪ್ರತಿಕ್ರಿಯೆ!

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

SCROLL FOR NEXT