ಅಖಿಲೇಶ್ ಯಾದವ್ 
ದೇಶ

ಪಹಲ್ಗಾಮ್ ಗುಪ್ತಚರ ವೈಫಲ್ಯಕ್ಕೆ ಹೊಣೆ ಯಾರು?: ಅಖಿಲೇಶ್ ಯಾದವ್

ಪಾಕಿಸ್ತಾನದೊಂದಿಗಿನ ಸಂಘರ್ಷವನ್ನು ಭಾರತ ಹಠಾತ್ತನೆ ಕೊನೆಗೊಳಿಸಿದ ಬಗ್ಗೆ ಪ್ರಶ್ನೆಗಳನ್ನು ಎತ್ತಿದರು ಮತ್ತು "ಯಾರ ಒತ್ತಡದಲ್ಲಿ ಕದನ ವಿರಾಮ ಘೋಷಿಸಲಾಯಿತು?" ಎಂದು ಪ್ರಶ್ನಿಸಿದರು.

ನವದೆಹಲಿ: ಪಹಲ್ಗಾಮ್ ಉಗ್ರ ದಾಳಿಯ ನಂತರ ಆಪರೇಷನ್ ಸಿಂದೂರ್ ನಡೆಸಿರುವುದು "ಸರ್ಕಾರದ ಗುಪ್ತಚರ ವೈಫಲ್ಯದ ಸಂಕೇತ" ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಮಂಗಳವಾರ ಹೇಳಿದ್ದಾರೆ.

ಇಂದು ಲೋಕಸಭೆಯಲ್ಲಿ ಆಪರೇಷನ್ ಸಿಂದೂರ್ ಕುರಿತ ಚರ್ಚೆಯಲ್ಲಿ ಭಾಗವಹಿಸಿ ಮಾತನಾಡಿದ ಅಖಿಲೇಶ್ ಯಾದವ್ ಅವರು, ಪಾಕಿಸ್ತಾನದೊಂದಿಗಿನ ಸಂಘರ್ಷವನ್ನು ಭಾರತ ಹಠಾತ್ತನೆ ಕೊನೆಗೊಳಿಸಿದ ಬಗ್ಗೆ ಪ್ರಶ್ನೆಗಳನ್ನು ಎತ್ತಿದರು ಮತ್ತು "ಯಾರ ಒತ್ತಡದಲ್ಲಿ ಕದನ ವಿರಾಮ ಘೋಷಿಸಲಾಯಿತು?" ಎಂದು ಕೇಳಿದರು.

ಭಾರತದ ವಿದೇಶಾಂಗ ನೀತಿ "ಸಂಪೂರ್ಣವಾಗಿ ಕುಸಿದಿದೆ" ಎಂದು ಆರೋಪಿಸಿದ ಉತ್ತರ ಪ್ರದೇಶ ಮಾಜಿ ಮುಖ್ಯಮಂತ್ರಿ, ಚೀನಾ "ನಮ್ಮ ಭೂಮಿ ಮತ್ತು ಮಾರುಕಟ್ಟೆಯನ್ನು ಕಬಳಿಸುವ" "ದೈತ್ಯ" ಎಂದರು.

"ಪಹಲ್ಗಾಮ್ ದಾಳಿಯಲ್ಲಿ ಗುಪ್ತಚರ ವೈಫಲ್ಯಕ್ಕೆ ಯಾರು ಜವಾಬ್ದಾರಿ ತೆಗೆದುಕೊಳ್ಳುತ್ತಾರೆ?" ಎಂದು ಅಖಿಲೇಶ್ ಯಾದವ್ ಪ್ರಶ್ನಿಸಿದರು.

"ಪಹಲ್ಗಾಮ್ ದಾಳಿಯ ನಂತರ ಆಪರೇಷನ್ ಸಿಂದೂರ್ ಆರಂಭಿಸಿರುವುದು ಸರ್ಕಾರದ ಗುಪ್ತಚರ ವೈಫಲ್ಯದ ಸಂಕೇತವಾಗಿದೆ" ಎಂದು ವಾಗ್ದಾಳಿ ನಡೆಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್

EVM ದೋಷ, ನನ್ನನ್ನೇ ವಿಜೇತನೆಂದು ಘೋಷಿಸಿ: ಕೊಲತ್ತೂರ್ ಸೋಲನ್ನು ಪ್ರಶ್ನಿಸಿ ಹೈಕೋರ್ಟ್‌ ಮೆಟ್ಟಿಲೇರಿದ MK Stalin!

ಮಹಾ ದುರಂತಕ್ಕೆ ರೋಚಕ ಟ್ವಿಸ್ಟ್: ಐಫೋನ್​ EMI ಅನ್ನೋದೇ ಕಟ್ಟು ಕಥೆ; ಬೆಟ್ಟದಿಂದ ಬಿದ್ದು ಪ್ರಾಣಬಿಟ್ಟ ಮೂವರ ಬಗ್ಗೆ ಸಂಬಂಧಿ ಸ್ಫೋಟಕ ಹೇಳಿಕೆ!

ಮಾತು ತಪ್ಪಿದ ಕೇಂದ್ರ ಸರ್ಕಾರದ ವಿರುದ್ಧ ಮತ್ತೊಂದು ದೊಡ್ಡ ಹೋರಾಟಕ್ಕೆ CJP ಸಜ್ಜು; ಸೆಪ್ಟೆಂಬರ್ 5 ರಂದು ದೆಹಲಿಯಲ್ಲಿ ಬೃಹತ್ ಮೆರವಣಿಗೆ