ಸಾಂದರ್ಭಿಕ ಚಿತ್ರ 
ದೇಶ

ತಮಿಳುನಾಡು: ಅಂತಿಮ ಯಾತ್ರೆ ವೇಳೆ ಪಟಾಕಿ ಸಿಡಿದು ಬಾಲಕಿ ಮುಖಕ್ಕೆ ತೀವ್ರ ಗಾಯ!

ಪಾರ್ಥೀವ ಶರೀರವೊಂದರ ಅಂತಿಮ ಯಾತ್ರೆ ವೇಳೆಯಲ್ಲಿ ಪಾಲ್ಗೊಂಡ ಕೆಲವರು ರಸ್ತೆಯ ಮೇಲೆ ಹೆಚ್ಚಿನ ಡೆಸಿಬಲ್ ಪಟಾಕಿಗಳನ್ನು ಸಿಡಿಸುತ್ತಿದ್ದಾಗ ಪಟಾಕಿಯೊಂದು ನಿಶಾಂತಿನಿಯ ಮುಖದ ಮೇಲೆ ಬಿದ್ದು ಸ್ಫೋಟಗೊಂಡಿದೆ.

ನೀಲಂಕಾರೈ: ಅಂತಿಮ ಯಾತ್ರೆಯೊಂದರ ವೇಳೆ ಪಟಾಕಿ ಸಿಡಿದು 10 ವರ್ಷದ ಬಾಲಕಿಯ ಮುಖಕ್ಕೆ ತೀವ್ರ ಗಾಯಗಳಾಗಿರುವ ಘಟನೆ ತಮಿಳುನಾಡಿನ ನೀಲಂಕಾರೈನಲ್ಲಿ ನಡೆದಿದೆ. ವೆಟ್ಟುವಂಕನ್ನಿಯ ಶಾಲೆಯ 6 ನೇ ತರಗತಿ ವಿದ್ಯಾರ್ಥಿನಿ ನಿಶಾಂತಿನಿ ಗಾಯಗೊಂಡ ಬಾಲಕಿ. ಈಕೆ ಮನೆಗೆ ಹಿಂದಿರುಗುತ್ತಿದ್ದಾಗ ಈ ಅವಘಡ ನಡೆದಿದೆ.

ಪಾರ್ಥೀವ ಶರೀರವೊಂದರ ಅಂತಿಮ ಯಾತ್ರೆ ವೇಳೆಯಲ್ಲಿ ಪಾಲ್ಗೊಂಡ ಕೆಲವರು ರಸ್ತೆಯ ಮೇಲೆ ಹೆಚ್ಚಿನ ಡೆಸಿಬಲ್ ಪಟಾಕಿಗಳನ್ನು ಸಿಡಿಸುತ್ತಿದ್ದಾಗ ಪಟಾಕಿಯೊಂದು ನಿಶಾಂತಿನಿಯ ಮುಖದ ಮೇಲೆ ಬಿದ್ದು ಸ್ಫೋಟಗೊಂಡಿದೆ.

ಪರಿಣಾಮ ಗಂಭೀರವಾಗಿ ಗಾಯಗೊಂಡ ಬಾಲಕಿಯನ್ನು ಅಲ್ಲಿದ್ದವರು ಸಮೀಪದ ಖಾಸಗಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ ರಾಯಪೆಟ್ಟಾ ಸರ್ಕಾರಿ ಆಸ್ಪತ್ರೆಗೆ ಸ್ಥಳಾಂತರಿಸಿದ್ದಾರೆ.

ಸ್ಫೋಟದಿಂದ ಆಕೆಯ ಮುಖದ ಎಡಭಾಗಕ್ಕೆ ತೀವ್ರ ಹಾನಿಯಾಗಿದೆ. ಆಕೆಯ ಕೆನ್ನೆ, ಮೂಗು ಮತ್ತು ಕಣ್ಣಿಗೂ ಗಾಯವಾಗಿದೆ. ಆಕೆಯ ತಂದೆ ನೀಡಿದ ದೂರಿನ ಮೇರೆಗೆ ನೀಲಂಕರೈ ಪೊಲೀಸರು ಪ್ರಕರಣ ದಾಖಲಿಸಿಕೊಂಡು 33 ವರ್ಷದ ಗೋಪಿನಾಥ್ ಎಂಬಾತನನ್ನು ಬಂಧಿಸಿದ್ದಾರೆ.

ಗೋಪಿನಾಥ್ ಜೊತೆಗೆ ಪಟಾಕಿ ಸಿಡಿಸುವಾಗ ಮದ್ಯದ ಅಮಲಿನಲ್ಲಿದ್ದ ಮತ್ತೋರ್ವ ಯುವಕ ವಿನೀತ್‌ಗಾಗಿಯೂ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. ಈ ಸಂಬಂಧ ಮುಂದಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT