ಗಾಯಾಳುಗಳನ್ನು ಹರಿದ್ವಾರದ ಆಸ್ಪತ್ರೆಗೆ ಸ್ಥಳಾಂತರಿಸುತ್ತಿರುವುದು  
ದೇಶ

Haridwar stampede: ಮಾನಸ ದೇವಿ ದೇವಾಲಯದಲ್ಲಿ ಕಾಲ್ತುಳಿತಕ್ಕೆ ಕನಿಷ್ಠ 6 ಸಾವು; ಪ್ರಧಾನಿ ಮೋದಿ ಸಂತಾಪ

ಹರಿದ್ವಾರದ ಮಾನಸ ದೇವಿ ದೇವಸ್ಥಾನದಲ್ಲಿ ಭಾರಿ ಜನಸಮೂಹ ಜಮಾಯಿಸಿ ಉಂಟಾದ ಕಾಲ್ತುಳಿತದಲ್ಲಿ 6 ಜನರು ಮೃತಪಟ್ಟಿದ್ದಾರೆ.

ಹರಿದ್ವಾರದ ಮಾನಸ ದೇವಿ ದೇವಸ್ಥಾನದಲ್ಲಿ ಭಾನುವಾರ ಬೆಳಗ್ಗೆ ಸಂಭವಿಸಿದ ಕಾಲ್ತುಳಿತದಲ್ಲಿ ಕನಿಷ್ಠ ಆರು ಜನರು ಮೃತಪಟ್ಟು ಹಲವರು ಗಾಯಗೊಂಡಿದ್ದಾರೆ ಎಂದು ಗರ್ವಾಲ್ ವಿಭಾಗ ಆಯುಕ್ತರು ಸುದ್ದಿ ಸಂಸ್ಥೆ ಎಎನ್‌ಐಗೆ ತಿಳಿಸಿದ್ದಾರೆ.

ಹರಿದ್ವಾರದ ಮಾನಸ ದೇವಿ ದೇವಸ್ಥಾನದಲ್ಲಿ ಭಾರಿ ಜನಸಮೂಹ ಜಮಾಯಿಸಿ ಉಂಟಾದ ಕಾಲ್ತುಳಿತದಲ್ಲಿ 6 ಜನರು ಮೃತಪಟ್ಟಿದ್ದಾರೆ. ನಾನು ಸ್ಥಳಕ್ಕೆ ಭೇಟಿ ನೀಡುತ್ತಿದ್ದು, ಘಟನೆಯ ವಿವರವಾದ ವರದಿಯನ್ನು ನಿರೀಕ್ಷಿಸಲಾಗುತ್ತಿದೆ ಎಂದು ಗರ್ವಾಲ್ ವಿಭಾಗ ಆಯುಕ್ತ ವಿನಯ್ ಶಂಕರ್ ಪಾಂಡೆ ತಿಳಿಸಿದ್ದಾರೆ.

ಹರಿದ್ವಾರದ ಮಾನಸಾ ದೇವಿ ದೇವಸ್ಥಾನದಲ್ಲಿ ಸಂಭವಿಸಿದ ಕಾಲ್ತುಳಿತ ಘಟನೆ ಸುದ್ದಿ ಕೇಳಿ ತೀವ್ರ ದುಃಖವಾಗಿದೆ ಎಂದು ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಹೇಳಿದ್ದಾರೆ. ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡಲಾಗುತ್ತಿದೆ ಎಂದು ಹೇಳಿದ್ದಾರೆ.

ಹರಿದ್ವಾರದ ಮಾನಸಾ ದೇವಿ ದೇವಸ್ಥಾನಕ್ಕೆ ಹೋಗುವ ದಾರಿಯಲ್ಲಿ ಕಾಲ್ತುಳಿತ ಸಂಭವಿಸಿದೆ. ಎಸ್‌ಡಿಆರ್‌ಎಫ್, ಸ್ಥಳೀಯ ಪೊಲೀಸರು ಮತ್ತು ಇತರ ರಕ್ಷಣಾ ತಂಡಗಳು ಸ್ಥಳಕ್ಕೆ ತಲುಪಿದ್ದು ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿವೆ ಎಂದು ತಿಳಿಸಿದ್ದಾರೆ.

ಈ ನಿಟ್ಟಿನಲ್ಲಿ ನಾನು ಸ್ಥಳೀಯ ಆಡಳಿತದೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿದ್ದೇನೆ. ಪರಿಸ್ಥಿತಿಯನ್ನು ನಿರಂತರವಾಗಿ ಮೇಲ್ವಿಚಾರಣೆ ಮಾಡಲಾಗುತ್ತಿದೆ. ಎಲ್ಲಾ ಭಕ್ತರ ಸುರಕ್ಷತೆಗಾಗಿ ಪ್ರಾರ್ಥಿಸುತ್ತೇನೆ ಎಂದು ಹೇಳಿದ್ದಾರೆ.

