ರಾಹುಲ್ ಗಾಂಧಿ 
ದೇಶ

ಆಪರೇಷನ್ ಸಿಂಧೂರ್ ವೇಳೆ ಪ್ರತಿಪಕ್ಷಗಳು ಸರ್ಕಾರದೊಂದಿಗೆ ಬಂಡೆಯಂತೆ ನಿಂತಿದ್ದವು: ರಾಹುಲ್ ಗಾಂಧಿ

ಪ್ರಧಾನಿ ಮೋದಿಗೆ ಇಂದಿರಾ ಗಾಂಧಿಯವರಂತೆ ಧೈರ್ಯವಿದ್ದರೆ, ಅವರು ಇಲ್ಲಿ ನಿಂತು ಡೊನಾಲ್ಡ್ ಟ್ರಂಪ್, ನೀವು ಸುಳ್ಳುಗಾರ ಎಂದು ಹೇಳಲಿ" ಎಂದು ರಾಹುಲ್ ಗಾಂಧಿ ಸವಾಲು ಹಾಕಿದರು.

ನವದೆಹಲಿ: "ಆಪರೇಷನ್ ಸಿಂಧೂರ್ ಆರಂಭವಾದ ಕ್ಷಣ, ವಾಸ್ತವವಾಗಿ ಅದು ಪ್ರಾರಂಭವಾಗುವ ಮೊದಲೇ, ಎಲ್ಲಾ ವಿರೋಧ ಪಕ್ಷಗಳು ಭದ್ರತಾ ಪಡೆಗಳೊಂದಿಗೆ ಮತ್ತು ಭಾರತದ ಚುನಾಯಿತ ಸರ್ಕಾರದೊಂದಿಗೆ ಬಂಡೆಯಂತೆ ನಿಲ್ಲುತ್ತೇವೆ ಎಂದು ಪ್ರತಿಜ್ಞೆ ಮಾಡಿದ್ದವು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಂಗಳವಾರ ಹೇಳಿದ್ದಾರೆ.

ಇಂದು ಲೋಕಸಭೆಯಲ್ಲಿ ಆಪರೇಷನ್ ಸಿಂದೂರ್ ಕುರಿತ ಚರ್ಚೆಯಲ್ಲಿ ಭಾಗವಹಿಸಿ ಮಾತನಾಡಿದ ರಾಹುಲ್ ಗಾಂಧಿ, "ರಾಷ್ಟ್ರಿಯ ಭದ್ರತೆ ವಿಚಾರದಲ್ಲಿ ಗಂಭೀರ ಹಾಗೂ ದೀರ್ಘಕಾಲೀನ ನೀತಿ ಅಗತ್ಯವಿದೆ. ಪ್ರತಿಕ್ರಿಯಾತ್ಮಕ ಹಾಗೂ ರಾಜಕೀಯ ಪ್ರೇರಿತ ಕ್ರಮಗಳು ಅನುಕೂಲಕರವಲ್ಲ" ಎಂದರು.

ಉಗ್ರರ ವಿರುದ್ದ ಸೇನೆ ನಡೆಸುವ ಕಾರ್ಯಚರಣೆಗಳನ್ನು ರಾಜಕೀಯ ಲಾಭಕ್ಕಾಗಿ ಬಳಸಲಾಗುತ್ತಿದೆ ಎಂದು ಲೋಕಸಭೆ ಪ್ರತಿಪಕ್ಷದ ನಾಯಕ ಆರೋಪಿಸಿದರು.

ಸಶಸ್ತ್ರ ಪಡೆಗಳನ್ನು ರಾಷ್ಟ್ರೀಯ ಹಿತಾಸಕ್ತಿಗಾಗಿ ಮತ್ತು ಸಂಪೂರ್ಣ "ಸ್ವಾತಂತ್ರ್ಯದೊಂದಿಗೆ" ಬಳಸಬೇಕು. ಆದರೆ ಪ್ರಧಾನಿ ನರೇಂದ್ರ ಮೋದಿಯವರ ಪ್ರತಿಷ್ಠೆಯನ್ನು "ರಕ್ಷಿಸಲು" ಅಲ್ಲ, ಇದು "ದೇಶಕ್ಕೆ ಅಪಾಯಕಾರಿ" ಎಂದು ರಾಹುಲ್ ಗಾಂಧಿ ಕರೆದರು.

ಮೋದಿಗೆ ಧೈರ್ಯವಿದ್ದರೆ ಟ್ರಂಪ್ ಸುಳ್ಳುಗಾರ ಎಂದು ಹೇಳಲಿ

ನನ್ನ ಮಧ್ಯಸ್ಥಿಕೆಯಿಂದಲೇ ಭಾರತ ಮತ್ತು ಪಾಕಿಸ್ತಾನದ ನಡುವೆ ಕದನ ವಿರಾಮವಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ 29 ಬಾರಿ ಹೇಳಿದ್ದಾರೆ. ಸರಿ, ಅವರು ಸುಳ್ಳು ಹೇಳುತ್ತಿದ್ದರೆ, ಪ್ರಧಾನಿ ಮೋದಿ ತಮ್ಮ ಭಾಷಣದಲ್ಲಿ ಇದನ್ನು ಸ್ಪಷ್ಟಪಡಿಸಲಿ ಎಂದು ರಾಹುಲ್​ ಗಾಂಧಿ ಒತ್ತಾಯಿಸಿದರು.

"ನೀವು ಸುಳ್ಳು ಹೇಳುತ್ತಿದ್ದೀರಿ. ಪ್ರಧಾನಿ ಮೋದಿಗೆ ಇಂದಿರಾ ಗಾಂಧಿಯವರಂತೆ ಧೈರ್ಯವಿದ್ದರೆ, ಅವರು ಇಲ್ಲಿ ನಿಂತು ಡೊನಾಲ್ಡ್ ಟ್ರಂಪ್, ನೀವು ಸುಳ್ಳುಗಾರ ಎಂದು ಹೇಳಲಿ" ಎಂದು ಸವಾಲು ಹಾಕಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತದ ಚುನಾವಣಾ ವ್ಯವಸ್ಥೆಯ ವಿಶ್ವಾಸಾರ್ಹತೆ ಬಗ್ಗೆ ಜಾಗತಿಕವಾಗಿ ಅತ್ಯುತ್ತಮ ಸ್ಪಷ್ಟ ಅಭಿಪ್ರಾಯ- ಟ್ರಂಪ್ ಹೇಳಿಕೆ ಬೆನ್ನಲ್ಲೇ MEA ಪ್ರತಿಕ್ರಿಯೆ!

ಮಾಜಿ ಸಚಿವ ಬಿ. ಸಿ. ನಾಗೇಶ್ ನಿಧನ: ನಾಳೆ ತಿಪಟೂರಿನಲ್ಲಿ ಅಂತ್ಯಕ್ರಿಯೆ!

ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ ನಕಲಿ ಔಷಧಿ ಮರುಪ್ಯಾಕಿಂಗ್ ಬೃಹತ್ ಜಾಲ ಪತ್ತೆ: 5 ಕೋಟಿ ರೂ. ಮೌಲ್ಯದ ವಸ್ತುಗಳು ವಶಕ್ಕೆ!

ಪಸಿಂದು ಗೋಲ್ಡನ್ ಡಕೌಟ್: ಆಡಿದ 2ನೇ ಪಂದ್ಯದಲ್ಲೇ ಕುಂಬ್ಳೆ ದಾಖಲೆ ಸರಿಗಟ್ಟಿದ Team India ಯುವ ಸ್ಪಿನ್ನರ್ ಮಾನವ್ ಸುತಾರ್!

ದೇವೇಗೌಡರ ಕೂಸನ್ನು ಹಾದಿ ತಪ್ಪಿಸಿ ಯಾರಪ್ಪನಿಗೆ ಕೊಡಲು ಹೊರಟಿದ್ದೀರಿ ಮಿಸ್ಟರ್ ಡಿ.ಕೆ. ಶಿವಕುಮಾರ್? ತಾಕತ್ ಇದ್ರೆ ಚರ್ಚೆಗೆ ಬನ್ನಿ, ಕುಮಾರಸ್ವಾಮಿ ಸವಾಲು!