ಕಂಡಕ್ಟರ್ ಮೇಲೆ ಹಲ್ಲೆ 
ದೇಶ

Kannur: ಪಾಸ್ ಇಲ್ಲ ಅಂತ ಮಹಿಳೆಯ ಕೆಳಗಿಳಿಸಿದ ಕಂಡಕ್ಟರ್ ಗೆ ಹಿಗ್ಗಾಮುಗ್ಗ ಥಳಿತ! Video

ಕೇರಳದ ಕಣ್ಣೂರಿನಲ್ಲಿ ಈ ಘಟನೆ ನಡೆದಿದ್ದು, ಕರ್ತವ್ಯದಲ್ಲಿದ್ದ ಕಂಡಕ್ಟರ್ ಮೇಲೆ ಮೂರು ಜನ ಹಲ್ಲೆ ಮಾಡಿದ್ದಾರೆ. ಮೂಲಗಳ ಪ್ರಕಾರ ರಿಯಾಯಿತಿ ಪಾಸ್ ಇಲ್ಲದ್ದಕ್ಕೆ ಕಂಡಕ್ಟರ್ ಮಹಿಳೆಯನ್ನು ಬಸ್ಸಿನಿಂದ ಕೆಳಗಿಳಿಸಿದ್ದ.

ಕಣ್ಣೂರು: ಬಸ್ ಪಾಸ್ ಇಲ್ಲದೇ ಪ್ರಯಾಣಿಸುತ್ತಿದ್ದ ಮಹಿಳೆಯನ್ನು ಕೆಳಗಿಳಿಸಿದ ಕಂಡಕ್ಟರ್ ಮೇಲೆ ಹಲ್ಲೆ ಮಾಡಿರುವ ವಿಡಿಯೊವೊಂದು ವೈರಲ್ ಆಗುತ್ತಿದೆ.

ಕೇರಳದ ಕಣ್ಣೂರಿನಲ್ಲಿ ಈ ಘಟನೆ ನಡೆದಿದ್ದು, ಕರ್ತವ್ಯದಲ್ಲಿದ್ದ ಕಂಡಕ್ಟರ್ ಮೇಲೆ ಮೂರು ಜನ ಹಲ್ಲೆ ಮಾಡಿದ್ದಾರೆ. ಮೂಲಗಳ ಪ್ರಕಾರ ರಿಯಾಯಿತಿ ಪಾಸ್ ಇಲ್ಲದ್ದಕ್ಕೆ ಕಂಡಕ್ಟರ್ ಮಹಿಳೆಯನ್ನು ಬಸ್ಸಿನಿಂದ ಕೆಳಗಿಳಿಸಿದ್ದ.

ಬಳಿಕ ಆಕೆ ಈ ವಿಚಾರವನ್ನು ತನ್ನ ಗಂಡನಿಗೆ ತಿಳಿಸಿದ್ದು, ಕಂಡಕ್ಟರ್ ನಡೆಯಿಂದ ಆಕ್ರೋಶಗೊಂಡ ಪತಿ ತನ್ನ ಸ್ನೇಹಿತರೊಂದಿಗೆ ಸೇರಿ ಬಸ್ ಕಂಡಕ್ಟರ್ ಮೇಲೆ ಹಲ್ಲೆ ಮಾಡಿದ್ದಾನೆ.

ಕಣ್ಣೂರಿನಿಂದ ತಲಶ್ಶೇರಿಗೆ ಚಲಿಸುತ್ತಿದ್ದ ಬಸ್ಸಿನಲ್ಲಿ ಕಂಡಕ್ಟರ್ ನನ್ನು ಕ್ರೂರವಾಗಿ ಥಳಿಸಲಾಗಿದೆ. ನಾದಾಪುರದ ಇರಿಂಗಣ್ಣೂರಿನ ನಿವಾಸಿ ವಿಷ್ಣು ಎಂಬ ಕಂಡಕ್ಟರ್ ನನ್ನು ಥಳಿಸಲಾಗಿದೆ.

ಕಂಡಕ್ಟರ್ ವಿಷ್ಣು ಬಸ್ ನಲ್ಲಿದ್ದ ಮಹಿಳೆ ಜೊತೆಗೆ ರಿಯಾಯಿತಿ ಪಾಸ್ ಇಲ್ಲ ಎಂಬ ಕಾರಣಕ್ಕೆ ವಾಗ್ವಾದ ನಡೆಸಿದ್ದ. ಈ ವಾಗ್ವಾದ ಮತ್ತು ಸಂಘರ್ಷದಲ್ಲಿ ಮಹಿಳೆಯ ಫೋನ್ ಕೆಳಗ ಬಿದ್ದು ಜಖಂ ಆಗಿತ್ತು. ಬಳಿಕ ಪಾಸ್ ಇಲ್ಲದ ಕಾರಣ ಆಕೆಯನ್ನುಬಸ್ಸಿನಿಂದ ಕೆಳಗಿಳಿಸಿದ್ದ.

ಈ ವಿಚಾರ ತಿಳಿದ ಯುವತಿಯ ಪತಿ ತನ್ನ ಸ್ನೇಹಿತರ ಜೊತೆಗೂಡಿ ಬಸ್ ಗೆ ಹತ್ತಿದ್ದಾರೆ. ಈ ವೇಳೆ ನೋಡ ನೋಡುತ್ತಲೇ ಕಂಡಕ್ಟರ್ ಗೆ ಥಳಿಸಿದ್ದಾರೆ. ತಲಶ್ಶೇರಿ-ತೊಟ್ಟಿಲ್ ಪಾಲಂ ಮಾರ್ಗದಲ್ಲಿ ಚಲಿಸುವ ಜಗನ್ನಾಥ್ ಬಸ್ ನಲ್ಲಿ ಈ ದಾಳಿ ನಡೆದಿದೆ.

ನಿನ್ನೆ ಸಂಜೆ 6.30 ಕ್ಕೆ ಪೆರಿಂಗತ್ತೂರಿನಲ್ಲಿ ಈ ಘಟನೆ ನಡೆದಿದೆ. ಗಾಯಗೊಂಡ ಕಂಡಕ್ಟರ್ ನನ್ನು ತಲಶ್ಶೇರಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ದಾಳಿಯ ವಿಡಿಯೋ ಬಸ್ ನಲ್ಲಿ ಅಳವಡಿಸಲಾಗಿದ್ದ ಸಿಸಿಟಿವಿಯಸಲ್ಲಿ ಸೆರೆಯಾಗಿದ್ದು ವ್ಯಾಪಕ ವೈರಲ್ ಆಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

ಈ ಬಾರಿ ನಾನು ಸಚಿವನಾಗುವ ಭರವಸೆ ಇದೆ: ಸಂಪುಟ ವಿಸ್ತರಣೆಯೇ ನವೆಂಬರ್ ಕ್ರಾಂತಿಯಿರಬಹುದು; ಸಲೀಂ ಅಹ್ಮದ್

SCROLL FOR NEXT