ಅಖಿಲೇಶ್ ಯಾದವ್ 
ದೇಶ

ಪಹಲ್ಗಾಮ್ ಗುಪ್ತಚರ ವೈಫಲ್ಯಕ್ಕೆ ಹೊಣೆ ಯಾರು?: ಅಖಿಲೇಶ್ ಯಾದವ್

ಪಾಕಿಸ್ತಾನದೊಂದಿಗಿನ ಸಂಘರ್ಷವನ್ನು ಭಾರತ ಹಠಾತ್ತನೆ ಕೊನೆಗೊಳಿಸಿದ ಬಗ್ಗೆ ಪ್ರಶ್ನೆಗಳನ್ನು ಎತ್ತಿದರು ಮತ್ತು "ಯಾರ ಒತ್ತಡದಲ್ಲಿ ಕದನ ವಿರಾಮ ಘೋಷಿಸಲಾಯಿತು?" ಎಂದು ಪ್ರಶ್ನಿಸಿದರು.

ನವದೆಹಲಿ: ಪಹಲ್ಗಾಮ್ ಉಗ್ರ ದಾಳಿಯ ನಂತರ ಆಪರೇಷನ್ ಸಿಂದೂರ್ ನಡೆಸಿರುವುದು "ಸರ್ಕಾರದ ಗುಪ್ತಚರ ವೈಫಲ್ಯದ ಸಂಕೇತ" ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಮಂಗಳವಾರ ಹೇಳಿದ್ದಾರೆ.

ಇಂದು ಲೋಕಸಭೆಯಲ್ಲಿ ಆಪರೇಷನ್ ಸಿಂದೂರ್ ಕುರಿತ ಚರ್ಚೆಯಲ್ಲಿ ಭಾಗವಹಿಸಿ ಮಾತನಾಡಿದ ಅಖಿಲೇಶ್ ಯಾದವ್ ಅವರು, ಪಾಕಿಸ್ತಾನದೊಂದಿಗಿನ ಸಂಘರ್ಷವನ್ನು ಭಾರತ ಹಠಾತ್ತನೆ ಕೊನೆಗೊಳಿಸಿದ ಬಗ್ಗೆ ಪ್ರಶ್ನೆಗಳನ್ನು ಎತ್ತಿದರು ಮತ್ತು "ಯಾರ ಒತ್ತಡದಲ್ಲಿ ಕದನ ವಿರಾಮ ಘೋಷಿಸಲಾಯಿತು?" ಎಂದು ಕೇಳಿದರು.

ಭಾರತದ ವಿದೇಶಾಂಗ ನೀತಿ "ಸಂಪೂರ್ಣವಾಗಿ ಕುಸಿದಿದೆ" ಎಂದು ಆರೋಪಿಸಿದ ಉತ್ತರ ಪ್ರದೇಶ ಮಾಜಿ ಮುಖ್ಯಮಂತ್ರಿ, ಚೀನಾ "ನಮ್ಮ ಭೂಮಿ ಮತ್ತು ಮಾರುಕಟ್ಟೆಯನ್ನು ಕಬಳಿಸುವ" "ದೈತ್ಯ" ಎಂದರು.

"ಪಹಲ್ಗಾಮ್ ದಾಳಿಯಲ್ಲಿ ಗುಪ್ತಚರ ವೈಫಲ್ಯಕ್ಕೆ ಯಾರು ಜವಾಬ್ದಾರಿ ತೆಗೆದುಕೊಳ್ಳುತ್ತಾರೆ?" ಎಂದು ಅಖಿಲೇಶ್ ಯಾದವ್ ಪ್ರಶ್ನಿಸಿದರು.

"ಪಹಲ್ಗಾಮ್ ದಾಳಿಯ ನಂತರ ಆಪರೇಷನ್ ಸಿಂದೂರ್ ಆರಂಭಿಸಿರುವುದು ಸರ್ಕಾರದ ಗುಪ್ತಚರ ವೈಫಲ್ಯದ ಸಂಕೇತವಾಗಿದೆ" ಎಂದು ವಾಗ್ದಾಳಿ ನಡೆಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿಯಿಂದ ಸಿಟಿ ರೌಂಡ್ಸ್

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆಗೆ ಮುಹೂರ್ತ ಫಿಕ್ಸ್; ಹೀಗಿದೆ ನಾಡಹಬ್ಬದ ವೇಳಾಪಟ್ಟಿ...

ಆರ್ ಎಸ್ಎಸ್ ಸಭೆ ನಡೆದಾಗಲೆಲ್ಲಾ ಅನೇಕ ಅನಾಹುತಗಳಾಗಿವೆ- ಬಿಕೆ ಹರಿಪ್ರಸಾದ್

ದೀದಿಗೆ ಮತ್ತೊಂದು ಶಾಕ್; ಮಮತಾ ನೇತೃತ್ವದ TMC ಬಣದ 12 ಬ್ಯಾಂಕ್ ಖಾತೆ ಫ್ರೀಜ್ ಮಾಡಿದ ಪೋಲೀಸರು!