ಆಯುಷ್ ಮಾಳವೀಯ 
ದೇಶ

ತಾಲಿಬಾನ್ ಶಿಕ್ಷೆ: ಗೆಳತಿಯ ಭೇಟಿ ವೇಳೆ ಸಿಕ್ಕಿಬಿದ್ದ ಅಪ್ರಾಪ್ತ ಬಾಲಕನ ತಲೆ ಬೋಳಿಸಿ, ಹೊಡೆದು ಕೊಂದ ದುಷ್ಕರ್ಮಿಗಳು!

ಮಧ್ಯಪ್ರದೇಶದ ರತ್ಲಂ ಜಿಲ್ಲೆಯಲ್ಲಿ 17 ವರ್ಷದ ಅಪ್ರಾಪ್ತ ಬಾಲಕನನ್ನು ಹೊಡೆದು ಸಾಯಿಸಲಾಗಿದೆ. ಅಪ್ರಾಪ್ತ ಬಾಲಕ ತನ್ನ ಗೆಳತಿಯನ್ನು ಭೇಟಿಯಾಗಲು ಹೋಗಿದ್ದನು.

ಮಧ್ಯಪ್ರದೇಶದ ರತ್ಲಂ ಜಿಲ್ಲೆಯಲ್ಲಿ 17 ವರ್ಷದ ಅಪ್ರಾಪ್ತ ಬಾಲಕನನ್ನು ಹೊಡೆದು ಸಾಯಿಸಲಾಗಿದೆ. ಅಪ್ರಾಪ್ತ ಬಾಲಕ ತನ್ನ ಗೆಳತಿಯನ್ನು ಭೇಟಿಯಾಗಲು ಆಕೆಯ ಗ್ರಾಮಕ್ಕೆ ಬಂದಿದ್ದ ಎಂದು ಹೇಳಲಾಗುತ್ತಿದೆ. ಕೊಲೆಗೂ ಮುನ್ನ ಆರೋಪಿಗಳು ಅಪ್ರಾಪ್ತ ಪ್ರೇಮಿಗೆ ತಾಲಿಬಾನ್ ಶಿಕ್ಷೆ ನೀಡಿ, ಮರಕ್ಕೆ ಕಟ್ಟಿ, ತಲೆ ಬೋಳಿಸಿ ತೀವ್ರವಾಗಿ ಥಳಿಸಿದ್ದರಿಂದ ಆತ ಸಾವನ್ನಪ್ಪಿದ್ದಾನೆ. ಶನಿವಾರ ಬೆಳಿಗ್ಗೆ 6 ಗಂಟೆಗೆ ಪೊಲೀಸರು ಬಾಲಕ ಕುಟುಂಬಕ್ಕೆ ಮಾಹಿತಿ ನೀಡಿದ್ದಾರೆ. ಪ್ರಕರಣದಲ್ಲಿ, ಪೊಲೀಸರು ಹುಡುಗಿಯ ತಂದೆ ಸೇರಿದಂತೆ ನಾಲ್ವರ ವಿರುದ್ಧ ಕೊಲೆ ಪ್ರಕರಣ ದಾಖಲಿಸಿ ಎಲ್ಲಾ ಆರೋಪಿಗಳನ್ನು ಬಂಧಿಸಿದ್ದಾರೆ. ಪೊಲೀಸರು ಪ್ರಸ್ತುತ ಮರಣೋತ್ತರ ವರದಿಗಾಗಿ ಕಾಯುತ್ತಿದ್ದಾರೆ.

ರತ್ಲಂ ಜಿಲ್ಲೆಯ ನಮ್ಲಿ ಪೊಲೀಸ್ ಠಾಣೆ ಪ್ರದೇಶದಲ್ಲಿ ಶುಕ್ರವಾರ ತಡರಾತ್ರಿ ಕಂಡ್ರವಸ ಗ್ರಾಮದ ನಿವಾಸಿ ಆಯುಷ್ ಮಾಳವೀಯನನ್ನು ಹತ್ಯೆ ಮಾಡಿದ್ದಾರೆ. 12ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ಆಯುಷ್ ತಂದೆ ಸಮರ್ಥ ಮಾಳವೀಯ ಹಳ್ಳಿಯಿಂದ ಹಳ್ಳಿಗೆ ಹೋಗಿ ಒಣ ಮಸಾಲೆ ಪದಾರ್ಥಗಳನ್ನು ಮಾರಾಟ ಮಾಡುತ್ತಾರೆ. ತಾಯಿಯ ಹೆಸರು ಭುಲಿ ಬಾಯಿ ಮತ್ತು ಅಣ್ಣ ಅನಿಲ್ ದಲೋಡಾದ ಮೈಕ್ರೋ ಫೈನಾನ್ಸ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಾರೆ.