ದೇವಾಲಯಕ್ಕೆ ಅಪಾರ ಸಂಖ್ಯೆಯ ಭಕ್ತರು ನುಗ್ಗಿದ್ದರಿಂದ ಗೊಂದಲ ಭುಗಿಲೆದ್ದಿತು, ಇದು ಭೀತಿಯನ್ನು ಉಂಟುಮಾಡಿ ಜನರು ಚೆಲ್ಲಾಪಿಲ್ಲಿಯಾಗಿ ಓಡಲಾರಂಭಿಸಿದರು. ಕಾಲ್ತುಳಿತದ ಸುದ್ದಿ ತಿಳಿದ ಕೂಡಲೇ ಪೊಲೀಸರು ಮತ್ತು ಆಡಳಿತ ತಂಡಗಳು ಸ್ಥಳಕ್ಕೆ ಧಾವಿಸಿದವು.

ಮಾನಸ ದೇವಿ ದೇವಸ್ಥಾನವನ್ನು ಹರಿದ್ವಾರದ ಐದು ಪವಿತ್ರ ಸ್ಥಳಗಳಲ್ಲಿ ಅಥವಾ ಪಂಚ ತೀರ್ಥಗಳಲ್ಲಿ ಒಂದೆಂದು ಪೂಜಿಸಲಾಗುತ್ತದೆ. ಇದು 500 ಅಡಿಗಳಿಗಿಂತ ಹೆಚ್ಚು ಎತ್ತರದಲ್ಲಿ ಶಿವಾಲಿಕ್ ಬೆಟ್ಟಗಳ ಮೇಲೆ ನಿಂತಿದೆ.

ಪ್ರಧಾನಿ ಮೋದಿ ಸಂತಾಪ

ಕಾಲ್ತುಳಿತದಿಂದ ಉಂಟಾದ ಜೀವಹಾನಿಗೆ ಪ್ರಧಾನಿ ಮೋದಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಗಾಯಾಳುಗಳು ಬೇಗ ಗುಣಮುಖರಾಗಲಿ. ಸ್ಥಳೀಯ ಆಡಳಿತವು ಸಂತ್ರಸ್ತರಿಗೆ ಸಹಾಯ ಮಾಡುತ್ತಿದೆ ಎಂದು ಪ್ರಧಾನ ಮಂತ್ರಿ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಮಧ್ಯಪ್ರದೇಶ: ಕಾಫ್ ಸಿರಪ್ ಸೇವಿಸಿ ಮೂತ್ರಪಿಂಡ ವೈಫಲ್ಯ; ಚಿಕಿತ್ಸೆ ಪಡೆಯುತ್ತಿದ್ದ 6 ಮಕ್ಕಳ ಮರಣ; ಸಾವಿನ ಸಂಖ್ಯೆ 20ಕ್ಕೆ ಏರಿಕೆ

BiggBoss Kannada: ಬಿಗ್ ಬಾಸ್ 12 ಮನೆಗೆ ಬೀಗಮುದ್ರೆ, ಜಾಲಿವುಡ್ ಸ್ಟುಡಿಯೋಸ್ ಇಂದು ಹೈಕೋರ್ಟ್ ಮೊರೆ?

ರಾಜಕೀಯ ಒತ್ತಡಕ್ಕೆ ಮಣಿದು ಆತುರಾತುರವಾಗಿ ಸಮೀಕ್ಷೆ ನಡೆಸುತ್ತಿದ್ದಾರೆ: BJP ಟೀಕೆ

ನಮ್ಮ ಮೆಟ್ರೋಗೆ ವಾಲ್ಮೀಕಿ ಹೆಸರಿಡಲು ಕೇಂದ್ರಕ್ಕೆ ಒತ್ತಾಯ: ಸಿಎಂ ಸಿದ್ದರಾಮಯ್ಯ

ನಮ್ಮ ತಟ್ಟೆಯಲ್ಲಿರುವ ಅನ್ನ ಕಿತ್ತುಕೊಳ್ಳಬೇಡಿ: ಕುರುಬ ಸಮುದಾಯ ST ಸೇರ್ಪಡೆ ಪ್ರಸ್ತಾಪಕ್ಕೆ VS ಉಗ್ರಪ್ಪ ವಿರೋಧ

SCROLL FOR NEXT