ಚಿರಾಗ್ ಪಾಸ್ವಾನ್ 
ದೇಶ

ಬಿಹಾರ ವಿಧಾನಸಭೆ ಚುನಾವಣೆ ನಂತರ ಮತ್ತೆ ನಿತೀಶ್ ಕುಮಾರ್ ಮುಖ್ಯಮಂತ್ರಿ: ಚಿರಾಗ್ ಪಾಸ್ವಾನ್ 'ಯೂ ಟರ್ನ್'

ನಿತೀಶ್ ಕುಮಾರ್ ಸರ್ಕಾರವನ್ನು ಬೆಂಬಲಿಸಿದ್ದಕ್ಕೆ"ವಿಷಾದ" ವ್ಯಕ್ತಪಡಿಸಿದ ಕೇವಲ ಎರಡು ದಿನಗಳ ನಂತರ ಪಾಸ್ವಾನ್ ಮತ್ತೆ ಈ ಹೇಳಿಕೆ ನೀಡಿದ್ದಾರೆ.

ನವದೆಹಲಿ: ಈ ವರ್ಷದ ಕೊನೆಯಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯ ನಂತರ ನಿತೀಶ್ ಕುಮಾರ್ ಮತ್ತೆ ಬಿಹಾರ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಕೇಂದ್ರ ಸಚಿವ ಮತ್ತು ಎಲ್‌ಜೆಪಿ (ರಾಮ್ ವಿಲಾಸ್) ಮುಖ್ಯಸ್ಥ ಚಿರಾಗ್ ಪಾಸ್ವಾನ್ ಹೇಳಿದ್ದಾರೆ.

ಅಪರಾಧಿಗಳ ಮುಂದೆ "ಶರಣಾಗಿದ್ದಾರೆ" ಎಂದು ಆರೋಪಿಸಿ ನಿತೀಶ್ ಕುಮಾರ್ ಸರ್ಕಾರವನ್ನು ಬೆಂಬಲಿಸಿದ್ದಕ್ಕೆ"ವಿಷಾದ" ವ್ಯಕ್ತಪಡಿಸಿದ ಕೇವಲ ಎರಡು ದಿನಗಳ ನಂತರ ಪಾಸ್ವಾನ್ ಮತ್ತೆ ಈ ಹೇಳಿಕೆ ನೀಡಿದ್ದಾರೆ.

ಕಾರ್ಯಕ್ರಮ ವೊಂದರಲ್ಲಿ ಮಾತನಾಡಿದ ಅವರು, ಆಪರೇಷನ್ ಸಿಂಧೂರ್ ಕುರಿತು ಪ್ರಧಾನಿ ನರೇಂದ್ರ ಮೋದಿಯವರ ಮೇಲೆ ದಾಳಿ ಮಾಡಲು ವಿರೋಧ ಪಕ್ಷಗಳು ಸನ್ನದ್ಧವಾಗಿವೆ ಎಂದು ಆರೋಪಿಸಿದ್ದಾರೆ.

"ನನ್ನ ಬದ್ಧತೆ ಮತ್ತು ಪ್ರೀತಿ ಪ್ರಧಾನಿ ನರೇಂದ್ರ ಮೋದಿ ಅವರ ಕಡೆಗೆ ಇದೆ ಎಂದು ನಾನು ಹಲವಾರು ಬಾರಿ ಪುನರುಚ್ಚರಿಸಿದ್ದೇನೆ. ಪ್ರಧಾನಿ ಮೋದಿ ನಾಯಕತ್ವದಲ್ಲಿ, ಚುನಾವಣೆಗಳು (ಬಿಹಾರದಲ್ಲಿ) ನಡೆಯುತ್ತವೆ.

ಚುನಾವಣಾ ಫಲಿತಾಂಶಗಳ ನಂತರ, ನಿತೀಶ್ ಕುಮಾರ್ ಮತ್ತೆ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುತ್ತಾರೆ. ಖಂಡಿತವಾಗಿಯೂ ಅವರೇ ಮುಖ್ಯಮಂತ್ರಿಯಾಗುತ್ತಾರೆ" ಎಂದು ಪುನರುಚ್ಚರಿಸಿದರು.

ಬಿಹಾರದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ಮಾತನಾಡಿದ ಪಾಸ್ವಾನ್, ಈ ಪ್ರಕ್ರಿಯೆಯು ಈ ಹಿಂದೆ ನಾಲ್ಕು ಬಾರಿ ನಡೆದಿದೆ, ಆದರೆ ಈಗ ಡಿಜಿಟಲ್ ತಂತ್ರಜ್ಞಾನವನ್ನು ಲಿಂಕ್ ಮಾಡಲಾಗಿದೆ ಎಂಬುದನ್ನು ಹೊರತುಪಡಿಸಿ ಯಾವುದೇ ವ್ಯತ್ಯಾಸವಿಲ್ಲ ಎಂದು ಹೇಳಿದರು. ಹಿಂದೆ, ಭೌತಿಕವಾಗಿ ದಾಖಲೆಗಳಿಗಾಗಿ ಹೋಗುತ್ತಿದ್ದರು, ಆದರೆ ಈಗ ನೀವು ಆನ್‌ಲೈನ್‌ನಲ್ಲಿ ಸಲ್ಲಿಸಬಹುದು ಎಂದು ಅವರು ಹೇಳಿದರು.

ಆಧಾರ್ ಕಾರ್ಡ್‌ಗಳಲ್ಲಿ ಜನ್ಮಸ್ಥಳ ಸ್ಪಷ್ಟತೆ ಇಲ್ಲ ಎಂದು ಗಮನ ಸೆಳೆದ ಅವರು, ಯಾವುದೇ ಸಮಸ್ಯೆಗಳಿದ್ದರೆ ಜನರು ಮೂರು ಹಂತಗಳಲ್ಲಿ ಮೇಲ್ಮನವಿ ಸಲ್ಲಿಸಬಹುದು ಎಂದು ಹೇಳಿದರು. "ಈ ವಿಷಯದ ಬಗ್ಗೆ ವಿರೋಧವು ಅಂತಹ ಗದ್ದಲವನ್ನು ಸೃಷ್ಟಿಸಿದೆ. ಹೆಸರುಗಳನ್ನು ತಪ್ಪಾಗಿ ತೆಗೆದುಹಾಕಲಾಗಿದೆಯೇ ಎಂದು ತೋರಿಸಲು ಅವರು ಯಾವುದೇ ಪುರಾವೆಗಳನ್ನು ನೀಡಿದ್ದಾರೆಯೇ?" ಎಂದು ಪ್ರಶ್ನಿಸಿದ್ದಾರೆ

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ಮೊದಲ ಬಾರಿಗೆ ದಾಳಿ ಕುರಿತು ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

JC ರಸ್ತೆಯಲ್ಲಿ White-topping ಕಾಮಗಾರಿ: ಆ.30ರವರೆಗೆ ಭಾರಿ ಗಾತ್ರದ ವಾಹನಗಳ ಸಂಚಾರಕ್ಕೆ ನಿರ್ಬಂಧ

ಧರ್ಮಸ್ಥಳ ಪ್ರಕರಣ NIA ತನಿಖೆ ಮಾಡಿದರೆ ಆಕ್ಷೇಪವಿಲ್ಲ: ಸಚಿವ ಸತೀಶ್ ಜಾರಕಿಹೊಳಿ

ಭಾರತ- ಫಿಜಿ ರಕ್ಷಣಾ ಸಹಕಾರ ಕ್ರಿಯಾ ಯೋಜನೆ ಸಿದ್ಧ: ಇಂಡೋ ಪೆಸಿಫಿಕ್‌ ವಲಯದಲ್ಲಿ ಚೀನಾದ ಪ್ರಾಬಲ್ಯ ತಡೆಗೆ ಮಾಸ್ಟರ್ ಪ್ಲಾನ್!

SCROLL FOR NEXT