ಶುಕ್ರವಾರ ರಾತ್ರಿ ಸುಮಾರು 2:30 ರ ಸುಮಾರಿಗೆ ನಾಮ್ಲಿ ಪೊಲೀಸರಿಗೆ ಘಟನೆಯ ಮಾಹಿತಿ ಸಿಕ್ಕಿತು. ಮಾಹಿತಿ ಪಡೆದ ನಂತರ, SDOP ಗ್ರಾಮೀಣ ಕಿಶೋರ್ ಪಟನ್ವಾಲಾ ಸ್ಥಳಕ್ಕೆ ತಲುಪಿದ್ದು ಅಪ್ರಾಪ್ತ ಬಾಲಕನ ಶವವನ್ನು ಮರಣೋತ್ತರ ಪರೀಕ್ಷೆಗಾಗಿ ರತ್ಲಂ ವೈದ್ಯಕೀಯ ಕಾಲೇಜಿಗೆ ಕಳುಹಿಸಿದರು. ಶನಿವಾರ ಬೆಳಿಗ್ಗೆ ಆತನ ಮರಣೋತ್ತರ ಪರೀಕ್ಷೆ ನಡೆಸಿ ಶವವನ್ನು ಕುಟುಂಬಕ್ಕೆ ಹಸ್ತಾಂತರಿಸಲಾಯಿತು. ಈ ಘಟನೆ ನಂತರ ಹುಡುಗಿಯ ಪೋಷಕರ ಮೃಗೀಯ ವರ್ತನೆ ವಿರುದ್ಧ ಪ್ರತಿಭಟನೆ ನಡೆಸಿದ್ದು ಮೃತನ ಕುಟುಂಬಕ್ಕೆ 1 ಕೋಟಿ ಪರಿಹಾರವನ್ನು ನೀಡಬೇಕೆಂದು ಒತ್ತಾಯಿಸಿದರು. ಅಧಿಕಾರಿಗಳ ಭರವಸೆಯ ನಂತರ, ಅವರು ಪ್ರತಿಭಟನೆಯನ್ನು ಕೊನೆಗೊಳಿಸಿದರು.

ಘಟನೆಯ ಪ್ರತಿಯೊಂದು ಅಂಶವನ್ನು ತನಿಖೆ ಮಾಡಲಾಗುತ್ತಿದೆ ಎಂದು ರತ್ಲಂ ಗ್ರಾಮೀಣ ಎಸ್‌ಡಿಒಪಿ ಕಿಶೋರ್ ಪಟನ್‌ವಾಲಾ ತಿಳಿಸಿದ್ದಾರೆ. ಮೃತರ ತಂದೆಯ ವರದಿಯ ಆಧಾರದ ಮೇಲೆ ಕೊಲೆ ಪ್ರಕರಣ ದಾಖಲಿಸಲಾಗುತ್ತಿದೆ. ಪ್ರಸ್ತುತ, ನಾಲ್ವರನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸಲಾಗುತ್ತಿದೆ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಭಯೋತ್ಪಾದನೆಯನ್ನು ಯಾವುದೂ ಸಮರ್ಥಿಸಲು ಸಾಧ್ಯವಿಲ್ಲ, ಭಾರತ ಇಸ್ರೇಲ್ ಜೊತೆ ದೃಢವಾಗಿ ನಿಲ್ಲುತ್ತದೆ': ನೆಸ್ಸೆಟ್‌ನಲ್ಲಿ ಪ್ರಧಾನಿ ಮೋದಿ ಭಾಷಣ

'ನ್ಯಾಯಾಂಗದಲ್ಲಿ ಭ್ರಷ್ಟಾಚಾರ' ಪಾಠ: ಸುಪ್ರೀಂ ಕೋರ್ಟ್ ಚಾಟಿ ನಂತರ ವೆಬ್‌ಸೈಟ್‌ನಿಂದ ಪಠ್ಯಪುಸ್ತಕ ತೆಗೆದ NCERT

T20 World Cup 2026: ಶ್ರೀಲಂಕಾ ವಿರುದ್ಧ ನ್ಯೂಜಿಲ್ಯಾಂಡ್ ​ಗೆ 61 ರನ್ ಭರ್ಜರಿ ಗೆಲುವು

India to Israel: ಪ್ರಧಾನಿ ಮೋದಿ ಪಯಣಿಸಿದ Air India ವಿಮಾನ ವಿಶ್ವದಲ್ಲೇ ಅತಿ ಹೆಚ್ಚು ಟ್ರ್ಯಾಕ್: Flightradar24

Ranji Trophy final: ಕರ್ನಾಟಕ ವಿರುದ್ಧ ಜಮ್ಮು ಮತ್ತು ಕಾಶ್ಮೀರ ಬೃಹತ್ ಮೊತ್ತ; 527/6

SCROLL FOR NEXT