ಚಿರಾಗ್ ಪಾಸ್ವಾನ್ 
ದೇಶ

ಬಿಹಾರ ವಿಧಾನಸಭೆ ಚುನಾವಣೆ ನಂತರ ಮತ್ತೆ ನಿತೀಶ್ ಕುಮಾರ್ ಮುಖ್ಯಮಂತ್ರಿ: ಚಿರಾಗ್ ಪಾಸ್ವಾನ್ 'ಯೂ ಟರ್ನ್'

ನಿತೀಶ್ ಕುಮಾರ್ ಸರ್ಕಾರವನ್ನು ಬೆಂಬಲಿಸಿದ್ದಕ್ಕೆ"ವಿಷಾದ" ವ್ಯಕ್ತಪಡಿಸಿದ ಕೇವಲ ಎರಡು ದಿನಗಳ ನಂತರ ಪಾಸ್ವಾನ್ ಮತ್ತೆ ಈ ಹೇಳಿಕೆ ನೀಡಿದ್ದಾರೆ.

ನವದೆಹಲಿ: ಈ ವರ್ಷದ ಕೊನೆಯಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯ ನಂತರ ನಿತೀಶ್ ಕುಮಾರ್ ಮತ್ತೆ ಬಿಹಾರ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಕೇಂದ್ರ ಸಚಿವ ಮತ್ತು ಎಲ್‌ಜೆಪಿ (ರಾಮ್ ವಿಲಾಸ್) ಮುಖ್ಯಸ್ಥ ಚಿರಾಗ್ ಪಾಸ್ವಾನ್ ಹೇಳಿದ್ದಾರೆ.

ಅಪರಾಧಿಗಳ ಮುಂದೆ "ಶರಣಾಗಿದ್ದಾರೆ" ಎಂದು ಆರೋಪಿಸಿ ನಿತೀಶ್ ಕುಮಾರ್ ಸರ್ಕಾರವನ್ನು ಬೆಂಬಲಿಸಿದ್ದಕ್ಕೆ"ವಿಷಾದ" ವ್ಯಕ್ತಪಡಿಸಿದ ಕೇವಲ ಎರಡು ದಿನಗಳ ನಂತರ ಪಾಸ್ವಾನ್ ಮತ್ತೆ ಈ ಹೇಳಿಕೆ ನೀಡಿದ್ದಾರೆ.

ಕಾರ್ಯಕ್ರಮ ವೊಂದರಲ್ಲಿ ಮಾತನಾಡಿದ ಅವರು, ಆಪರೇಷನ್ ಸಿಂಧೂರ್ ಕುರಿತು ಪ್ರಧಾನಿ ನರೇಂದ್ರ ಮೋದಿಯವರ ಮೇಲೆ ದಾಳಿ ಮಾಡಲು ವಿರೋಧ ಪಕ್ಷಗಳು ಸನ್ನದ್ಧವಾಗಿವೆ ಎಂದು ಆರೋಪಿಸಿದ್ದಾರೆ.

"ನನ್ನ ಬದ್ಧತೆ ಮತ್ತು ಪ್ರೀತಿ ಪ್ರಧಾನಿ ನರೇಂದ್ರ ಮೋದಿ ಅವರ ಕಡೆಗೆ ಇದೆ ಎಂದು ನಾನು ಹಲವಾರು ಬಾರಿ ಪುನರುಚ್ಚರಿಸಿದ್ದೇನೆ. ಪ್ರಧಾನಿ ಮೋದಿ ನಾಯಕತ್ವದಲ್ಲಿ, ಚುನಾವಣೆಗಳು (ಬಿಹಾರದಲ್ಲಿ) ನಡೆಯುತ್ತವೆ.

ಚುನಾವಣಾ ಫಲಿತಾಂಶಗಳ ನಂತರ, ನಿತೀಶ್ ಕುಮಾರ್ ಮತ್ತೆ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುತ್ತಾರೆ. ಖಂಡಿತವಾಗಿಯೂ ಅವರೇ ಮುಖ್ಯಮಂತ್ರಿಯಾಗುತ್ತಾರೆ" ಎಂದು ಪುನರುಚ್ಚರಿಸಿದರು.

ಬಿಹಾರದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ಮಾತನಾಡಿದ ಪಾಸ್ವಾನ್, ಈ ಪ್ರಕ್ರಿಯೆಯು ಈ ಹಿಂದೆ ನಾಲ್ಕು ಬಾರಿ ನಡೆದಿದೆ, ಆದರೆ ಈಗ ಡಿಜಿಟಲ್ ತಂತ್ರಜ್ಞಾನವನ್ನು ಲಿಂಕ್ ಮಾಡಲಾಗಿದೆ ಎಂಬುದನ್ನು ಹೊರತುಪಡಿಸಿ ಯಾವುದೇ ವ್ಯತ್ಯಾಸವಿಲ್ಲ ಎಂದು ಹೇಳಿದರು. ಹಿಂದೆ, ಭೌತಿಕವಾಗಿ ದಾಖಲೆಗಳಿಗಾಗಿ ಹೋಗುತ್ತಿದ್ದರು, ಆದರೆ ಈಗ ನೀವು ಆನ್‌ಲೈನ್‌ನಲ್ಲಿ ಸಲ್ಲಿಸಬಹುದು ಎಂದು ಅವರು ಹೇಳಿದರು.

ಆಧಾರ್ ಕಾರ್ಡ್‌ಗಳಲ್ಲಿ ಜನ್ಮಸ್ಥಳ ಸ್ಪಷ್ಟತೆ ಇಲ್ಲ ಎಂದು ಗಮನ ಸೆಳೆದ ಅವರು, ಯಾವುದೇ ಸಮಸ್ಯೆಗಳಿದ್ದರೆ ಜನರು ಮೂರು ಹಂತಗಳಲ್ಲಿ ಮೇಲ್ಮನವಿ ಸಲ್ಲಿಸಬಹುದು ಎಂದು ಹೇಳಿದರು. "ಈ ವಿಷಯದ ಬಗ್ಗೆ ವಿರೋಧವು ಅಂತಹ ಗದ್ದಲವನ್ನು ಸೃಷ್ಟಿಸಿದೆ. ಹೆಸರುಗಳನ್ನು ತಪ್ಪಾಗಿ ತೆಗೆದುಹಾಕಲಾಗಿದೆಯೇ ಎಂದು ತೋರಿಸಲು ಅವರು ಯಾವುದೇ ಪುರಾವೆಗಳನ್ನು ನೀಡಿದ್ದಾರೆಯೇ?" ಎಂದು ಪ್ರಶ್ನಿಸಿದ್ದಾರೆ

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಭ್ರಷ್ಟರಿಗೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಶಾಕ್: ಏಕ ಕಾಲದಲ್ಲಿ ರಾಜ್ಯದ 10 ಕಡೆ ದಾಳಿ- ಪರಿಶೀಲನೆ

Kabaddi World Cup 2025: ಭಾರತದ ಸಿಂಹಿಣಿಯರ ಮುಡಿಗೇರಿದ ವಿಶ್ವಕಪ್‌ ಕಿರೀಟ, ಸತತ 2ನೇ ಬಾರಿಗೆ ಪ್ರಶಸ್ತಿ ಗೆದ್ದ ಭಾರತ

ಬ್ರಾಹ್ಮಣನೊಬ್ಬ ತನ್ನ ಮಗಳನ್ನು ನನ್ನ ಮಗನಿಗೆ ದಾನ ಮಾಡುವವರೆಗೆ ಮೀಸಲಾತಿ ಮುಂದುವರೆಯಲಿ: IAS ಅಧಿಕಾರಿ ವಿವಾದಾತ್ಮಕ ಹೇಳಿಕೆ

ಆಫ್ರಿಕಾದಲ್ಲಿ ಜ್ವಾಲಾಮುಖಿ ಸ್ಫೋಟ: ಭಾರತದತ್ತ ಬರುತ್ತಿರುವ ಬೂದಿ ಹೊಗೆ, ವಿಮಾನಗಳ ಹಾರಾಟಕ್ಕೆ ಅಡ್ಡಿ

ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಫೈಟ್: ಮಲ್ಲಿಕಾರ್ಜುನ ಖರ್ಗೆಗೆ ಪ್ರಾಫಿಟ್; CM ಹುದ್ದೆ ನೀಡುವಂತೆ ಸೋನಿಯಾಗೆ ದಲಿತ ನಾಯಕರ ಪತ್ರ!

SCROLL FOR NEXT